Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಮೀನಿಗೆ ಏಕಾಏಕಿ ಅರಣ್ಯ ಇಲಾಖೆ...

ಜಮೀನಿಗೆ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ: ಕಾಫಿ ಗಿಡಗಳು ನಾಶ

ಹೆಬ್ಬೆಟ್ಟಗೇರಿ ಗ್ರಾಮಸ್ಥರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ26 Nov 2020 11:21 PM IST
share
ಜಮೀನಿಗೆ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ: ಕಾಫಿ ಗಿಡಗಳು ನಾಶ

ಮಡಿಕೇರಿ ನ.26 : ಕಳೆದ ಹಲವು ವರ್ಷಗಳಿಂದ ಕಾಫಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತಿದ್ದ ಜಮೀನಿಗೆ ಏಕಾಏಕಿ ಅರಣ್ಯ ಅಧಿಕಾರಿಗಳು ದಾಳಿ ಮಾಡಿ ಫಸಲು ನೀಡುತ್ತಿರುವ ಗಿಡಗಳನ್ನು ನಾಶ ಮಾಡಿರುವ ಘಟನೆ ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. 

ಗಾಳೀಬೀಡು ಸಮೀಪದ ಹೆಬ್ಬೆಟ್ಟಗೇರಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ತಬ್ರ ಕಾಲೋನಿಯಲ್ಲಿ ಸುಮಾರು 40ಕ್ಕೂ ಅಧಿಕ ಕುಟುಂಬಗಳು ಕಳೆದ ಹಲವು ವರ್ಷಗಳಿಂದ ವಾಸವಾಗಿವೆ. ಕೆಲವು ಕುಟುಂಬಗಳು ಸರ್ಕಾರಿ ಜಮೀನಿನಲ್ಲಿ ಸಣ್ಣ ಪ್ರಮಾಣದಲ್ಲಿ ಕಾಫಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರೆ, ಹಲವು ಕುಟುಂಬಗಳು ಹಕ್ಕುಪತ್ರ ಪಡೆದು ವಾಸವಾಗಿದ್ದಾರೆ. ಯಾವುದೇ ಮಾಹಿತಿ ನೀಡದೆ ಇಲ್ಲಿನ 4-5 ಕುಟುಂಬಗಳ ತೋಟಕ್ಕೆ ನುಗ್ಗಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಾಏಕಿ ಕಾಫಿಗಿಡಗಳನ್ನು ನಾಶ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ಮಂಗಳವಾರ ಇಲ್ಲಿನ ಕೆಲವು ನಿವಾಸಿಗಳ ಬಳಿ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ತೋಟಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಿದ್ದರು. ಆದರೆ, ಬುಧವಾರ ಬೆಳಗ್ಗೆಯೇ ದಾಳಿ ಮಾಡಿದ ಸಿಬ್ಬಂದಿಗಳು ಕಾಫಿ, ಕರಿಮೆಣಸು, ವಿವಿಧ ಹಣ್ಣುಗಳ ಗಿಡವನ್ನು ನಾಶ ಮಾಡಿದ್ದಾರೆ. ಗುಡ್ಡ ಪ್ರದೇಶದಲ್ಲಿ ನೀರಿನ ಕೊರತೆಯ ನಡುವೆ ಕಷ್ಟಪಟ್ಟು ಬೆಳೆಯಲಾಗಿದ್ದ ಗಿಡಗಳನ್ನು ಕಿತ್ತು ಹಾಕಲಾಗಿದೆ. ಗುರುವಾರ ಮತ್ತೆ ಎಸಿಎಫ್ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂದರ್ಭ ಗ್ರಾಮಸ್ಥರು ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ. ತಹಶೀಲ್ದಾರ್ ರನ್ನು ಕರೆಸಿ ಪರಿಶೀಲನೆ ನಡೆಸಲಾಗುವುದು ಎಂದು ಎಸಿಎಫ್ ಪ್ರತಿಕ್ರಿಯಿಸಿದ್ದು, ಇದ್ದ ಗಿಡಗಳನ್ನೂ ನಾಶ ಮಾಡಿದ ಮೇಲೆ ಪರಿಶೀಲನೆ ಮಾಡುವುದು ಯಾಕೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. 

ನಮಗೆ ನ್ಯಾಯ ದೊರಕಬೇಕಿದ್ದು, ಇಲ್ಲಿಯವರೆಗೆ ಕಷ್ಟಪಟ್ಟು ಬೆಳೆಸಿದ ಕಾಫಿ ಗಿಡಗಳನ್ನು ನಾಶ ಮಾಡಿದ್ದಕ್ಕೆ ಸೂಕ್ತ ಪರಿಹಾರವನ್ನು ಅರಣ್ಯ ಇಲಾಖೆಯೇ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

''ಅರಣ್ಯ ಇಲಾಖೆಯಿಂದ ಕಿರುಕುಳ''
ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಸಿ ಮತ್ತು ಡಿ ಭೂಮಿ ಆಗಿದ್ದು, ಕಂದಾಯ ಇಲಾಖೆ ಪ್ಲಾಂಟೇಷನ್‍ಗೆ ಮಾತ್ರ ಅರಣ್ಯ ಇಲಾಖೆಗೆ ಜಾಗ ನೀಡಿತ್ತು. ಸದ್ಯ ಜಾಗ ಕಂದಾಯ ಇಲಾಖೆ ಸುಪರ್ದಿಯಲ್ಲಿದೆ. ಅಲ್ಲಿ ಬಡವರು ಕೃಷಿ ಮಾಡಿಕೊಂಡಿದ್ದು, ಫಾರಂ ನಂ. 50, 53, 57 ಅರ್ಜಿಗಳನ್ನು ಸಲ್ಲಿಸಿದರೂ ಏಕಾಏಕಿ ಗಿಡಗಳನ್ನು ನಾಶಪಡಿಸಿರುವುದು ಸರಿಯಲ್ಲ. ಕೃಷಿಕರಿಗೆ ಸೂಕ್ತ ನ್ಯಾಯ ಒದಗಿಸುವುದರೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.
-ಕೊಕ್ಕಲೇರ ಅಯ್ಯಪ್ಪ, ಮಾಜಿ ಅಧ್ಯಕ್ಷರು, ಕೆ.ನಿಡುಗಣೆ ಗ್ರಾ.ಪಂ

ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ನಮ್ಮ ನೆಡುತೋಪು ಇದೆ. ಪ್ಲಾಂಟೇಷನ್ ಇರುವುದರಿಂದ ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವುಗೊಳಿಸಲಾಗಿದೆ. 
-ಪ್ರಭಾಕರನ್, ಡಿಎಫ್‍ಓ, ಮಡಿಕೇರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X