Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆ ಆರಂಭಿಸುವ ಬಗ್ಗೆ ಸರಕಾರದಿಂದಲೇ...

ಶಾಲೆ ಆರಂಭಿಸುವ ಬಗ್ಗೆ ಸರಕಾರದಿಂದಲೇ ವಿನಾಕಾರಣ ಗೊಂದಲ: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ26 Nov 2020 11:51 PM IST
share
ಶಾಲೆ ಆರಂಭಿಸುವ ಬಗ್ಗೆ ಸರಕಾರದಿಂದಲೇ ವಿನಾಕಾರಣ ಗೊಂದಲ: ಎಚ್.ವಿಶ್ವನಾಥ್

ಮಡಿಕೇರಿ, ನ.26: ರಾಜ್ಯದಲ್ಲಿ ಶಾಲೆಗಳ ಆರಂಭಿಸುವ ವಿಚಾರ ಕುರಿತು ಸರಕಾರವೇ ವಿನಾಕಾರಣ ಗೊಂದಲ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. 

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಶಾಲೆ ಆರಂಭಿಸಬೇಕೋ ಬೇಡವೋ ಎನ್ನೋದು ಪೋಷಕರು, ಶಿಕ್ಷಕರಿಗೆ ಬಿಟ್ಟ ವಿಚಾರ. ಸರ್ಕಾರ ಸುಮ್ಮನೆ ಯಾರೋ ಅಧಿಕಾರಗಳ ಕೂರಿಸಿಕೊಂಡು ಸಭೆ ಮಾಡಿದರೆ ಆಗಲ್ಲ ಎಂದು ಹೇಳಿದರು.

ಖಾಸಗಿ ಶಾಲೆಗಳು ಶುಲ್ಕ ಪಡೆಯಲು ಒತ್ತಾಯ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ವಿಶ್ವನಾಥ್, ಖಾಸಗಿ ಶಾಲೆಗಳು ಸರ್ಕಾರ ಅಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಅಧೀನದಲ್ಲಿದೆ. ಅವರನ್ನು ಸ್ವಲ್ಪ ಅದ್ದು ಬಸ್ತಿನಲ್ಲಿಡಬೇಕು, ಎಲ್ಲಾ ಸಂದರ್ಭದಲ್ಲಿ ಅವರ ಖಜಾನೆ ತುಂಬಬೇಕೆಂದರೆ ಆಗಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ವಿರುದ್ಧ ಅಸಮಾಧಾನ ಹೊರಹಾಕಿದರು.

ರಾಜ್ಯ ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಆಕಾಂಕ್ಷಿಗಳ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್, ಯಾರಿಗೆ ಸಚಿವ ಸ್ಥಾನ ಸಿಗಬೇಕು ಎನ್ನೋದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾವ್ಯಾರು ಸಚಿವ ಸ್ಥಾನ ಬೇಕು ಅಂತ ಬಂದವರಲ್ಲ, ರಾಜ್ಯದಲ್ಲಿ ಹೊಸ ಅಲೆಯ ಸರ್ಕಾರ ಬರಬೇಕು ಎನ್ನುವುದಿತ್ತು. ಹೀಗಾಗಿ 17 ಜನರು ಬಂದೆವು, ಅವರಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ, ಇನ್ನು ಕೆಲವರು ಆಕಾಂಕ್ಷಿಗಳಿದ್ದಾರೆ ಎಂದು ವಿಶ್ವನಾಥ್ ಹೇಳಿದರು. 

ಪಕ್ಷದಲ್ಲಿ ಕೆಲವರನ್ನು ಕಡಿಗಣಿಸಲಾಗುತ್ತಿದೆ ಎಂಬ ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವೆಲ್ಲರೂ ಸ್ನೇಹಿತರು. ಆ ಸಂದರ್ಭ ಸಂಘಟಿತರಾಗಿ ಹೋರಾಟ ಮಾಡಿಕೊಂಡು ಬಂದವರು. ಈಗ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನೋ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಯಾರ್ಯಾರನ್ನು ಕಡೆಗಣಿಸಲಾಗುತ್ತಿದೆಯೋ ಯಾರಿಗೆ ಗೊತ್ತು ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. 

ರಾಜ್ಯದಲ್ಲಿ ವಿವಿಧ ಸಮುದಾಯಗಳು ನಿಗಮ ಸ್ಥಾಪನೆಗೆ ಹೋರಾಡುತ್ತಿರುವ ವಿಚಾರದ ಕುರಿತು ಮಾತನಾಡಿದ ವಿಶ್ವನಾಥ್, ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕಾಗಿದೆ. ಸಂಬಂಧಿಸಿದವರೊಂದಿಗೆ ಸಮ ಚಿತ್ತದಿಂದ ಚರ್ಚೆ ಸಂವಾದ ನಡೆಸಬೇಕಾಗಿದೆ. ಆ ಸಮುದಾಯಗಳ ಸಾಂಸ್ಕೃತಿಕ ಅಧ್ಯಯನ ನಡೆಸಬೇಕಾಗಿದೆ. ಆ ಬಳಿಕ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X