Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಂತ್ರ್ಯವು ಕೆಲವು ಜನರಿಗೆ ಮಾತ್ರ...

ಸ್ವಾತಂತ್ರ್ಯವು ಕೆಲವು ಜನರಿಗೆ ಮಾತ್ರ ಸಿಗುವ ಉಡುಗೊರೆಯಲ್ಲ: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Nov 2020 9:37 PM IST
share
ಸ್ವಾತಂತ್ರ್ಯವು ಕೆಲವು ಜನರಿಗೆ ಮಾತ್ರ ಸಿಗುವ ಉಡುಗೊರೆಯಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.11: ಜನತೆಯ ವೈಯಕ್ತಿಕ ಸ್ವಾತಂತ್ರ್ಯವನ್ನು ಸಂರಕ್ಷಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ನ್ಯಾಯಾಧೀಶರುಗಳಿಗೆ ಸ್ಪಷ್ಟವಾದ ಕರೆ ನೀಡಿದ್ದು, ಸ್ವಾತಂತ್ರ್ಯವೆಂಬುದು ಕೇವಲ ‘‘ಕೆಲವೇ ಮಂದಿಗೆ ಮಾತ್ರವೇ ದೊರೆಯುವ ಉಡುಗೊರೆಯಲ್ಲ’’ ಎಂದು ಹೇಳಿದೆ.

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿವಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರ ಜಾಮೀನು ಬಿಡುಗಡೆಯ ಅವಧಿಯನ್ನು, ಅವರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೆ ವಿಸ್ತರಿಸಿ ಆದೇಶ ನೀಡಿದ ಸಂದರ್ಭ ಸುಪ್ರೀಂಕೋರ್ಟ್ ಈ ಆಭಿಪ್ರಾಯ ವ್ಯಕ್ತಪಡಿಸಿದೆ.

 ಹಣ ಮತ್ತಿತರ ಸಂಪನ್ಮೂಲಗಳಿಲ್ಲದ ಕಾರಣ ಹಲವಾರು ಮಂದಿ ಜನಸಾಮಾನ್ಯರು ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್‌ನ ಮೆಟ್ಟಲೇರಲು ಸಾಧ್ಯವಾಗದೆ, ವಿಚಾರಣಾಧೀನ ಕೈದಿಗಳಾಗಿ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ಒಂದೇ ಒಂದು ದಿನ ಅವರನ್ನು ಸ್ವಾತಂತ್ರ್ಯದಿಂದ ವಂಚಿತ ರನ್ನಾಗಿಸುವುದು ತುಂಬಾ ಅಧಿಕವಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ ಹಾಗೂ ಇಂದು ಮಲ್ಹೋತ್ರಾ ಅವರು ಶುಕ್ರವಾರ ನೀಡಿದ ಆದೇಶವೊಂದರಲ್ಲಿ ತಿಳಿಸಿದ್ದಾರೆ.

 ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ ಜಾಮೀನು ಎಂಬುದು ಮಾನವತೆಯ ಗಂಭೀರವಾದ ಅಭಿವ್ಯಕ್ತಿಯಾಗಿದೆ ಎಂದು ನ್ಯಾಯಮೂರ್ತಿ ಚಂದ್ರಚೂಡ ಅವರು ಅಭಿಪ್ರಾಯಿಸಿದ್ದಾರೆ. ಆಡಳಿತವು, ಜನಸಾಮಾನ್ಯರನ್ನು ಶೋಷಣೆಗೆ ಒಳಪಡಿಸಲು ಕ್ರಿಮಿನಲ್ ಕಾನೂನನ್ನು ಬಳಸಿಕೊಳ್ಳುವುದಕ್ಕೆ ಅವಕಾಶ ನೀಡಕೂಡದು ಎಂದು ಅವರು ಎಚ್ಚರಿಕೆ ನೀಡಿದರು.

 ‘‘ಸ್ವಾತಂತ್ರ್ಯವೆಂಬುದು ನಾಗರಿಕರ ಜಾಗೃತಿಯಿಂದ, ಮಾಧ್ಯಮಗಳ ಗದ್ದಲದಿಂದ ಉಳಿದುಕೊಳ್ಳುತ್ತದೆ. ನ್ಯಾಯಾಲಯದ ಧೂಳು ತುಂಬಿದ ಪಡಸಾಲೆಗಳು ಕಾನೂನಿನ ಪ್ರಭುತ್ವವನ್ನು ಜೀವಂತವಾಗಿಡುತ್ತದೆ. ಆದಾಗ್ಯೂ, ಈ ಅಂಶಗಳಲ್ಲಿ ಯಾವುದಾದರೂ ಒಂದರ ಕೊರತೆ ಉಂಟಾದರೂ ಸ್ವಾತಂತ್ರ್ಯಕ್ಕೆ ಹಾನಿಯಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

 ವೈಯಕ್ತಿಕ ಸ್ವಾತಂತ್ರ್ಯದಿಂದ ವಂಚನೆಗೊಳಗಾಗುವುದರಿಂದ ಜನರನ್ನು ರಕ್ಷಿಸಲು ನ್ಯಾಯಾಲಯಗಳು ಮುಂಚೂಣಿಯಲ್ಲಿ ಕಾರ್ಯಾಚರಿಸುತ್ತವೆ. ಆದರೆ ಹಲವಾರು ಮಂದಿ ವಿಚಾರಣಾಧೀನ ಕೈದಿಗಳ ಜಾಮೀನು ಅರ್ಜಿಗಳು ಒಂದು ಕೋರ್ಟಿನಿಂದ ಇನ್ನೊಂದು ಕೋರ್ಟಿಗೆ ಅಲೆದಾಡುತ್ತಲೇ ಇರುತ್ತವೆ ಎಂದು ಅವರು ವಿಷಾದಿಸಿರು.

 ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ 91,568 ಜಾಮೀನು ಅರ್ಜಿಗಳು ವಿಚಾರಣೆಗೆ ಬಾಕಿಯುಳಿದಿದ್ದರೆ, 1.96 ಜಾಮೀನು ಅರ್ಜಿಗಳು ಜಿಲ್ಲಾ ನ್ಯಾಯಾಲಯಗಳಲ್ಲಿ ಅಲಿಕೆಗಾಗಿ ಕಾಯುತ್ತಿವೆ ಎಂದು ಚಂದ್ರಚೂಡ್ ಅವರು ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X