Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಯನಿರತ ಪತ್ರಕರ್ತರಿಗೆ ಎರಡನೇ ಅತ್ಯಂತ...

ಕಾರ್ಯನಿರತ ಪತ್ರಕರ್ತರಿಗೆ ಎರಡನೇ ಅತ್ಯಂತ ಅಪಾಯಕಾರಿ ದೇಶ ಯಾವುದು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ28 Nov 2020 10:36 PM IST
share
ಕಾರ್ಯನಿರತ ಪತ್ರಕರ್ತರಿಗೆ ಎರಡನೇ ಅತ್ಯಂತ ಅಪಾಯಕಾರಿ ದೇಶ ಯಾವುದು ಗೊತ್ತಾ?

ಹೊಸದಿಲ್ಲಿ,ನ.28: ಕೋವಿಡ್-19 ಪಿಡುಗಿನಿಂದ ತತ್ತರಿಸಿರುವ ಭಾರತದ ಮುಖ್ಯವಾಹಿನಿ ಮಾಧ್ಯಮ ರಂಗವು ಈ ವರ್ಷ ಕಳವಳಕಾರಿ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆಗಳಿಗೆ ಸಾಕ್ಷಿಯಾಗಿದೆ. 2020ನೇ ವರ್ಷವು ಕೊನೆಗೊಳ್ಳುತ್ತಿರುವಂತೆ ಭಾರತವು ವಿಶ್ವದಲ್ಲಿ ಮೆಕ್ಸಿಕೋದ ಬಳಿಕ ವೃತ್ತಿಪರ ಪತ್ರಕರ್ತರಿಗೆ ಅತ್ಯಂತ ಅಪಾಯಕಾರಿ ದೇಶವಾಗಿ ಪರಿಣಮಿಸಿದೆ. ವರ್ಷದ ಉತ್ತರಾರ್ಧದಲ್ಲಂತೂ ಸರಣಿಯೋಪಾದಿಯಲ್ಲಿ ಪತ್ರಕರ್ತರ ಕೊಲೆಗಳು ನಡೆದಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ಹಕ್ಕುಗಳ ಸಂಸ್ಥೆ ಪ್ರೆಸ್ ಎಂಬ್ಲೆಮ್ ಕ್ಯಾಂಪೇನ್ (ಪಿಇಸಿ) ಬೆಟ್ಟು ಮಾಡಿದೆ.

 ಪತ್ರಕರ್ತರ ಕೊಲೆ ಸರಣಿಯಲ್ಲಿ ತಮಿಳು ಪತ್ರಿಕೆ ‘ವಿಳಂಗಂ’ಗಾಗಿ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಪತ್ರಕರ್ತ ಜಿ.ನಾಗರಾಜ್(45) ಇತ್ತೀಚಿನ ಸೇರ್ಪಡೆಯಾಗಿದ್ದಾರೆ. ನ.22ರಂದು ತಮಿಳುನಾಡಿನ ಹೊಸೂರಿನಲ್ಲಿ ಗೂಂಡಾಗಳ ಗುಂಪೊಂದು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದೆ. ನಾಗರಾಜ್ ಅಖಿಲ ಭಾರತ ಹಿಂದು ಮಹಾಸಭಾದೊಂದಿಗೂ ಗುರುತಿಸಿಕೊಂಡಿದ್ದರು.

 ‘2020,ಜ.1ರಿಂದ ಈವರೆಗೆ ವಿಶ್ವಾದ್ಯಂತ 80 ಪತ್ರಕರ್ತರ ಹತ್ಯೆಗಳ ಜೊತೆಗೆ 56 ದೇಶಗಳಲ್ಲಿ ಕೊರೋನ ಸಂಬಂಧಿ 479 ಮಾಧ್ಯಮ ಪ್ರತಿನಿಧಿಗಳ ಸಾವುಗಳನ್ನು ನಾವು ದಾಖಲಿಸಿಕೊಂಡಿದ್ದೇವೆ. ಪತ್ರಕರ್ತರು ತಳಮಟ್ಟದಿಂದ ಮಾಹಿತಿಗಳನ್ನು ಒದಗಿಸುವ ಕಾರ್ಯವನ್ನು ಮಂದುವರಿಸಬೇಕಿರುವುದರಿಂದ ವಿಶ್ವಾದ್ಯಂತ ಪತ್ರಕರ್ತರ ಸುರಕ್ಷತೆಯು ಅಪಾಯದಲ್ಲಿದೆ. ಎಲ್ಲ ಮೃತ ಪತ್ರಕರ್ತರ ಕುಟುಂಬಗಳಿಗೆ ನಾವು ಸಂತಾಪಗಳನ್ನು ಸಲ್ಲಿಸುತ್ತಿದ್ದೇವೆ ’ಎಂದು ಪಿಇಸಿಯ ಮಹಾ ಕಾರ್ಯದರ್ಶಿ ಬ್ಲೇಸಿ ಲೆಂಪೆನ್ ಹೇಳಿದ್ದಾರೆ.

ನ.16ರಂದು ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಗ್ರಾಮೀಣ ಪತ್ರಕರ್ತ ಉದಯ ಪಾಸ್ವಾನ್ ಮತ್ತು ಅವರ ಪತ್ನಿ ಶೀತಲಾ ಪಾಸ್ವಾನ್ ಅವರ ಹತ್ಯೆ ನಡೆದಿತ್ತು. ಇದಕ್ಕೂ ಮುನ್ನ ನ.12ರಂದು ಉತ್ತರ ಪ್ರದೇಶದ ಇನ್ನೋರ್ವ ಪತ್ರಕರ್ತ ಸೂರಜ್ ಪಾಂಡೆ ಅವರ ಶವವು ಸದರ ಕೋತ್ವಾಲಿ ಪ್ರದೇಶದಲ್ಲಿ ರೈಲು ಹಳಿಗಳ ಮೇಲೆ ಪತ್ತೆಯಾಗಿತ್ತು. ಉನ್ನಾವೊದಲ್ಲಿಯ ಅವರ ಕುಟುಂಬ ಸದಸ್ಯರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಅಸ್ಸಾಮಿನ ಕಾಕೋಪಥರ್‌ನ ಟಿವಿ ಪತ್ರಕರ್ತ ಪರಾಗ್ ಭುಯಾನ್ ಅವರು ನ.11ರಂದು ನಿಗೂಢ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ವಶಪಡಿಸಿಕೊಂಡಿರುವ ಪೊಲೀಸರು ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಭೋಪಾಲದ ಟಿವಿ ವರದಿಗಾರ ಸೈಯದ್ ಆದಿಲ್ ವಹಾಬ್ ಅವರನ್ನು ನ.8ರಂದು ಅರಣ್ಯ ಪ್ರದೇಶವೊಂದರಲ್ಲಿ ಕೊಲೆ ಮಾಡಲಾಗಿದ್ದರೆ,ಅದೇ ದಿನ ತಮಿಳುನಾಡಿನ ಕಾಂಚೀಪುರಮ್‌ನಲ್ಲಿ ತಮಿಳು ಟಿವಿ ಪತ್ರಕರ್ತ ಇಸ್ರಾವೆಲ್ ಮೋಸಸ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಇವು ಕೆಲವೇ ಘಟನೆಗಳಷ್ಟೇ. ಇವುಗಳ ಹೊರತಾಗಿಯೂ ಭಾರತದಲ್ಲಿ ಹಲವಾರು ಪತ್ರಕರ್ತರು ಹತ್ಯೆಯಾಗಿದ್ದಾರೆ.

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತವು ಈಗ ಕಾರ್ಯನಿರತ ಪತ್ರಕರ್ತರ ಪಾಲಿಗೆ ದ್ವಿತೀಯ ಅತ್ಯಂತ ಅಪಾಯಕಾರಿ ದೇಶವಾಗಿದೆ. ಈ ವರ್ಷ ಈವರೆಗೆ 12 ಪತ್ರಕರ್ತರ ಹತ್ಯೆಗಳು ದೃಢಪಟ್ಟಿವೆ. ಕಳೆದ ವರ್ಷ ಭಾರತದಲ್ಲಿ ಒಂಭತ್ತು ಸೇರಿದಂತೆ ವಿಶ್ವಾದ್ಯಂತ 75 ಪತ್ರಕರ್ತರು ಕೊಲೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X