Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲು...

ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲು ರೈತರ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ29 Nov 2020 3:42 PM IST
share
ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಲು ರೈತರ ನಿರಾಕರಣೆ

ಹೊಸದಿಲ್ಲಿ, ನ.29: ಗೊತ್ತುಪಡಿಸಿದ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಬೇಕು ಎಂಬ ಪೂರ್ವ ಷರತ್ತಿನೊಂದಿಗೆ ಕೇಂದ್ರ ಸರಕಾರ ರೈತರ ಮುಂದಿರಿಸಿದ ಮಾತುಕತೆಯ ಪ್ರಸ್ತಾವವನ್ನು ರೈತರು ತಿರಸ್ಕರಿಸಿದ್ದು ದಿಲ್ಲಿ ಪ್ರವೇಶಿಸುವ ಐದು ರಸ್ತೆಗಳಲ್ಲಿ ದಿಗ್ಭಂಧನ ಮುಂದುವರಿಯಲಿದೆ ಎಂದಿದ್ದಾರೆ.

  ಸರಕಾರ ಪೂರ್ವ ಷರತ್ತು ವಿಧಿಸದೆ ಮುಕ್ತ ಹೃದಯದೊಂದಿಗೆ ಮಾತುಕತೆಯ ಪ್ರಸ್ತಾಪ ಮುಂದುವರಿಸಿದರೆ ಆ ಬಗ್ಗೆ ಪರಿಶೀಲಿಸಬಹುದು ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ರವಿವಾರ ಬೆಳಿಗ್ಗೆ ಸಭೆ ಸೇರಿದ ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್ ಸಹಿತ ರೈತ ಸಂಘಟನೆಯ 30ಕ್ಕೂ ಹೆಚ್ಚು ಮುಖಂಡರನ್ನೊಳಗೊಂಡ ಸಮಿತಿ , ಪೂರ್ವಷರತ್ತಿನ ಸಹಿತದ ಪ್ರಸ್ತಾವನೆಯನ್ನು ತಿರಸ್ಕರಿಸಲು ನಿರ್ಧರಿಸಿದೆ.

    ದಿಲ್ಲಿಯಲ್ಲಿ ಬೃಹತ್ ಸಂಖ್ಯೆಯ ಪೊಲೀಸರನ್ನು ನಿಯೋಜಿಸುವ ಮೂಲಕ ಪ್ರತಿಭಟನಾ ನಿರತ ರೈತರ ಮತ್ತು ದಿಲ್ಲಿಯ ಜನತೆಯ ಮನದಲ್ಲಿ ಭೀತಿಯ ವಾತಾವರಣ ಸೃಷ್ಟಿಸಲಾಗಿದೆ ಎಂದು ರೈತರು ಹೇಳಿದ್ದಾರೆ.

ಕೇಂದ್ರ ಸರಕಾರ ರೈತರ ಮುಖಂಡರೊಂದಿಗೆ ಡಿಸೆಂಬರ್ 3ರಂದು ಮಾತುಕತೆಗೆ ಸಿದ್ಧವಿದೆ. ಅದಕ್ಕೂ ಮೊದಲು ಮಾತುಕತೆ ನಡೆಯಬೇಕೆಂದು ರೈತರು ಬಯಸಿದರೆ, ಅವರು ನಿಯೋಜಿತ ಸ್ಥಳಕ್ಕೆ ತೆರಳಿ ಪ್ರತಿಭಟನೆ ಮುಂದುವರಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದರು.

‘ಶಾ ಮುಂದಿರಿಸಿದ ಷರತ್ತು ರೈತರಿಗೆ ಮಾಡಿದ ಅವಮಾನವಾಗಿದೆ. ಬುರಾರಿಯ ನಿರಂಕಾರಿ ಕ್ರೀಡಾಂಗಣ ಪಾರ್ಕ್ ಅಲ್ಲ, ಅದೊಂದು ತೆರೆದ ಜೈಲು’ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನ ಪಂಜಾಬ್ ಘಟಕದ ಅಧ್ಯಕ್ಷ ಸುರ್ಜೀತ್ ಎಸ್ ಫುಲ್ ಹೇಳಿದ್ದಾರೆ.

 ‘ಸರಕಾರ ಮಾತುಕತೆಗೆ ಆಹ್ವಾನಿಸುವಾಗ ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಬೇಕು. ಷರತ್ತು ವಿಧಿಸುವುದಲ್ಲ ’ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಪಂಜಾಬ್ ಘಟಕಾಧ್ಯಕ್ಷ ದರ್ಶನ್ ಪಾಲ್ ಹೇಳಿದ್ದಾರೆ. ಷರತ್ತು ವಿಧಿಸುವುದನ್ನು ಸರಕಾರ ನಿಲ್ಲಿಸಬೇಕು. ಮಾತುಕತೆ ಎಂದರೆ ‘ಕಾಯ್ದೆಯಿಂದ ಆಗುವ ಪ್ರಯೋಜನಗಳ ಬಗ್ಗೆ ರೈತರಿಗೆ ವಿವರಿಸುವುದು’ ಎಂದು ಭಾವಿಸುವುದನ್ನೂ ನಿಲ್ಲಿಸಬೇಕು. ಯಾವುದೇ ಪ್ರಸ್ತಾವನೆಯನ್ನು ನೇರವಾಗಿ ಹೇಳಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಪ್ರತಿನಿಧಿ ಹೇಳಿದ್ದಾರೆ.

ಈ ಮಧ್ಯೆ, ಶನಿವಾರ ಬುರಾರಿಯ ನಿರಂಕಾರಿ ಮೈದಾನಕ್ಕೆ ತೆರಳಿರುವ ಕೆಲವು ರೈತರು ಅಲ್ಲಿ ರವಿವಾರ ಪ್ರತಿಭಟನೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

ಕ್ರೀಡಾಂಗಣದಲ್ಲೇ ಬಂಧನದಲ್ಲಿಡುವ ಸಾಧ್ಯತೆ: ರೈತರ ಆತಂಕ

 ದಿಲ್ಲಿಯ ಅತ್ಯಂತ ದೊಡ್ಡ ಮೈದಾನಗಳಲ್ಲಿ ಒಂದಾಗಿರುವ ಉತ್ತರ ದಿಲ್ಲಿಯ ಸಂತ ನಿರಂಕಾರಿ ಮೈದಾನದಲ್ಲಿ ಪ್ರತಿಭಟನೆ ಮುಂದುವರಿಸುವಂತೆ ದಿಲ್ಲಿಯ ಜಂಟಿ ಪೊಲೀಸ್ ಆಯುಕ್ತ ಸುರೇಂದ್ರ ಸಿಂಗ್ ಯಾದವ್ ಶನಿವಾರ ರೈತರಲ್ಲಿ ಮನವಿ ಮಾಡಿಕೊಂಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೈತರು, ತಮ್ಮನ್ನು ಉಪಾಯದಿಂದ ಮೈದಾನಕ್ಕೆ ಕರೆಸಿಕೊಂಡು, ಮೈದಾನದಲ್ಲೇ ಬಂಧನದಲ್ಲಿಡುವ ತಂತ್ರ ಇದಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಆಯುಕ್ತರ ಆಹ್ವಾನವನ್ನು ತಿರಸ್ಕರಿಸಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, ಪ್ರತಿಭಟನೆ ನಡೆಸುತ್ತಿರುವವರು ದಿಲ್ಲಿಯ ಅತಿಥಿಗಳು ಎಂದಿದ್ದಾರೆ.

ಖಟ್ಟರ್ ಹೇಳಿಕೆಗೆ ಅಕಾಲಿದಳ ಟೀಕೆ

ರೈತರ ಪ್ರತಿಭಟನೆಯಲ್ಲಿ ಖಲಿಸ್ತಾನ್ ಪ್ರತ್ಯೇಕತಾವಾದಿಗಳು ನುಸುಳಿರುವ ಬಗ್ಗೆ ತಮ್ಮ ಸರಕಾರಕ್ಕೆ ಮಾಹಿತಿ ದೊರಕಿದೆ ಎಂಬ ಹರ್ಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಹೇಳಿಕೆ ರೈತರಿಗೆ ಮಾಡಿರುವ ಅವಮಾನವಾಗಿದೆ ಎಂದು ಅಕಾಲಿ ದಳ ಟೀಕಿಸಿದೆ.

ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತರುವ ಮೂಲಕ ಪ್ರತಿಭಟನೆಯನ್ನು ನಿರ್ದಯವಾಗಿ ಹತ್ತಿಕ್ಕುವ ಹುನ್ನಾರ ಈ ಹೇಳಿಕೆಯ ಹಿಂದಿದೆ ಎಂದು ಅಕಾಲಿದಳ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X