Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಭೇಟಿಗೆ ಮುನ್ನ ಎರಡನೇ...

ಪ್ರಧಾನಿ ಮೋದಿ ಭೇಟಿಗೆ ಮುನ್ನ ಎರಡನೇ ಬಾರಿ ಕೊಳಗೇರಿ ನೆಲಸಮ: 60 ಕುಟುಂಬಗಳು ಕಂಗಾಲು

ವಾರ್ತಾಭಾರತಿವಾರ್ತಾಭಾರತಿ29 Nov 2020 9:13 PM IST
share
ಪ್ರಧಾನಿ ಮೋದಿ ಭೇಟಿಗೆ ಮುನ್ನ ಎರಡನೇ ಬಾರಿ ಕೊಳಗೇರಿ ನೆಲಸಮ: 60 ಕುಟುಂಬಗಳು ಕಂಗಾಲು

ಹೊಸದಿಲ್ಲಿ,ನ.29: ದೇವ ದೀಪಾವಳಿ ಸಂದರ್ಭದಲ್ಲಿ ತಮ್ಮ ಲೋಕಸಭಾ ಕ್ಷೇತ್ರವಾಗಿರುವ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯು ಕಳೆದ ಐದು ದಶಕಗಳಿಂದಲೂ ತಾತ್ಕಾಲಿಕ ಜೋಪಡಿಗಳಲ್ಲಿ ವಾಸವಿದ್ದ ಸುಮಾರು 60 ಕುಟುಂಬಗಳ ಪಾಲಿಗೆ ದುಃಸ್ವಪ್ನವಾಗಿ ಕಾಡಿದೆ. ಪ್ರಧಾನಿ ಮೋದಿ ಭೇಟಿಗೆ ಮುನ್ನ ಈ ಜೋಪಡಿಗಳನ್ನು ನೆಲಸಮಗೊಳಿಸಲಾಗಿದೆ. ನ.30ರಂದು ಪ್ರಧಾನಿಗಳ ಹೆಲಿಕಾಪ್ಟರ್ ಇಳಿಯಲಿರುವ ಗಂಗಾ ನದಿ ದಂಡೆಯ ಸುಜಾಬಾದ್ ಪ್ರದೇಶದಲ್ಲಿ ವಾಸವಿದ್ದ 250 ಜನರು ತಮ್ಮ ಜೋಪಡಿಗಳ ನೆಲಸಮದಿಂದಾಗಿ ಈ ವರ್ಷ ಎರಡನೇ ಸಲ ನಿರ್ವಸಿತರಾಗಿದ್ದಾರೆ. ಕಳೆದ ಫೆಬ್ರವರಿಯಲ್ಲಿ ದೀನದಯಾಳ ಉಪಾಧ್ಯಾಯ ಅವರ ಪ್ರತಿಮೆ ಅನಾವರಣಕ್ಕಾಗಿ ಮೋದಿ ವಾರಣಾಸಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿಯೂ ಅಧಿಕಾರಶಾಹಿಯ ಅಸಡ್ಡೆಯಿಂದಾಗಿ ಇದೇ ದುಸ್ಥಿತಿಯನ್ನು ಈ ನತದೃಷ್ಟರು ಅನುಭವಿಸಿದ್ದರು.

ಈ ಪೈಕಿ ಹೆಚ್ಚಿನವರು ದಲಿತ ವರ್ಗದ ಧಾರ್ಕರ್ ಅಥವಾ ಬಾನ್ಸ್‌ಫರ್ ಸಮುದಾಯಗಳಿಗೆ ಸೇರಿದವರಾಗಿದ್ದು,ತಮಗೆ ನೆನಪಿರುವಾಗಿನಿಂದಲೂ ಈ ಕೊಳಗೇರಿಯಲ್ಲಿ ವಾಸವಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಹೊಟ್ಟೆ ತುಂಬಿಸಿಕೊಳ್ಳಲು ಬಾಂಬೂ ಉತ್ಪನ್ನಗಳನ್ನು,ವಿಶೇಷವಾಗಿ ಬುಟ್ಟಿಗಳು ಮತ್ತು ಕೈ ಬೀಸಣಿಕೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.

‘ನಾನು ಹುಟ್ಟಿದ್ದು ಇಲ್ಲಿಯೇ. ನನ್ನ ಮತದಾರರ ಗುರುತಿನ ಚೀಟಿ,ಆಧಾರ್ ಎಲ್ಲವೂ ಇಲ್ಲಿಯೇ ನೋಂದಣಿಯಾಗಿವೆ. ಆದರೂ ಪ್ರತಿ ಬಾರಿಯೂ ಗಣ್ಯರ ಆಗಮನವಾದಾಗ ಪೊಲೀಸರು ಯಾವುದೇ ಸೂಚನೆ ನೀಡದೆ ಮೊದಲು ನಮ್ಮ ಜೋಪಡಿಗಳ ಮೇಲೆ ದಾಳಿ ನಡೆಸುತ್ತಾರೆ. ನಾವು ಪೊಲೀಸರ ಕೃಪೆಯಲ್ಲಿ ಬದುಕುವಂತಾಗಿದೆ ’ಎಂದು ಕೊಳಗೇರಿಯ ನಿವಾಸಿ ರಾಮವಿಲಾಸ್ ಅಳಲು ತೋಡಿಕೊಂಡರು.

ತಮ್ಮ ಜೋಪಡಿಗಳು ನೆಲಸಮಗೊಂಡಾಗಿನಿಂದ ಇಲ್ಲಿಯ ನಿವಾಸಿಗಳು ಬಯಲಿನಲ್ಲಿ ತೀವ್ರ ಚಳಿಯ ನಡುವೆ ವಾಸವಿದ್ದಾರೆ. ಕೆಲವರು ಸಮೀಪದ ಗ್ರಾಮಗಳಲ್ಲಿ ಅಥವಾ ನೆರೆಹೊರೆಯ ದೇವಸ್ಥಾನಗಳಲ್ಲಿ ಆಶ್ರಯ ಪಡೆದಿದ್ದಾರೆ.

ಈ ಕೊಳಗೇರಿಯು ಡುಮ್ರಿ-ಪಡಾವ್ ಹೆಲಿಪ್ಯಾಡ್ ರಸ್ತೆಯಲ್ಲಿದೆ. ಹೀಗಾಗಿ ಪ್ರತಿ ಬಾರಿ ಪ್ರಧಾನಿ ಇಲ್ಲಿ ಇಳಿದಾಗಲೂ ಅಧಿಕಾರಿಗಳು ಇಲ್ಲಿಯ ಜೋಪಡಿಗಳನ್ನು ನೆಲಸಮಗೊಳಿಸುತ್ತಾರೆ.

ಸ್ಥಳೀಯ ರಾಜಕೀಯ ಧುರೀಣರು ಮತ್ತು ಅಧಿಕಾರಿಗಳೂ ಈ ಕೊಳಗೇರಿ ನಿವಾಸಿಗಳ ಬೆಂಬಲಕ್ಕೆ ನಿಂತಿಲ್ಲ.

‘ಇಲ್ಲಿಯ ಜನರು ನಿರ್ವಸಿತಗೊಂಡರೆ ಅವರಿಗೆ ಪುನರ್ವಸತಿ ಕಲ್ಪಿಸುವಂತೆ ನಾವು ಎಲ್ಲ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಆದರೆ ನಮ್ಮನ್ನು ಯಾರೂ ಭೇಟಿಯಾಗಿಲ್ಲ. ಉಪವಿಭಾಗಾಧಿಕಾರಿಗಳು ಒಂದು ದಿನ ಸಮಯವನ್ನು ನೀಡಿದ್ದರಾದರೂ ಅವರೂ ನಮ್ಮನ್ನು ಭೇಟಿಯಾಗಲಿಲ್ಲ. ಜಿಲ್ಲಾಡಳಿತಕ್ಕೆ ನಾವು ಹಲವಾರು ಪತ್ರಗಳನ್ನು ಬರೆದಿದ್ದರೂ ಒಂದಕ್ಕೂ ಉತ್ತರವಿಲ್ಲ’ ಎಂದು ಆರೋಗ್ಯ ಮತ್ತು ನೈರ್ಮಲ್ಯ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಎನ್‌ಜಿಒ ಇನ್ನರ್ ವಾಯ್ಸ್ ಫೌಂಡೇಷನ್‌ನ ಸೌರಭ್ ಸಿಂಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X