Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಚ್‌ಎಂಸಿ ಚುನಾವಣೆ: ಬಿರುಸಿನ...

ಜಿಎಚ್‌ಎಂಸಿ ಚುನಾವಣೆ: ಬಿರುಸಿನ ಪ್ರಚಾರಕ್ಕೆ ಅಂತ್ಯ

ಡಿ.1ರಂದು ಮತದಾನ

ವಾರ್ತಾಭಾರತಿವಾರ್ತಾಭಾರತಿ29 Nov 2020 9:32 PM IST
share
ಜಿಎಚ್‌ಎಂಸಿ ಚುನಾವಣೆ: ಬಿರುಸಿನ ಪ್ರಚಾರಕ್ಕೆ ಅಂತ್ಯ

ಹೈದರಾಬಾದ್, ನ.29: ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್‌ಎಂಸಿ)ಯ ಚುನಾವಣೆಗಾಗಿ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರಕ್ಕೆ ರವಿವಾರ ಸಂಜೆ ತೆರೆಬಿದ್ದಿದ್ದು,ಡಿ.1ರ ಮತದಾನಕ್ಕೆ ವೇದಿಕೆ ಸಜ್ಜುಗೊಂಡಿದೆ.

24 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವ ಜಿಎಚ್‌ಎಂಸಿಯ 150 ವಾರ್ಡ್‌ಗಳಿಗಾಗಿ 1,122 ಅಭ್ಯರ್ಥಿಗಳು ಕಣದಲ್ಲಿದ್ದು,74.67 ಲಕ್ಷ ಮತದಾರರು ಇವರ ಹಣೆಬರಹವನ್ನು ನಿರ್ಧರಿಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರೆ, ಟಿಆರ್‌ಎಸ್‌ನ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು ತನ್ನ ಪಕ್ಷದ ಪ್ರಚಾರದ ಹೊಣೆಗಾರಿಕೆಯನ್ನು ವಹಿಸಿದ್ದರು.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಉತ್ತಮಕುಮಾರ್ ರೆಡ್ಡಿ ಮತ್ತು ಹಿರಿಯ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರೆ,ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಅವರ ಸೋದರ ಹಾಗೂ ಶಾಸಕ ಅಕ್ಬರುದ್ದೀನ್ ಉವೈಸಿ ಹಲವಾರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು.

ನ.28ರಂದು ಇಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನಗರದ ಅಭಿವೃದ್ಧಿಗಾಗಿ ತನ್ನ ಪಕ್ಷದ ಬದ್ಧತೆಗಳನ್ನು ಪ್ರಮುಖವಾಗಿ ಬಿಂಬಿಸಿದ್ದರು.

ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ ಮತ್ತು ಕಿಶನ್ ರೆಡ್ಡಿ,ಉ.ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿಯ ಪ್ರಮುಖ ನಾಯಕರಲ್ಲಿ ಸೇರಿದ್ದು, ಟಿಆರ್‌ಎಸ್‌ನ ‘ಕುಟುಂಬ ಆಡಳಿತ ’ ಮತ್ತು ಎಐಎಂಐಎಂ ಜೊತೆ ‘ರಹಸ್ಯ ’ಒಪ್ಪಂದದ ಮೇಲೆ ಗಮನವನ್ನು ಕೇಂದ್ರೀಕರಿಸಿದ್ದರು.

ಟಿಆರ್‌ಎಸ್ ಮತ್ತು ಬಿಜೆಪಿ ನಾಯಕರ ನಡುವಿನ ವಾಗ್ಯುದ್ಧಕ್ಕೆ ಪ್ರಚಾರ ಅಭಿಯಾನವು ಸಾಕ್ಷಿಯಾಗಿತ್ತು.

ರವಿವಾರ ಇಲ್ಲಿ ರೋಡ್ ಶೋ ನಡೆಸಿದ ಶಾ ಆಡಳಿತಾರೂಢ ಟಿಆರ್‌ಎಸ್ ವಿರುದ್ಧ ತೀವ್ರ ದಾಳಿಯನ್ನು ನಡೆಸಿದರು. ಟಿಆರ್‌ಎಸ್ ವಿರುದ್ಧ ಮತ್ತು ಅದರೊಂದಿಗೆ ಉವೈಸಿ ಮೈತ್ರಿಯ ವಿರುದ್ಧ ತೆಲಂಗಾಣದ ಜನತೆ ತೀವ್ರ ಆಕ್ರೋಶಗೊಂಡಿದ್ದಾರೆ ಎಂದರು. ಮಹಾ ನಗರಪಾಲಿಕೆ ಚುನಾವಣೆಯಲ್ಲಿ ಮೇಯರ್ ಸ್ಥಾನವನ್ನು ತನ್ನ ಪಕ್ಷವು ಗೆದ್ದ ಬಳಿಕ ರೋಹಿಂಗ್ಯಾಗಳು ಮತ್ತು ಪಾಕಿಸ್ತಾನಿಗಳನ್ನು ಹೊರಗಟ್ಟಲು ತನ್ನ ಪಕ್ಷವು ಹಳೆಯ ನಗರದಲ್ಲಿ ‘ಸರ್ಜಿಕಲ್ ದಾಳಿ ’ಯನ್ನು ನಡೆಸಲಿದೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಸಂಜಯ್ ಅವರು ವಿವಾದದಲ್ಲಿ ಸಿಲುಕಿದ್ದಾರೆ.

 ಚುನಾವಣೆಗಾಗಿ 51,000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತೆಲಂಗಾಣ ಡಿಜಿಪಿ ಮಹೇಂದ್ರ ರೆಡ್ಡಿ ತಿಳಿಸಿದ್ದಾರೆ. ಡಿ.4ರಂದು ಮತಗಳ ಎಣಿಕೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X