Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ...

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ ಪದಾಧಿಕಾರಿಗಳ ನೇಮಕಕ್ಕೆ ಒತ್ತಾಯಿಸಿ ಉಪವಾಸ ಡಿ.4ರಂದು ಧರಣಿ: ಐವನ್

ವಾರ್ತಾಭಾರತಿವಾರ್ತಾಭಾರತಿ1 Dec 2020 4:37 PM IST
share
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ ಪದಾಧಿಕಾರಿಗಳ ನೇಮಕಕ್ಕೆ ಒತ್ತಾಯಿಸಿ ಉಪವಾಸ ಡಿ.4ರಂದು ಧರಣಿ: ಐವನ್

ಮಂಗಳೂರು, ಡಿ.1: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ನೇಮಕಗೊಳಿಸಲು ಒತ್ತಾಯಿಸಿ ಡಿ.4ರಂದು ಬೆಳಗ್ಗೆ 9:30ರಿಂದ ಸಂಜೆ 5ರವರೆಗೆ ನಗರದ ಪುರಭವನದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಉಪವಾಸ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಧರಣಿಯಲ್ಲಿ ಎಲ್ಲ ಸಮುದಾಯದವರೂ ಭಾಗವಹಿಸಲಿದ್ದಾರೆ. ಡಿ.7ರಂದು ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನ ಸಂದರ್ಭದಲ್ಲೂ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಧರಣಿ ನಡೆಸುತ್ತೇವೆ ಎಂದರು.

2019-20ನೇ ಬಜೆಟ್‌ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮದ ಸ್ಥಾಪನೆಯ ಮುಖೇನ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದರು. ಅದರಂತೆ ನಿಗಮ ಸ್ಥಾಪನೆಗೆ 75 ಕೋಟಿ ರೂ. ಮೀಸಲಿಡಲಾಗಿತ್ತು. ಬಳಿಕ ಎಂಒಎ ಮತ್ತು ಎಒಎ ತಯಾರಿಸಿ ಆರ್ಥಿಕ ಇಲಾಖೆ ಅನುಮೋದನೆ ಪಡೆಯುವ ಷರತ್ತುಗೊಳಪಟ್ಟು, ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಅನುಮೋದನೆ ನೀಡಿರುತ್ತಾರೆ. ಸರಕಾರದ ಪ್ರಧಾನ ಕಾರ್ಯದರ್ಶಿ ಅವರಿಂದ ಅನುಮೋದಿಸಲ್ಪಟ್ಟಿರುತ್ತದೆ. 2020ರ ಜೂ.16ರಂದು ಮುಖ್ಯಮಂತ್ರಿಯ ಆದೇಶದ ಮೇರೆಗೆ ಈ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ ಎಂದರು.

ರಾಜ್ಯದಲ್ಲಿ ಸುಮಾರು 30 ಲಕ್ಷ ಜನಸಂಖ್ಯೆ ಕ್ರೈಸ್ತ ಸಮುದಾಯದಲ್ಲಿದೆ. ನಿಗಮದ ಆದೇಶವನ್ನು ಕೂಡಲೇ ಹಿಂದಕ್ಕೆ ತರಿಸಿ, ನಿಗಮದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ನೇಮಿಸಬೇಕು. ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನೀಡಿದ 200 ಕೋಟಿ ರೂ. ಕೂಡಲೇ ಬಿಡುಗಡೆ ಮಾಡಬೇಕು. 2019-20-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿದ್ದ ಎಲ್ಲ ಶೈಕ್ಷಣಿಕ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಐವನ್ ಒತ್ತಾಯಿಸಿದರು.

ವಿದೇಶದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ನೀಡುತ್ತಿದ್ದ 20 ಲಕ್ಷ ರೂ. ಯೋಜನೆಯನ್ನು ರದ್ದುಗೊಳಿಸಲಾಗಿತ್ತು. ಈ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. ಬಡವರಿಗೆ ನೀಡಲಾಗಿರುವ ಶ್ರಮಶಕ್ತಿ, ಸ್ವಉದ್ಯೋಗದ ಅಡಿಯಲ್ಲಿ ನೀಡುವ ಹಣವನ್ನು ಶೇ.80 ಕಡಿತಗೊಳಿಸಲಾಗಿದ್ದು, ಇದನ್ನು ಕೂಡಲೇ ಹಿಂದಿನಂತೆ ಸಂಪೂರ್ಣವಾಗಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಅರಿವು ಯೋಜನೆಯನ್ವಯ ಇಂಜಿನಿಯರ್, ಮೆಡಿಕಲ್ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ನೀಡುವ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದ್ದು, ಅದನ್ನು ಹಿಂದಿನಂತೆ ನೀಡಬೇಕು ಮತ್ತು ಬಿಡುಗಡೆಗೊಳಿಸಬೇಕು. ಶೇ.4ರಷ್ಟು ಜನಸಂಖ್ಯೆಯಿರುವ ಕ್ರೈಸ್ತ ಸಮುದಾಯಕ್ಕೆ ಕನಿಷ್ಠ 500 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಬೇಕು, ಮುಂತಾದ ಬೇಡಿಕೆಗಳನ್ನು ಸರಕಾರದ ಮುಂದೆ ತರಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಆಲ್ವಿನ್ ಮಿನೇಜಸ್, ಜೇಮ್ಸ್ ಪ್ರವೀಣ್, ಆಶಿತ್ ಪಿರೇರ, ಆಲ್ವಿನ್ ಡಿಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X