Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರಿಕಾ ಬೋಟು ದುರಂತ : 15 ವರ್ಷದ...

ಮೀನುಗಾರಿಕಾ ಬೋಟು ದುರಂತ : 15 ವರ್ಷದ ಹಿಂದೆ ನಡೆದಿತ್ತು ಇಂಥದ್ದೇ ಬೋಟು ದುರಂತ !

ಆಳ ಸಮುದ್ರದಲ್ಲಿ ಬಲೆ ಪತ್ತೆ

ವಾರ್ತಾಭಾರತಿವಾರ್ತಾಭಾರತಿ1 Dec 2020 8:47 PM IST
share
ಮೀನುಗಾರಿಕಾ ಬೋಟು ದುರಂತ : 15 ವರ್ಷದ ಹಿಂದೆ ನಡೆದಿತ್ತು ಇಂಥದ್ದೇ ಬೋಟು ದುರಂತ !

ಮಂಗಳೂರು, ಡಿ.1: ಸೋಮವಾರ ನಸುಕಿನ ಜಾವ ಪರ್ಸಿನ್ ಬೋಟು ಮುಳುಗಿ ದುರಂತ ಸಂಭವಿಸಿದೆ. ಹೊಟ್ಟೆಪಾಡಿಗಾಗಿ ಮೀನುಗಾರಿಕೆಗೆ ತೆರಳಿದವರ ಕುಟುಂಬಗಳು ಸಂಕಷ್ಟದಲ್ಲಿವೆ. ಅವಘಡವು ಬಹಳ ನೋವಿನ ವಿಚಾರ. ಇಂತಹದ್ದೇ ದುರಂತವೊಂದು ಸುಮಾರು 15 ವರ್ಷಗಳ ಹಿಂದೆ ಸಂಭವಿಸಿತ್ತು !

ಹೌದು. ಕಳೆದ ಸುಮಾರು 15 ವರ್ಷಗಳ ಹಿಂದೆಯೂ ಕಡಲಲ್ಲಿ ಸುಮಾರು ಎಂಟಕ್ಕೂ ಅಧಿಕ ಮೀನುಗಾರರು ಜಲಸಮಾಧಿಯಾಗಿ ದ್ದರು. ಬಳಿಕ ಅಂತಹ ದೊಡ್ಡ ಪ್ರಮಾಣದ ದುರಂತ ಸಂಭವಿಸಿರಲಿಲ್ಲ ಎಂದು ರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗದ ಅಧ್ಯಕ್ಷ ನಿತಿನ್‌ಕುಮಾರ್ ಈ ಹಿಂದೆ ನಡೆದ ದುರಂತವನ್ನು ‘ವಾರ್ತಾಭಾರತಿ’ ಪತ್ರಿಕೆಯ ಮುಂದೆ ಬಿಚ್ಚಿಟ್ಟರು.

ಅದೇ ದುರಂತವನ್ನು ಸೋಮವಾರ ನಡೆದ ಬೋಟು ಮುಳುಗಡೆಯಾದುದು ನೆನಪಿಸುತ್ತಿದೆ. ಇಲ್ಲಿಯವರೆಗೆ ಬೋಟು ಮುಳುಗಿ ಒಬ್ಬರು, ಇಬ್ಬರು ನಾಪತ್ತೆಯಾಗುತ್ತಿದ್ದರು. ಈಗ ಆರು ಮಂದಿ ನಾಪತ್ತೆಯಾಗಿರುವುದು ತುಂಬ ನೋವಿನ ಸಂಗತಿಯಾಗಿದೆ. ಸಮುದ್ರದಲ್ಲಿ ನಾಪತ್ತೆಯಾದವರು ಒಂದು ವೇಳೆ ಮೃತಪಟ್ಟಲ್ಲಿ ದೇಹವು 24 ಗಂಟೆಯಲ್ಲೇ (ಬುಧವಾರ) ಮೇಲೆ ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಸುಮಾರು 10ಕ್ಕೂ ಹೆಚ್ಚು ಪರ್ಸಿನ್ ಬೋಟುಗಳು ಸಹಿತ ಕರಾವಳಿ ರಕ್ಷಣಾ ಪಡೆ, ಸ್ಥಳೀಯ ಮುಳುಗು ತಜ್ಞರು ಪತ್ತೆ ಕಾರ್ಯ ನಡೆಸಿದ್ದು, ಇಳಿಹೊತ್ತಿನ ಬಳಿಕ ಪತ್ತೆ ಕಾರ್ಯವನ್ನು ಮೊಟಕುಗೊಳಿಸಲಾಗಿದೆ. ಬುಧವಾರ ನಸುಕಿನ ಜಾವವೇ 80ಕ್ಕೂ ಅಧಿಕ ಪರ್ಸಿನ್ ಬೋಟುಗಳು ಕಾರ್ಯಾಚರಣೆಗೆ ಅನುವಾಗಲಿವೆ ಎಂದರು.

ಆಳ ಸಮುದ್ರದಲ್ಲಿ ಬಲೆ ಪತ್ತೆ: ಕಡಲಲ್ಲಿ ದುರಂತಕ್ಕೀಡಾದ ಪರ್ಸಿನ್ ಬೋಟು ಸೋಮವಾರ ದಿನವಿಡೀ ಮೀನುಗಾರಿಕೆಯ ಹುಡುಕಾಟದಲ್ಲಿತ್ತು. ಸಂಜೆವರೆಗೂ ಮೀನಿನ ಬೇಟೆಯಲ್ಲಿ ತೊಡಗಿದ್ದ ಮೀನುಗಾರರು ಎಲ್ಲವನ್ನೂ ಬೋಟಿಗೆ ತುಂಬಿಸಿಕೊಳ್ಳುತ್ತಿದ್ದರು. ಇದನ್ನು ಇತರ ಮೀನುಗಾರರು ನೋಡಿದ್ದರು.

ಮಂಗಳವಾರ ಬೋಟ್ ಮುಳುಗಡೆಯಾಗಿ ಮೀನುಗಾರರು ನಾಪತ್ತೆಯಾದ ಮಾಹಿತಿ ತಿಳಿದ ತಕ್ಷಣ ಮೀನುಗಾರರು ಅದೇ ಪ್ರದೇಶದ ಆಳಸಮುದ್ರದಲ್ಲಿ ಹುಡುಕಾಟ ನಡೆಸಿದರು. ಈ ಸಂದರ್ಭ ಮೀನು ಹಿಡಿಯಲು ಬಳಸಿದ ಬಲೆ ಪತ್ತೆಯಾಗಿದೆ. ಆದರೆ ಬಲೆಯನ್ನು ಮೇಲೆ ಎತ್ತಿಲ್ಲ. ಅದೇ ಪ್ರದೇಶದಲ್ಲಿ ಬೋಟು ಮುಳುಗಡೆಯಾಗಿದೆ. ಪತ್ತೆಯಾದ ಬಲೆಯಲ್ಲಿ ಭಾರೀ ಮೀನು ಇರುವುದು ಕಂಡುಬಂದಿದೆ. ಬಲೆಯಲ್ಲೇ ನಾಪತ್ತೆಯಾದವರು ಸಿಲುಕಿರುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಇಲ್ಲಿಯವರೆಗೂ ಖಚಿತವಾಗಿಲ್ಲ.

ಡಿಂಗಿ ಸಹಾಯದಿಂದ ಬದುಕುಳಿದರು: ‘ಶ್ರೀರಕ್ಷಾ’ ಹೆಸರಿನ ಬೋಟು ನಸುಕಿನ ಜಾವ 5 ಗಂಟೆ ಸುಮಾರಿಗೆ ಮೀನುಗಾರಿಕೆಗೆ ತೆರಳಿತ್ತು. ಬೆಳಗ್ಗೆ 7 ಗಂಟೆ ಸುಮಾರಿಗೆ ಆಳ ಸಮುದ್ರದಲ್ಲಿ ಮೀನಿಗೆ ಬಲೆ ಬೀಸಿದ್ದು, ಮಧ್ಯಾಹ್ನದ ವೇಳೆಗೆ ಬಲೆ ಎಳೆಯುವ ಕಾರ್ಯ ಆರಂಭಿಸಿದ್ದರು. ಸಂಜೆ ವೇಳೆಗೆ ಬಲೆ ಎಳೆದು ಬಲೆಯಿಂದ ಮೀನು ಬೇರ್ಪಡಿಸುವ ಕಾರ್ಯ ಶುರು ಮಾಡಿದ್ದರು.
ತಡರಾತ್ರಿ ವೇಳೆಗೆ ಮೀನು ಬೇರ್ಪಡಿಸಿ ವಾಪಸ್ ಮಂಗಳೂರಿನ ದಕ್ಕೆಗೆ ಹೊರಡಲು ಅನುವಾಗಿದ್ದರು. ಈ ಸಂದರ್ಭ ಕಲ್ಲಿಗೆ ಬೋಟ್ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಕೆಲ ಮೂಲಗಳ ಪ್ರಕಾರ ಭಾರೀ ಗಾಳಿಗೆ ಬೋಟು ಸಿಲುಕಿ ಮುಳುಗಡೆಯಾಗಿದೆ ಎನ್ನಲಾಗಿದೆ.

ಸಮುದ್ರದ ಮಧ್ಯೆ ಬೋಟು ಮುಳುಗಡೆಯಾಗುತ್ತಿದ್ದಂತೆ ಬೋಟ್‌ನಲ್ಲಿ 25ರ ಪೈಕಿ 19 ಮಂದಿ ಡಿಂಗಿ (ಸಣ್ಣ ದೋಣಿ) ಸಹಾಯದಿಂದ ದಡ ಸೇರಿಕೊಂಡು ಬದುಕುಳಿದಿದ್ದಾರೆ. ಬುಧವಾರ ಪತ್ತೆ ಕಾರ್ಯ ಮುಂದುವರಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X