Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶೇಷ ಶಿಕ್ಷಕರ ಅಳಲು ಕೇಳಲು ಸರಕಾರ...

ವಿಶೇಷ ಶಿಕ್ಷಕರ ಅಳಲು ಕೇಳಲು ಸರಕಾರ ಮುಂದಾಗಲಿ : ಫಾ. ಮ್ಯಾಥ್ಯೂ

ವಾರ್ತಾಭಾರತಿವಾರ್ತಾಭಾರತಿ2 Dec 2020 2:19 PM IST
share
ವಿಶೇಷ ಶಿಕ್ಷಕರ ಅಳಲು ಕೇಳಲು ಸರಕಾರ ಮುಂದಾಗಲಿ : ಫಾ. ಮ್ಯಾಥ್ಯೂ

ಮಂಗಳೂರು, ಡಿ. 2: ವಿಶೇಷ ಮಕ್ಕಳ ಸೇವೆ ಎಂದರೆ ದೇವರ ಸೇವೆ ಮಾಡಿದಂತೆ. ಅಂತಹ ಸೇವೆ ನೀಡುತ್ತಿರುವ ಶಿಕ್ಷಕರಿಗೆ ಸರಕಾರ ಸರಿಯಾದ ಸವಲತ್ತು, ವೇತನ ನೀಡಬೇಕು. ವಿಶೇಷ ಶಿಕ್ಷಕರ ಅಳಲು ಆಲಿಸಲು ಸರಕಾರ ಮುಂದಾಗಬೇಕು ಎಂದು ಕಿನ್ನಿಗೋಳಿ ಚರ್ಚ್‌ನ ಪ್ರಧಾನ ಧರ್ಮಗುರು ಫಾ. ಮ್ಯಾಥ್ಯೂ ವಾಸ್ ಒತ್ತಾಯಿಸಿದರು.

ಶಿಶು ಕೇಂದ್ರೀಕೃತ ಶಿಕ್ಷಣ ಸಹಾಯಧನ ಯೋಜನೆಯಲ್ಲಿ ಅನುದಾನ ಪಡೆಯುತ್ತಿರುವ ರಾಜ್ಯದ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರು ಮತ್ತು ಸಿಬಂದಿಗೆ ಗೌರವಧನ ದ್ವಿಗುಣಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ವಿಶೇಷ ಶಿಕ್ಷಕರ ಮುಷ್ಕರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ವಿದ್ಯೆ ನೀಡುವ ಶಿಕ್ಷಕರು ಮುಷ್ಕರ ಹೂಡುವಂತಹ ಪರಿಸ್ಥಿತಿ ಬರಬಾರದು. ವಿಶೇಷ ಮಕ್ಕಳಿಗೆ ಕಲಿಸುವುದೆಂದರೆ ಕೇವಲ ವಿದ್ಯೆ ಮಾತ್ರವಲ್ಲ, ಅವರ ಎಲ್ಲಾ ಕೆಲಸಗಳನ್ನೂ ಶಿಕ್ಷಕರೇ ಮಾಡಬೇಕಾಗುತ್ತದೆ. ಆದರೆ ಸರಕಾರ ಅವರಿಗೆ ನೀಡುವ ಸಣ್ಣ ಮೊತ್ತದ ಗೌರವಧನದಿಂದ ಜೀವನ ನಡೆಸುವುದು ಕಷ್ಟ ಎಂದರು.

ಸಂಘದ ರಾಜ್ಯ ಗೌರವ ಕಾರ್ಯದರ್ಶಿ ಡಾ. ವಸಂತ್‌ಕುಮಾರ್ ಶೆಟ್ಟಿ ಮಾತನಾಡಿ, 2010-11ರಲ್ಲಿ ಜಾರಿಗೆ ಬಂದ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಲ್ಲಿ ಸುಮಾರು 141 ಸಂಸ್ಥೆಗಳು ಅನುದಾನ ಪಡೆಯುತ್ತಿದ್ದು, ಈ ಸಂಸ್ಥೆಗಳಲ್ಲಿ ಸೇವಾ ನಿರತವಾಗಿರುವ ವಿಶೇಷ ಶಿಕ್ಷಕರು ಹಾಗೂ ಸಿಬಂದಿಗೆ ಕೇಂದ್ರ ಸರಕಾರ ಘೋಷಿಸಿರುವ ಕನಿಷ್ಠ ವೇತನ ಕೂಡಾ ದೊರಕಿಲ್ಲ. ಇದರಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದರು.

ವಿಶೇಷ ಶಿಕ್ಷಕರಿಗೆ 2013-14ರಿಂದ ಇಲ್ಲಿವರೆಗೆ ಕೇವಲ 13500 ರೂ. ಗೌರವಧನ ಹಾಗೂ ಇತರ ಸಿಬಂದಿಗೆ 8-9 ಸಾವಿರ ರೂ. ಸಿಗುತ್ತಿದೆ. ಏರಿಕೆ ಮಾಡುವಂತೆ ನಿರಂತರವಾಗಿ ಕೇಳುತ್ತಲೇ ಬಂದಿದ್ದರೂ ಯಾರೂ ಈ ಬಗ್ಗೆ ಗಮನ ಹರಿಸಿಲ್ಲ. ವಿಶೇಷ ಶಿಕ್ಷಕರ ಅಳಲನ್ನು ಆಲಿಸಿ ಸರಕಾರ ತತ್‌ಕ್ಷಣ ಗೌರವಧನವನ್ನು ದ್ವಿಗುಣಗೊಳಿಸಬೇಕು. ಇಲಾಖೆಯಿಂದ ಸಕಾರಾತ್ಮಕ ಆದೇಶ ಜಾರಿಯಾಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದವರು ತಿಳಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರೇಷ್ಮಾ ಮಾರ್ಟಿಸ್ ಸ್ವಾಗತಿಸಿದರು. ಮುಷ್ಕರಕ್ಕೂ ಮುನ್ನ ಹಂಪನಕಟ್ಟೆ ಬಳಿಯಿಂದ ಮಿನಿ ವಿಧಾನಸೌಧದವರೆಗೆ ವಿಶೇಷ ಶಿಕ್ಷಕರ ಜಾಥಾ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X