Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೋಟ್ ದುರಂತ : ಸಂತ್ರಸ್ತ ಮೀನುಗಾರರ...

ಬೋಟ್ ದುರಂತ : ಸಂತ್ರಸ್ತ ಮೀನುಗಾರರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರಕ್ಕೆ ಡಿವೈಎಫ್ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Dec 2020 3:51 PM IST
share

ಮಂಗಳೂರು : ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಬೋಟ್ ಅವಘಡಕ್ಕೊಳಗಾಗಿ ಮೀನುಗಾರರು ಪ್ರಾಣ ಕಳೆದು ಕೊಂಡಿರುವ ದುರಂತಕ್ಕೆ ಡಿವೈಎಫ್ಐ ದ  ಕ ಜಿಲ್ಲಾ ಸಮಿತಿ‌ ತೀವ್ರ ಶೋಕ ವ್ಯಕ್ತ ಪಡಿಸಿದ್ದು, ದುರಂತದಲ್ಲಿ ಬಲಿಯಾದ ಮೀನುಗಾರರ ಬಡ ಕುಟುಂಬಗಳಿಗೆ ತಲಾ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಸಮುದ್ರದಲ್ಲಿ ಮೀನು ಹಿಡಿಯುವ ಕಾಯಕ ನಡೆಸುವ ಮೀನುಗಾರರು ಸದಾ ಅಪಾಯವನ್ನು ಎದುರು ನೋಡುತ್ತಾ ತಮ್ಮ ವೃತ್ತಿಯನ್ನು ನಿರ್ವಹಿಸುತ್ತಾರೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ವೃತ್ತಿ ನಿರ್ವಹಿಸುವ ಮೀನುಗಾರರು ಬಹುತೇಕರು ಬಡ ಕುಟುಂಬಗಳಿಗೆ ಸೇರಿರುತ್ತಾರೆ. ಬೋಟ್ ಗಳ ಮಾಲಕರ ಬಳಿ ಕಾರ್ಮಿಕರಾಗಿ ದುಡಿಯುವ ಇವರ ಉದ್ಯೋಗ ಹಾಗು ಬದುಕಿಗೆ ಯಾವುದೇ ಭದ್ರತೆ ಇರುವುದಿಲ್ಲ.‌ ಅಂದಂದಿನ ದುಡಿಮೆಯೇ ಅವರ ಬದುಕಿಗೆ ಆಧಾರ. ಈಗ ಸಂತ್ರಸ್ತರಾಗಿರುವ ಕುಟುಂಬಗಳೂ ಜೀವನ ನಿರ್ವಹಣೆಗೆ ದುರಂತಕ್ಕೆ ಬಲಿಯಾದವರ ದುಡಿಮೆಯನ್ನೇ ಅವಲಂಬಿಸಿದೆ. 

ಸಮುದ್ರದಲ್ಲಿ ಯಾವುದೇ ಪ್ರಾಕೃತಿಕ ವೈಪರೀತ್ಯಗಳು ಇಲ್ಲದ ಸಾಮಾನ್ಯ ಸಂದರ್ಭದಲ್ಲಿ ನಡೆದ ಅವಘಡ ಸಹಜವಾಗಿ ಮೀನುಗಾರಿಕೆ ವೃತ್ತಿ ನಿರತರಲ್ಲಿ ಆತಂಕ ಮೂಡಿಸಿದೆ. ಬೋಟ್ ದುರಂತದಲ್ಲಿ ಬಲಿಯಾದವರು ತೀರಾ ಬಡತನದ ಕುಟುಂಬಗಳಿಗೆ ಸೇರಿದವರು. ಇವರ ಕುಟುಂಬಗಳು ಜೀವನ ನಿರ್ವಹಣೆಗೆ ಬಲಿಯಾದವರ ದುಡಿಮೆಯನ್ನೇ ಅವಲಂಬಿಸಿವೆ. ಸರಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸದಿದ್ದಲ್ಲಿ ಕುಟುಂಬಗಳು ಬೀದಿಗೆ ಬೀಳಲಿವೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕೆ, ಮತ್ಸೋದ್ಯಮ ಸರಕಾರಕ್ಕೆ ವರ್ಷಕ್ಕೆ ನೂರಾರು ಕೋಟಿ ಆದಾಯ ತಂದುಕೊಡುತ್ತಿದೆ. ಇಂತಹ ಲಾಭದಾಯಕ ಉದ್ಯಮದ ಯಶಸ್ಸಿಗೆ ಕಾರಣರಾದ ಮೀನುಗಾರರು ವೃತ್ತಿ ನಿರತರಾಗಿದ್ದಾಗಲೇ ದುರಂತಕ್ಕೆ ಬಲಿಯಾದಾಗ ಅಂತಹ ಕುಟುಂಗಳಿಗೆ ಆಸರೆ ಒದಗಿಸುವುದು ಸರಕಾರದ ಕರ್ತವ್ಯ. ಈ ಹಿನ್ನಲೆಯಲ್ಲಿ ಬೋಟ್ ದುರಂತಕ್ಕೆ ಬಲಿಯಾದ ಕುಟುಂಬಳಿಗೆ ಸರಕಾರ ಕನಿಷ್ಟ ತಲಾ ಇಪ್ಪತ್ತೈದು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು, ಮೀನುಗಾರಿಕೆ ವೃತ್ತಿ ನಿರತರ ಜೀವನ ಭದ್ರತೆಗಾಗಿ ಕಲ್ಯಾಣ ಮಂಡಳಿ ಸಹಿತ ನಿಯಮಗಳನ್ನು ರೂಪಿಸಬೇಕು ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X