Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ತೂರು ಪ್ರಕಾಶ್ ಅಪಹರಣ ಪ್ರಕರಣ:...

ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ, ತನಿಖೆ ಚುರುಕು

ವಾರ್ತಾಭಾರತಿವಾರ್ತಾಭಾರತಿ2 Dec 2020 6:36 PM IST
share
ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ, ತನಿಖೆ ಚುರುಕು

ಬೆಂಗಳೂರು, ಡಿ.2: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಸಂಬಂಧ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ, ದುಷ್ಕರ್ಮಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.

ಕೋಲಾರ ಜಿಲ್ಲಾ ಪೊಲೀಸರು ಹಾಗೂ ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ತಂಡಗಳು ತನಿಖೆ ನಡೆಸುತ್ತಿದ್ದು, ಕೃತ್ಯ ನಡೆದ ಮೂರು ಕಡೆ ಸಿಗಬಹುದಾದ ಸಿಸಿಟಿವಿ ದೃಶ್ಯಗಳು ಹಾಗೂ ಕೆಲ ಸುಳಿವುಗಳನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖವಾಗಿ ಇತ್ತೀಚಿಗೆ ವರ್ತೂರು ಪ್ರಕಾಶ್ ಮೊಬೈಲ್‍ಗೆ ಬಂದಿರುವ ಕರೆಗಳ ಸಿಡಿಆರ್ ಪರಿಶೀಲನೆ ಮಾಡುತ್ತಿದ್ದಾರೆ. ಇದಲ್ಲದೆ ಮಾಜಿ ಸಚಿವ ವರ್ತೂರು ಪ್ರಕಾಶ್ ಜೊತೆ ಅಪಹರಣಕ್ಕೆ ಒಳಗಾಗಿ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರು ಚಾಲಕ ಸುನೀಲ್ ಬಳಿಯೂ ತನಿಖಾ ತಂಡವೊಂದು ಆತನ ಹೇಳಿಕೆ ದಾಖಲಿಸಿಕೊಂಡಿದೆ ಎನ್ನಲಾಗಿದೆ.

ಶಂಕೆ?: ವರ್ತೂರು ಪ್ರಕಾಶ್‍ರನ್ನು ಅಪಹರಿಸಿ ಹಿಂಸೆ ನೀಡಿದ ಪ್ರಕರಣವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ದೂರಿನ ಪ್ರಕಾರ ವರ್ತೂರು ಪ್ರಕಾಶ್ ನಾಲ್ಕು ದಿನಗಳ ಹಿಂದೆ ಅಪಹರಣವಾಗಿದ್ದು ಕುಟುಂಬಸ್ಥರು ನಾಪತ್ತೆ ದೂರನ್ನು ಏಕೆ ನೀಡಿಲ್ಲ ಎಂಬ ಪ್ರಶ್ನೆ ಎದ್ದಿದೆ.

ಸಚಿವರ ಬಳಿ ಅಳಲು: ಅಪಹರಣ ನಡೆದ ಕುರಿತಂತೆ ವರ್ತೂರು ಪ್ರಕಾಶ್ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವಿವರಣೆ ನೀಡಿ, ಅಳಲು ತೋಡಿಕೊಂಡರು.

ಫಾರ್ಮ್ ಹೌಸ್‍ನಿಂದ ತೆರಳುತ್ತಿದ್ದ ವೇಳೆ ನನ್ನ ಕಾರನ್ನು ಅಡ್ಡಗಟ್ಟಿದ 8 ಮಂದಿ ನನಗೆ ಮಂಕಿ ಕ್ಯಾಪ್ ಹಾಕಿ ಅಪಹರಣಕಾರರ ಗುರುತು ನನಗೆ ಸಿಗಬಾರದೆಂದು ಪ್ರಯತ್ನ ನಡೆಸಿದರು. ಅಪಹರಣ, ಕೊಲೆ ಬೆದರಿಕೆ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದು, ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇನೆ. ತಮಗೆ ಹಾಗೂ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು.

ಹಣಕ್ಕಾಗಿಯೇ ಅಪಹರಣ: ವರ್ತೂರ್ ಪ್ರಕಾಶ್

ರಾಜಕೀಯ ಪ್ರೇರಿತವಾಗಿ ಅಪಹರಣ ಮಾಡಿಲ್ಲ. ಬದಲಾಗಿ, ಹಣಕ್ಕಾಗಿಯೇ ಈ ರೀತಿಯ ಕೃತ್ಯ ನಡೆಸಿದ್ದಾರೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಸಂಜೆ ಕೋಲಾರ ನಗರದಲ್ಲಿ ಒಂದು ಮದುವೆ ಸಮಾರಂಭ ಮುಗಿಸಿ 7 ಗಂಟೆಗೆ ಫಾರಂ ರಸ್ತೆ ಬಿಟ್ಟು ಕಿರಿದಾದ ರಸ್ತೆಯಲ್ಲಿ ಬರುತ್ತಿದ್ದೆ. ಆ ರಸ್ತೆಯಿಂದ ಮಂಕಿಕ್ಯಾಪ್ ಹಾಕಿದ್ದ ಕೆಲವರು ನನ್ನನ್ನು ಹಿಂಬಾಲಿಸಿದರು. ತದನಂತರ, ಏಕಾಏಕಿ ನನ್ನ ಕಾರಿನ ಗಾಜು ಒಡೆದು, ನನಗೂ ಮಂಕಿ ಕ್ಯಾಪ್ ಹಾಕಿ 4 ಗಂಟೆಗಳ ಕಾಲ ಕಾರಿನಲ್ಲಿ ಇಟ್ಟಿದ್ದರು. ತದನಂತರ, 30 ಕೋಟಿ ರೂ. ಹಣ ನೀಡುವಂತೆ ಬೇಡಿಕೆ ಇಟ್ಟು, ತಡರಾತ್ರಿ ಕಾಡಿಗೆ ಕರೆದುಕೊಂಡು ಹೋದರು. ಅಲ್ಲಿ ನನ್ನ ಕೈ-ಕಾಲು ಕಟ್ಟಿಹಾಕಿ ಹಲ್ಲೆ ನಡೆಸಿದರು ಎಂದು ವಿವರಿಸಿದರು.

ಮರುದಿನ ನಿನ್ನ ಗೆಳೆಯರಿಂದ 50 ಲಕ್ಷ ರೂ. ಪಡೆಯುವಂತೆ ಒತ್ತಡಹಾಕಿ, ಮೊಬೈಲ್ ನೀಡಿದರು. ಯಾರದ್ದೇ ಕರೆ ಬಂದರೂ ಅನುಮಾನ ಆಗದಂತೆ ಮಾತನಾಡುವಂತೆ ಬೆದರಿಕೆ ಹಾಕಿದರು. ಜತೆಯಲ್ಲಿದ್ದ ಕಾರು ಚಾಲಕ ಸುನೀಲ್ ಮೇಲೂ ಹಲ್ಲೆ ನಡೆಸಿದರು. ಅದಾದ ಬಳಿಕ ಅವನು ಪ್ರಜ್ಞೆ ತಪ್ಪಿದ. ಇದನ್ನು ಕಂಡ ದುಷ್ಕರ್ಮಿಗಳು ಆತ ಸಾವನ್ನಪ್ಪಿದ್ದಾನೆ ಎಂದು ಭಯಗೊಂಡು ನನ್ನನ್ನು ಹೊಸಕೋಟೆ ಬಳಿ ತಂದು ಬಿಟ್ಟರು.

ನನ್ನ ಮೊಬೈಲ್ ಮೂಲಕ ಗೊತ್ತಾಗಬಹುದೆಂದು ಮೊಬೈಲ್ ಸಂಪರ್ಕ ಕಡಿತಗೊಳಿಸಿದರು. ಕೋಲಾರ ಮಾರ್ಗದ ರಸ್ತೆಯಲ್ಲಿ ಕೆಲವರನ್ನು ಮಾತನಾಡಿಸಿ, ನಾನು ಮಾಜಿ ಸಚಿವ ಎಂದರೆ ನಂಬಲಿಲ್ಲ. ಮಂಕಿ ಕ್ಯಾಪ್ ಬಿಚ್ಚಿದಾಗ ನಂಬಿದರು ಎಂದು ಘಟನೆ ಕುರಿತು ವರ್ತೂರ್ ಪ್ರಕಾಶ್ ಮಾಹಿತಿ ನೀಡಿದರು.

ಪೊಲೀಸ್ ಭದ್ರತೆ

ಅಪಹರಣ ಸಂಬಂಧ ವರ್ತೂರ್ ಪ್ರಕಾಶ್ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು. ಜತೆಗೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X