ಬೆಂಗಳೂರು: ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ನೌಕರ ಆತ್ಮಹತ್ಯೆ

ಬೆಂಗಳೂರು, ಡಿ.2: ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ನೌಕರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇಲ್ಲಿನ ಮೈಸೂರು ಬ್ಯಾಂಕ್ ವೃತ್ತದಲ್ಲಿನ ಜಲಮಂಡಳಿ ಕೇಂದ್ರ ಕಚೇರಿ ಆವರಣದಲ್ಲೇ ಈ ಘಟನೆ ನಡೆದಿದ್ದು, ನಾಗರಾಜ್ (33) ಮೃತ ನೌಕರ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ಈ ಘಟನೆ ಬೆಳಕಿಗೆ ಬಂದಿದ್ದು, ನಾಗರಾಜ್ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





