ಉಳ್ಳಾಲ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಗು ಮೃತ್ಯು
ಉಳ್ಳಾಲ, ಡಿ.3: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ಮೃತಪಟ್ಟಿದೆ.
ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲು ಬಾಕಿಮಾರ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಯ ಪುತ್ರ ಕೃಷ್ಣ ಮೃತಪಟ್ಟ ಬಾಲಕ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ಕೃಷ್ಣನ ಮೇಲೆ ಟ್ಯಾಂಕರ್ ಹರಿದಿತ್ತು. ಇದರಿಂದ ಮಗುವಿನ ಎರಡು ಕಾಲುಗಳು ಸಂಪೂರ್ಣ ಜರ್ಜರಿತವಾಗಿತ್ತು.
Next Story