Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು:...

ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು: ಸಚಿವ ಬಸರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 Dec 2020 2:15 PM IST
share
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು: ಸಚಿವ ಬಸರಾಜ ಬೊಮ್ಮಾಯಿ

ಮಂಗಳೂರು, ಡಿ.3: ವರದಕ್ಷಿಣೆ ಪೀಡನೆ ಪ್ರಕರಣಗಳು ಹಿಂದೆಯೂ ಇತ್ತು. ಆದರೆ ವರದಕ್ಷಿಣೆ ಹಿಂಸೆ ಪ್ರಕರಣಗಳು ಹೆಚ್ಚಿದಂತೆ ಕಠಿಣ ಕಾನೂನು ರಚಿಸಲಾಯಿತು. ಅದೇ ರೀತಿ ಇದೀಗ ಲವ್ ಜಿಹಾದ್ ಸಾಮಾಜಿಕ ಪಿಡುಗಾಗಿ ಕಾಡುತ್ತಿದ್ದು, ಇಂತಹ ಪ್ರಕರಣದಲ್ಲೂ ಕಾನೂನು ರಚನೆ ಮಾಡುವ ನಿಟ್ಟಿನಲ್ಲಿ ಸರಕಾರ ಸ್ಪಷ್ಟವಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ವ್ಯಕ್ತಿ ಸ್ವಾತಂತ್ರದ ಹೆಸರಿನಲ್ಲಿ ಸುಲಭವಾಗಿ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಕೆಲವು ವರ್ಷಗಳಿಂದ ಲವ್‌ಜಿಹಾದ್ ಅತಿರೇಕವಾಗುತ್ತಿದ್ದು, ಆತಂಕ ಮೂಡಿಸುತ್ತಿದೆ. ಇದೀಗ ಕೋರ್ಟ್ ಕೂಡಾ ಮತಾಂತರ ಬಗ್ಗೆ ವ್ಯಾಖ್ಯೆ ಮಾಡಿದೆ. ಇದು ಸಮಾಜದ ಸ್ವಾಸ್ಥ, ಶಾಂತಿ, ಸಂಸ್ಕೃತಿಗೆ ದಕ್ಕೆಯಾಗಿದ್ದು, ಇಂತಹ ಕೃತ್ಯಕ್ಕೆ ಕಠಿಣ ಕಾನೂನು ಮೂಲಕ ಕಡಿವಾಣ ಹಾಕಬೇಕಾಗಿದೆ. ಈ ಕಾನೂನು ಸಂವಿಧಾನದ ಚೌಕಟ್ಟಿನಲ್ಲೇ ರಚನೆಯಾಗಲಿದೆ ಎಂದರು.

ಲವ್ ಜಿಹಾದ್ ಸಂಬಂಧಿಸಿ ಉತ್ತರ ಪ್ರದೇಶದಲ್ಲಿ ಕಾನೂನು, ಹರ್ಯಾಣದಲ್ಲಿ ವಿಶೇಷ ಸಮಿತಿ, ಮಧ್ಯ ಪ್ರವೇಶದಲ್ಲೂ ಕಠಿಣ ಕಾನೂನು ಚಿಂತನೆಯಿದೆ. ಆ ರಾಜ್ಯಗಳ ಜತೆ ಮಾಹಿತಿ ಪಡೆದು ರಾಜ್ಯದಲ್ಲಿ ಅತೀ ಶೀಘ್ರದಲ್ಲೇ ಲವ್ ಜಿಹಾದ್ ಸಮಗ್ರ ಕಾನೂನು ತರಲಾಗುವುದು ಎಂದವರು ಹೇಳಿದರು.

ನಗರದಲ್ಲಿ ಕಂಡು ಬಂದ ಉಗ್ರ ಬರಹವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಡಿಸಿಪಿಗಳ ನೇತೃತ್ವದಲ್ಲೇ ರಾತ್ರಿ ಗಸ್ತು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಇರಾಕ್, ಇರಾನ್, ಕಾಶ್ಮೀರ ಸೇರಿದಂತೆ ಅಂತಾರಾಷ್ಟ್ರೀಯ ಭಯೋತ್ಪಾದನಾ ಪ್ರಚೋದಿಸುವ ಸಂಸ್ಥೆಗಳು ಈ ರೀತಿ ಉಗ್ರವಾದದ ಬರಹವನ್ನು ಹಾಕುತ್ತವೆ. ಅದೇ ಮಾದರಿ ಪ್ರಯತ್ನ ಮಂಗಳೂರಿನಲ್ಲಿ ನಡೆದಿದ್ದು, ಇದರ ಹಿಂದಿರುವ ಕೃತ್ಯವನ್ನು ಬಯಲಿಗೆಳೆಯಲಾಗುವುದು ಎಂದರು.

ಪ್ರಾಣಿ ಹತ್ಯೆ ನಿಷೇಧ ಮಾಡಬೇಕೆಂಬುದು ಮಹಾತ್ಮ ಗಾಂಧಿ ಚಿಂತನೆಯಾಗಿದ್ದು, 1960ರ ದಶಕದಿಂದ ಇದಕ್ಕೆ ಸಂಬಂಧಿಸಿ ಕಾನೂನುಗಳಿವೆ. ಆದರೆ ಕಾನೂನು ಕ್ರಮಕ್ಕೆ ಯಾವುದೇ ರೀತಿ ಹಲ್ಲುಗಳಿಲ್ಲದೆ, ದುರುಪಯೋಗ ಮುಂದುವರಿದಿತ್ತು. ಅದರಿಂದ ಸಣ್ಣ ಕರುವಿನಿಂದ ಎಲ್ಲವೂ ಹತ್ಯೆಯಾಗುತ್ತಿದೆ. ಕಾನೂನು ರಚನೆಗೆ ಸಂಬಂಧಿಸಿ ವೆಟರ್ನರಿ ವಿಭಾಗ ಅಧಿಕಾರಿಗಳ ಜತೆ ಮಾತನಾಡುತ್ತಿದ್ದೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X