Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವನಾಥ್ ಹೇಳಿಕೆ ಬಗ್ಗೆ ಲೋಕಾಯುಕ್ತ...

ವಿಶ್ವನಾಥ್ ಹೇಳಿಕೆ ಬಗ್ಗೆ ಲೋಕಾಯುಕ್ತ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ3 Dec 2020 9:49 PM IST
share
ವಿಶ್ವನಾಥ್ ಹೇಳಿಕೆ ಬಗ್ಗೆ ಲೋಕಾಯುಕ್ತ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಮೈಸೂರು,ಡಿ.3: ಉಪಚುನಾವಣೆ ಸಮಯದಲ್ಲಿ ದೊಡ್ಡ ಮೊತ್ತದ ಹಣ ಕೊಡದೆ ವಂಚಿಸಿದರು ಎಂದು ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಹೇಳಿಕೆ ಕುರಿತು ಲೋಕಾಯುಕ್ತ ತನಿಖೆಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದ ಟಿ.ಕೆ.ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆ ಸಮಯದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಬಿ.ಆರ್.ಸಂತೋಷ್ ದೊಡ್ಡ ಮೊತ್ತದ ಹಣವನ್ನು ನನಗೆ ನೀಡದೆ ವಂಚಿಸಿದರು ಹಾಗಾಗಿ ನಾನು ಸೋಲಬೇಕಾಯಿತು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಹಾಗಿದ್ದ ಮೇಲೆ ಉಪಚುನಾವಣೆಯಲ್ಲಿ ಹಣ ಹಂಚಲಾಗಿದೆ ಎಂಬುದು ಸ್ಪಷ್ಟ. ಇದು ಕಪ್ಪು ಹಣವೆ, ಬಿಳಿ ಹಣವೇ ? ಈ ಹಣ ಎಲ್ಲಿಂದ ಬಂತು, ಇದನ್ನು ನೀಡಿದವರು ಯಾರು, ಎಂಬ ಬಗ್ಗೆ  ಕೂಲಂಕಷ ತನಿಖೆಯಾಗಬೇಕು. ಇವರ ಹೇಳಿಕೆ ನೋಡಿದರೆ ಇದೊಂದೆ ಕ್ಷೇತ್ರದಲ್ಲಿ ಹಣದ ವಹಿವಾಟು ನಡೆದಿದೆ ಎನ್ನಿಸುವುದಿಲ್ಲ. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲೂ ಹಣ ನೀಡಲಾಗಿದೆ ಅನ್ನಿಸುತ್ತಿದೆ. ಹಾಗಾಗಿ ಈ ಕುರಿತು ಲೋಕಾಯುಕ್ತ ತನಿಖೆ ನಡೆಯಬೇಕು ಎಂದು ಹೇಳಿದರು.

ಲವ್ ಜಿಹಾದ್ ತಡೆಗೆ ಕಾನೂನು ಜಾರಿಗೆ ತರುವುದು ಸಂವಿಧಾನ ವಿರೋಧಿ ನಡೆ. 18 ವರ್ಷ ತುಂಬಿದ ಹೆಣ್ಣು, 21 ವರ್ಷ ತುಂಬಿದ ಗಂಡು ಯಾರನ್ನು ಯಾರು ಬೇಕಾದರೂ ಒಪ್ಪಿ ಮದುವೆಯಾಗಬಹುದು. ಇದನ್ನು ಬೇಡ ಎನ್ನಲು ಬಿಜೆಪಿಯವರು ಯಾರು? ಇದನ್ನು ನಿಯಂತ್ರಣ ಮಾಡುವುದು ಸಂವಿಧಾನ ವಿರೋಧಿ ನಡೆ ಎಂದು ಕಿಡಿಕಾರಿದರು.

ಇನ್ನು ಗೋಹತ್ಯೆ ನಿಷೇಧ ಕಾನೂನು ತಡೆಯೋದು ಬಿಡೋದು ಬೇರೆ ಪ್ರಶ್ನೆ. ಜನ ಇಂತಹ ಕಾನೂನುಗಳನ್ನು ಸಹಿಸಿಕೊಳ್ಳುವುದಿಲ್ಲ. ಇದೂ ಕೂಡ ಸಂವಿಧಾನ ವಿರೋಧಿ. ಇವರು ಜಾರಿ ಮಾಡಿದರೆ ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಲಕ್ಷಾಂತರ ರೈತರು ಕಳೆದ ಒಂದು ವಾರದಿಂದ ದಿಲ್ಲಿ ಚಲೋ ನಡೆಸಿ ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆ ಬಗೆಹರಿಸದೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಮೊದಲು ರೈತ ವಿರೋಧಿ ಮಸೂದೆಗಳನ್ನು ಕೈಬಿಟ್ಟು, ರೈತರ ಸಮಸ್ಯೆಗೆ ಸ್ಪಂಧಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಮುಖಂಡುಗಳಾದ ಬಿ.ವಿ.ಸೀತಾರಾಮ್, ಶಿವಪ್ರಸಾದ್, ಕೆ.ಮಾರುತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X