Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಡಿಯನ್ ಆಯಿಲ್‍ನಿಂದ ದೇಶದಲ್ಲಿ 100...

ಇಂಡಿಯನ್ ಆಯಿಲ್‍ನಿಂದ ದೇಶದಲ್ಲಿ 100 ಆಕ್ಟೇನ್ ಪೆಟ್ರೋಲ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ3 Dec 2020 11:41 PM IST
share
ಇಂಡಿಯನ್ ಆಯಿಲ್‍ನಿಂದ ದೇಶದಲ್ಲಿ 100 ಆಕ್ಟೇನ್ ಪೆಟ್ರೋಲ್ ಬಿಡುಗಡೆ

ಬೆಂಗಳೂರು, ಡಿ.3: ಉನ್ನತ ಶ್ರೇಣಿಯ ಬೈಕ್ ಮತ್ತು ಕಾರುಗಳಿಗೆ ವಿಶ್ವದ ಅತ್ಯುತ್ತಮ ಪ್ರೀಮಿಯಂ ದರ್ಜೆಯ 100 ಆಕ್ಟೇನ್ ಪೆಟ್ರೋಲ್ ಅನ್ನು ಇಂಡಿಯನ್ ಆಯಿಲ್ ವತಿಯಿಂದ ದೇಶದಲ್ಲಿ ಪ್ರಪ್ರಥಮ ಬಾರಿಗೆ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉಕ್ಕು ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಇಲಾಖೆಯ ಕಾರ್ಯದರ್ಶಿ ತರುಣ್ ಕಪೂರ್, ಇಂಡಿಯಲ್ ಆಯಿಲ್ ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ, ನಿರ್ದೇಶಕ(ಸಂಶೋಧನೆ ಮತ್ತು ಅಭಿವೃದ್ಧಿ) ಡಾ.ಎಸ್.ಎಸ್.ವಿ.ರಾಮಕುಮಾರ್, ನಿರ್ದೇಶಕ(ಮಾರುಕಟ್ಟೆ) ಗುರ್‍ಮೀತ್ ಸಿಂಗ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳ ವರ್ಚುವಲ್ ಉಪಸ್ಥಿತಿಯಲ್ಲಿ ಎಕ್ಸ್.ಪಿ.100 ಎಂಬ ಬ್ರಾಂಡ್ ಹೊಂದಿರುವ ಪ್ರೀಮಿಯಂ ಗ್ರೇಡ್ ಪೆಟ್ರೋಲ್ ಅನ್ನು ದೇಶದ 10 ನಗರಗಳಲ್ಲಿ ಬಿಡುಗಡೆ ಮಾಡಲಾಯಿತು.

ಇಂಡಿಯಲ್ ಆಯಿಲ್‍ನ ಈ ಮಾರುಕಟ್ಟೆ ಕ್ರಮವನ್ನು ಶ್ಲಾಘಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಈ ಇಂಧನದೊಂದಿಗೆ, 100 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಟೇನ್ ಸಂಖ್ಯೆಯ ಪೆಟ್ರೋಲ್ ಮಾರಾಟ ಮಾಡುವ ವಿಶ್ವದ ಆಯ್ದ ದೇಶಗಳ ಸಾಲಿಗೆ ಭಾರತವು ಸೇರಿಕೊಂಡಿದೆ. ಎಕ್ಸ್.ಪಿ.100 ನಂತಹ ವಿಶ್ವದರ್ಜೆಯ ಉತ್ಪನ್ನಗಳ ಬಿಡುಗಡೆ ಎಲ್ಲರಿಗೂ ಉತ್ತಮ ಇಂಧನ ಪರಿಹಾರಗಳನ್ನು ಒದಗಿಸುವತ್ತ ನಾವು ಗಮನಹರಿಸಿದ್ದೇವೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದರು.

ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ವದೇಶಿ ತಂತ್ರಜ್ಞಾನದೊಂದಿಗೆ ಈ ಪರಿಹಾರಗಳನ್ನು ನಿಯೋಜಿಸಲಾಗುತ್ತಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ. ಪ್ರಧಾನ ಮಂತ್ರಿಯವರ ಇಂಧನ ಅಭಿಯಾನಕ್ಕೆ ಅನುಗುಣವಾಗಿದ್ದು, ಇಂಧನ ಕ್ಷೇತ್ರದಲ್ಲಿ ನಮ್ಮ ಸರಕಾರ ತೀವ್ರವಾಗಿ ಜಾರಿಗೆ ತರುತ್ತಿರುವ ಆತ್ಮನಿರ್ಭರ ಭಾರತ್ ಉಪಕ್ರಮದ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದರು.

ಇಂಡಿಯನ್ ಆಯಿಲ್ ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ ಮಾತನಾಡಿ, ಎಕ್ಸ್.ಪಿ.100 ಎಂಬುದು ನಿಮ್ಮ ಸಂವೇದನೆಯನ್ನು ಪುಳಕಿತಗೊಳಿಸುವಂತೆ ವಿನ್ಯಾಸಗೊಳಿಸಲಾದ ಅತ್ಯಂತ-ಆಧುನಿಕ, ಅಲ್ಟ್ರಾ-ಪ್ರೀಮಿಯಂ ಉತ್ಪನ್ನವಾಗಿದೆ. ಇದು ನಿಮ್ಮ ವಾಹನಕ್ಕೆ ಹೆಚ್ಚಿನ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ನೀಡುವುದಲ್ಲದೆ, ನಿಮಗೆ ಆಹ್ಲಾದಕರ ಚಾಲನೆಯ ಅನುಭವ ನೀಡುವಂಥ ಪೆಟ್ರೋಲ್‍ನ ಅತ್ಯುತ್ತಮ ದರ್ಜೆಯಾಗಿದೆ ಎಂದರು.

ಇಂಡಿಯನ್ ಆಯಿಲ್ ಎಕ್ಸ್.ಪಿ. 100 ಪ್ರೀಮಿಯಂ ಗ್ರೇಡ್ ಪೆಟ್ರೋಲ್ ಅನ್ನು ದೇಶದಾದ್ಯಂತ 15 ಗುರುತಿಸಲಾದ ನಗರಗಳಲ್ಲಿ ಎರಡು ಹಂತದಲ್ಲಿ ಪೂರೈಸಲು ನಿರ್ಧರಿಸಿದೆ. ಮೊದಲ ಹಂತದಲ್ಲಿ ಇದು 2020ರ ಡಿಸೆಂಬರ್ 1ರಿಂದ ದಿಲ್ಲಿ, ಗುರುಂಗಾವ್, ನೋಯ್ಡಾ, ಆಗ್ರಾ, ಜೈಪುರ, ಚಂಡೀಗಢ, ಲೂದಿಯಾನ, ಮುಂಬೈ, ಪುಣೆ ಮತ್ತು ಅಹ್ಮದಾಬಾದ್ ನ ಆಯ್ದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಲಭ್ಯವಾಗಲಿದೆ. ಎರಡನೇ ಹಂತದಲ್ಲಿ 100 ಆಕ್ಟೈನ್ ಪೆಟ್ರೋಲ್ ಚೆನ್ನೈ, ಬೆಂಗಳೂರು, ಹೈದ್ರಾಬಾದ್, ಕೋಲ್ಕತ್ತಾ ಮತ್ತು ಭುವನೇಶ್ವರದಲ್ಲಿ ಲಭ್ಯವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X