Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುರುಬರ ಎಸ್ಟಿ ಮೀಸಲಾತಿ ಹೋರಾಟ:...

ಕುರುಬರ ಎಸ್ಟಿ ಮೀಸಲಾತಿ ಹೋರಾಟ: 'ನಮ್ಮೆಲ್ಲರ ನಾಯಕ ಸಿದ್ದರಾಮಯ್ಯ ನೇತೃತ್ವ ವಹಿಸಲಿ' ಎಂದ ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ4 Dec 2020 9:34 PM IST
share
ಕುರುಬರ ಎಸ್ಟಿ ಮೀಸಲಾತಿ ಹೋರಾಟ: ನಮ್ಮೆಲ್ಲರ ನಾಯಕ ಸಿದ್ದರಾಮಯ್ಯ ನೇತೃತ್ವ ವಹಿಸಲಿ ಎಂದ ಎಚ್.ವಿಶ್ವನಾಥ್

ಮೈಸೂರು,ಡಿ.4: ಕುರುಬರಿಗೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಹೋರಾಟ ಮಾಡುತ್ತಿರುವುದರ ಹಿಂದೆ ಯಾವುದೇ ರಾಜಕೀಯವಿಲ್ಲ. ಇದರ ನೇತೃತ್ವವನ್ನು ನಮ್ಮೆಲ್ಲರ ನಾಯಕರಾದ ಸಿದ್ದರಾಮಯ್ಯನವರೇ ವಹಿಸಿಕೊಳ್ಳಲಿ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬರನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂಬುದು ಇಂದಿನ ಹೋರಾಟವಲ್ಲ. ಈ ಹಿಂದೆಯೂ ನಡೆದಿದೆ. ಇದರಲ್ಲಿ ಆರೆಸ್ಸೆಸ್ ಅವರದಾಗಲಿ ಬಿಜೆಪಿ ಅವರದಾಗಲಿ ಕೈವಾಡ ಇಲ್ಲ. ಸಮುದಾಯದ ಏಳಿಗೆಗಾಗಿ ಈ ಹೋರಾಟ ಮಾಡಲಾಗುತ್ತಿದೆ. ಸಮುದಾಯದ ಬೆಂಬಲ ಪಡೆದು ಇಷ್ಟೊಂದು ದೊಡ್ಡ ಎತ್ತರಕ್ಕೆ ಬೆಳೆದ ಸಿದ್ದರಾಮಯ್ಯ ನವರೇ ಇದರ ನೇತೃತ್ವ ವಹಿಸಲಿ. ಅವರ ಹಿಂದೆ ನಾವೆಲ್ಲರೂ ಹೋಗಲು ಸಿದ್ಧ ಎಂದು ಹೇಳಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಇಡೀ ಕುರುಬ ಸಮುದಾಯ ಅವರ ಬೆಂಬಲಕ್ಕೆ ನಿಂತುಕೊಂಡಿತ್ತು. ಇತರ ಸಮುದಾಯಗಳೊಡಗೂಡಿ ರಾಜ್ಯದ ಮುಖ್ಯಮಂತ್ರಿಯೂ ಆದರು. ಈಗ ಸಮುದಾಯದವರ ಏಳಿಗೆಗೆ ಶ್ರಮಿಸಬೇಕಾಗಿರುವುದು ಸಿದ್ದರಾಮಯ್ಯ ಅವರ ಕರ್ತವ್ಯ. ಹಾಗಾಗಿ ಸಿದ್ದರಾಮಯ್ಯ ಕುರುಬರನ್ನು ಎಸ್ಟಿಗೆ ಸೇರಿಸುವ ವಿಚಾರದಲ್ಲಿ ಮುಂಚೂಣಿ ವಹಿಸಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಸಿಎಂ ಆಗಲು ನಮ್ಮ ಸಮುದಾಯ ಎಲ್ಲವನ್ನೂ ಕೊಟ್ಟಿದೆ. ಅದೇ ಸಮುದಾಯಕ್ಕೆ ಹೋರಾಟ ಯಾಕೆ ಅಂತೀರಲ್ಲ. ಬಹುಶಃ ನೀವು ಹೋರಾಟ ಮಾಡಿಲ್ಲ ಅನ್ನಿಸುತ್ತದೆ. ನೀವು ಮಾರ್ಗದರ್ಶನ ಮಾಡಿದರೆ ಈ ಹೋರಾಟ ಇನ್ನೂ ಎತ್ತರಕ್ಕೆ ಬೆಳೆಯುತ್ತಿತ್ತು. ಆದರೆ ನೀವು ಹೋರಾಟವೇ ಬೇಡ ಅಂತ ಹೇಳೋದು ಎಷ್ಟು ಸರಿ. ಕನಕಗೋಪುರ ಬಿದ್ದಾಗ, ಮಠ ಕಟ್ಟಿದಾಗ ನೀವು ಇರಲಿಲ್ಲ. ಮಠ ಕಟ್ಟೋದು ಅಷ್ಟು ಸುಲಭ ಅಲ್ಲ. ಕಾಗಿನೆಲೆ ಮಹಾಸಂಸ್ಥಾಪಕ ಅಧ್ಯಕ್ಷ ನಾನೇ ಆಗಿದ್ದೇನೆ. ಆಗೆಲ್ಲ ನೀವು ಬರದಿದ್ದರೂ ನಿಮ್ಮ ಹೆಸರು ಹಾಕಿತ್ತು. ನೀವು ಹೋರಾಟಕ್ಕೆ ಬೆಂಬಲ ಸೂಚಿಸಬೇಕಿತ್ತು ಎಂದರು.

ನೀವು ಮುಖ್ಯಮಂತ್ರಿಯಾಗಿದ್ದ ವೇಳೆ ದೇಶದಲ್ಲಿ ಯಾರೂ ಮಾಡದ ಸಾಹಸಕ್ಕೆ ಕೈ ಹಾಕಿದ್ದೀರಿ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ದೀರಿ. ಆ ಸಮಿಕ್ಷೆ ವರದಿ ಚರ್ಚೆಗೆ ಬಂದಿದ್ದರೆ ನೀವು ಮತ್ತೆ ಮುಖ್ಯಮಂತ್ರಿ ಆಗುತ್ತಿದ್ದಿರೇನೊ, ಇರಲಿ ಅದೆಲ್ಲವೂ ಮುಗಿದಿದೆ. ಆದರೆ ಕುರುಬ ಸಮುದಾಯ ಎಸ್ಟಿಗೆ ಸೇರುವ ಹೋರಾಟ ಇನ್ನೂ ಕಠಿಣವಾಗಿ ಆಗಬೇಕಿದೆ. ಅದಕ್ಕಾಗಿ ನಿಮ್ಮ ಸಹಕಾರ ಹಾಗೂ ಬೆಂಬಲ ಬೇಕು. ನಮ್ಮ ಜೊತೆ ಹೋರಾಟಕ್ಕೆ ಬನ್ನಿ ಎಂದು ಬಹಿರಂಗವಾಗಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು.

ಏಕವಚನದಲ್ಲಿ ಮಾತನಾಡುವುದನ್ನು ಬಿಡಿ: ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡುವುದನ್ನು ಬಿಡಿ. ಎಲ್ಲರನ್ನೂ ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ. ಮುಂದಾದರೂ ಎಲ್ಲರನ್ನು ಬಹುವಚನದಲ್ಲಿ ಮಾತನಾಡಿಸಿ. ದೇವಾರಾಜ್ ಅರಸ್ ಅವರಂತೆ ಎಲ್ಲರನ್ನೂ ಗೌರವಿಸೋದು ಕಲಿಯಿರಿ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.

5 ಲಕ್ಷ ರೂ.: ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತು ಬಿ.ಆರ್.ಸಂತೋಷ್ ಉಪಚುನಾವಣೆ ಸಮಯದಲ್ಲಿ ಹಣ ನೀಡದೆ ವಂಚಿಸಿದ್ದರು ಎಂದು ಹೇಳಿದ್ದು ನಿಜ. ದೊಡ್ಡ ಮೊತ್ತ ಅಂದರೆ 5 ಲಕ್ಷ ರೂ. ಎಂದು ವಿಶ್ವನಾಥ್ ಹೇಳಿದರು.

ನನ್ನ ಮಟ್ಟಕ್ಕೆ ದೊಡ್ಡ ಮೊತ್ತ ಎಂದರೆ 5 ಲಕ್ಷ. ನೀವು ಮುಖ್ಯಮಂತ್ರಿ ಆಗಿದ್ದವರು ಹಾಗಾಗಿ ನಿಮಗೆ ಕೋಟ್ಯಂತರ ರೂ ದೊಡ್ಡ ಮೊತ್ತ ಇರಬೇಕು. ನನಗೆ ಇದೇ ದೊಡ್ಡ ಮೊತ್ತ. ಅದನ್ನು ಯೋಗೇಶ್ವರ್ ಮತ್ತು ಬಿ.ಆರ್.ಸಂತೋಷ್ ತೆಗೆದುಕೊಂಡು ಹೋದರು ಎಂದು ಈಗಲೂ ಹೇಳುತ್ತೇನೆ. ನೀವು ಜಿ.ಟಿ.ದೇವೇಗೌಡರಿಗೆ ಹಣ ಕೊಟ್ಟಿದ್ದೇವೆ ಎಂದು ಹೇಳಿದರಲ್ಲ. ಅದು ಯಾವ ಹಣ, ಬ್ಲಾಕ್ ಮನಿಯೊ ವೈಟ್ ಮನಿಯೋ ಎಷ್ಟು ಕೋಟಿ ಎಂದು ನೀವು ಬಹಿರಂಗ ಪಡಿಸಿ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ತಪ್ಪು
ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ತಪ್ಪು ಎಂದ ವಿಶ್ವನಾಥ್, ನಾಳಿನ ಬಂದ್ ಕರೆ ವಿಚಾರ ಏನೇ ಇರಲಿ. ಮರಾಠ ಪ್ರಾಧಿಕಾರ ಮಾಡಿದ್ದು ತಪ್ಪು. ಭಾಷೆಗಾಗಿ ಗಡಿಯಲ್ಲಿ ಹೋರಾಟ ಆಗುತ್ತಿದೆ. ಹಾಗಂತ ಭಾಷೆಗೊಂದು ಪ್ರಾಧಿಕಾರ ಮಾಡೋಕೆ ಆಗುತ್ತಾ? ನಾಳೆ ಮತ್ತೊಂದು ಭಾಷೆಯವರು ಒತ್ತಾಯ ಮಾಡಿದರೆ ಏನ್ ಮಾಡೋದು. ನಾನು ಕನ್ನಡ ಹೋರಾಟದಿಂದ ಬಂದವನು. ನನಗೆ ಭಾಷೆ ಬಗ್ಗೆ ಅಭಿಮಾನ ಇದೆ. ಹಾಗಾಗಿ ಮರಾಠ ಪ್ರಾಧಿಕಾರ ಮಾಡಿದ್ದನ್ನು ನಾನು ಒಪ್ಪಲ್ಲ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X