Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೆ:...

ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೆ: ಆಮ್ ಆದ್ಮಿ ಪಕ್ಷ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ4 Dec 2020 11:01 PM IST
share

ಬೆಂಗಳೂರು, ಡಿ.4: ಮನೆ ಮುಂದೆ ವಾಹನಗಳನ್ನು ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೇನೊ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ ‘ತೀನ್ ಗುನಾ ಲಗಾನ್ ಲಗೇಗಾ’(ಮೂರು ಪಟ್ಟು ತೆರಿಗೆ ಕಟ್ಟಬೇಕು) ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ವ್ಯಂಗ್ಯವಾಡಿದರು.

ಶುಕ್ರವಾರ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಭಾರಿ ಪ್ರಮಾಣದಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕ ಹೆಚ್ಚಳ ಮಾಡಲು ಬಿಬಿಎಂಪಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಉಸಿರಾಡುವುದಕ್ಕೂ ಬಿಬಿಎಂಪಿ ಶುಲ್ಕ ವಿಧಿಸಬಹುದು ಎಂದರು.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಾರ್ಕಿಂಗ್ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ ಎನ್ನುವುದೇ ಅತ್ಯಂತ ಮೂರ್ಖತನದ ಹಾಗೂ ಅವೈಜ್ಞಾನಿಕ ನಿರ್ಧಾರ. ಈಗಾಗಲೇ ನಗರದ ಅನೇಕ ಕಡೆ ಪಾರ್ಕಿಂಗ್ ದಂಧೆ ನಡೆಯುತ್ತಿದ್ದು ಇದನ್ನೇ ಸರಿಯಾಗಿ ನಿಭಾಯಿಸಲು ಕಷ್ಟ ಪಡುತ್ತಿರುವ ಸರಕಾರ ಇನ್ನು ಇಡೀ ಬೆಂಗಳೂರನ್ನು ಸುಧಾರಿಸುವುದಕ್ಕೆ ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ಸರಕಾರದ ಒಳ ಜಗಳದಿಂದ ಆಡಳಿತ ಹಳಿ ತಪ್ಪಿದೆ. ಈ ಗಮನವನ್ನು ಬೇರೆಡೆ ಸೆಳೆಯಲು ಪ್ರತಿದಿನ ಇಂತಹ ಮೂರ್ಖ ಕಾನೂನುಗಳನ್ನು ಸರಕಾರ ಚರ್ಚೆಗೆ ತರುತ್ತಿದೆ ಎಂದ ಅವರು, ಬೆಂಗಳೂರಿನಲ್ಲಿ 1.3 ಕೋಟಿ ಜನಸಂಖ್ಯೆ ಇದ್ದು ವಾಹನಗಳ ಸಂಖ್ಯೆಯೇ 95 ಲಕ್ಷವಿದೆ. ಈ ನಿರ್ಧಾರದಿಂದ ಹೆಚ್ಚು ತೊಂದರೆಗೆ ಒಳಗಾಗುವವರು ನಗರದಲ್ಲಿರುವ ಮಧ್ಯಮ ವರ್ಗ ಹಾಗೂ ಬಡವರು. ಇವರೆಲ್ಲ ಸ್ವಂತ ವಾಹನ ಹೊಂದಬಾರದೆ ಮುಖ್ಯಮಂತ್ರಿಗಳೆ, ಹಾಗಾದರೆ ಈ ನಗರ ಕೇವಲ ದುಡ್ಡು ಇದ್ದವರಿಗೆ ಮಾತ್ರವೇ ಎಂದು ಕಿಡಿಕಾರಿದರು.

ದುಬಾರಿ ಕಾರು ಹೊಂದಿರುವ ವ್ಯಕ್ತಿ ಹಾಗೂ ಪೈಸೆಗೆ, ಪೈಸೆ ಸೇರಿಸಿ ಸ್ವಂತ ವಾಹನ ಕನಸು ಕಾಣುವ ಬಡ ನಾಗರಿಕನೂ ಬಿಬಿಎಂಪಿ ಹಾಗೂ ಸರಕಾರದ ಕಣ್ಣಲ್ಲಿ ಒಂದೇ ಎನ್ನುವಂತಾಗಿದೆ. ನಿಮ್ಮ ಕಣ್ಣಲ್ಲಿ ಇದು ಸಮಾನತೆಯೇ ಎಂದು ಪ್ರಶ್ನಿಸಿದ ಮೋಹನ್ ದಾಸರಿ, ಸಾರ್ವಜನಿಕ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಿ, ಜನರು ಸ್ವಂತ ವಾಹನಗಳ ಅವಲಂಬನೆ ಕಡಿಮೆ ಮಾಡಬೇಕು. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡಬೇಕು. ಈಗಾಗಲೇ ನಗರದ 80 ಭಾಗಗಳಲ್ಲಿ ಇರುವ ಪಾರ್ಕಿಂಗ್ ಶುಲ್ಕ ಗೊಂದಲ ನಿವಾರಿಸಬೇಕು. ಬಿಬಿಎಂಪಿ ತಂದಿರುವ ಈ ಪ್ರಸ್ತಾವನೆಯನ್ನು ಸರಕಾರ ತಿರಸ್ಕರಿಸಬೇಕು. ಅಲ್ಲದೆ, ರಸ್ತೆ ಬದಿ ನಿಂತಿರುವ ಬಳಸದೆ ಇರುವ ಹಾಗೂ ಅನವಶ್ಯಕ ವಾಹನಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X