Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎನ್‌ಯು ಹಾಸ್ಟೆಲ್ ನಿವಾಸಿಗಳಿಗೆ 2...

ಜೆಎನ್‌ಯು ಹಾಸ್ಟೆಲ್ ನಿವಾಸಿಗಳಿಗೆ 2 ಸಾವಿರ ರೂ. ದಂಡ

ವಿದ್ಯಾರ್ಥಿ ನಿಲಯಕ್ಕೆ ‘ಆಕ್ರಮ ಪ್ರವೇಶ’ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Dec 2020 11:54 PM IST
share
ಜೆಎನ್‌ಯು ಹಾಸ್ಟೆಲ್ ನಿವಾಸಿಗಳಿಗೆ 2 ಸಾವಿರ ರೂ. ದಂಡ

ಹೊಸದಿಲ್ಲಿ,ನ.4: ಹಾಸ್ಟೆಲ್ ನಿವಾಸಿಗಳ ಮರುಪ್ರವೇಶಕ್ಕೆ ಅಧಿಕೃತ ಅನುಮತಿ ನೀಡುವುದಕ್ಕೆ ಮುಂಚಿತವಾಗಿಯೇ ಹಾಸ್ಟೆಲ್‌ಗಳನ್ನು ಪ್ರವೇಶಿಸಿದರೆನ್ನಲಾದ ಜವಾ ಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳಿಗೆ, ವಿವಿಯ ಆಡಳಿತವು 2 ಸಾವಿರ ರೂ. ದಂಡವನ್ನು ವಿಧಿಸಿದೆ.

  ಒಂದು ವೇಳೆ ವಿದ್ಯಾರ್ಥಿಯು ಒಂದು ವಾರದೊಳಗೆ ದಂಡವನ್ನು ಪಾವತಿಸಲು ವಿಫಲನಾದಲ್ಲಿ 2 ಸಾವಿರ ರೂ.ಗಳ ಹೆಚ್ಚುವರಿ ದಂಡವನ್ನು ವಿಧಿಸಲಾಗುವುದು ಹಾಗೂ ಆತ/ಆಕೆಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆಯೆಂದು ಜೆಎನ್‌ಯುನ ಕೊಯ್ನಾ ಹಾಸ್ಟೆಲ್‌ನ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಹಾಸ್ಟೆಲ್‌ನ ಕನಿಷ್ಠ 5 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದವರು ಹೇಳಿದ್ದಾರೆ.

  ಕಳೆದ ಮಾರ್ಚ್‌ನಲ್ಲಿ ರಾಷ್ಟ್ರವ್ಯಾಪಿಯಾಗಿ ಕೋವಿಡ್-19 ಲಾಕ್‌ಡೌನ್ ಹೇರಲಾಗಿದ್ದ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ವಾಪಸಾಗಿದ್ದರು. ಸೆಪ್ಟಂಬರ್ ತಿಂಗಳಿನಿಂದೀಚೆಗೆ ಹಂತಹಂತವಾಗಿ ಮರುಪ್ರವೇಶವನ್ನು ನೀಡಬೇಕೆಂಬ ಬೇಡಿಕೆಯ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ಗೆ ಮರಳಲು ಅವಕಾಶವನ್ನು ನೀಡಿರಲಿಲ್ಲ. ಇದೀಗ ಕೇವಲ ವಿಜ್ಞಾನ ವಿಭಾಗದ ಪಿಎಚ್‌ಡಿ, ಎಂ.ಟೆಕ್ ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ಮಾತ್ರವೇ ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

  ಇತರ ಬಹುತೇಕ ಶಿಕ್ಷಣ ಸಂಸ್ಥೆಗಳು ಹಂತಹಂತವಾಗಿ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿರುವುದರಿಂದ ಜೆಎನ್‌ಯು ಕೂಡಾ ಆದನ್ನು ಅನುಸರಿಸುವಂತೆ ವಿವಿಯ ವಿದ್ಯಾರ್ಥಿಗಳ ಒಕ್ಕೂಟವು ಆಗ್ರಹಿಸಿತ್ತು.

 ಕೊಯ್ನಾ ಹಾಸ್ಟೆಲ್‌ನ ನಿವಾಸಿಯಾದ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ್ಷೆ ಐಶೆ ಘೋಷ್ ಅವರಿಗೂ ಗುರುವಾರ ನೋಟಿಸ್ ಜಾರಿಯಾಗಿದೆ. ಹಾಸ್ಟೆಲ್‌ನ ಭದ್ರತಾ ಕಾವಲುಗಾರ ನೀಡಿದ ಮಾಹಿತಿಯಂತೆ ಐಶೆ ಘೋಷ್ ಅವರು ನವೆಂಬರ್ 5ರಂದು ಮುಂಜಾನೆ 4:30ರ ವೇಳೆಗೆ ಕೊಯ್ನಾ ಹಾಸ್ಟೆಲ್‌ನಲ್ಲಿ ಕಂಡುಬಂದಿದ್ದರು. ಹೀಗಾಗಿ ಅವರಿಗೆ 2 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದು ವಿವಿಯ ಆಡಳಿತ ಸಮಿತಿಯು ನೋಟಿಸ್‌ನಲ್ಲಿ ತಿಳಿಸಿದೆ.

ಜೆಎನ್‌ಯುನ ಚಂದ್ರಭಾಗ ಹಾಸ್ಟೆಲ್‌ನ ಮೂವರು ವಿದ್ಯಾರ್ಥಿಗಳಿಗೂ ದಂಡ ವಿಧಿಸಲಾಗಿದೆಯೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X