Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಡಿಸೆಂಬರ್ 15ರೊಳಗೆ ಎಲ್ಲ ಶಾಲೆಗಳನ್ನು...

ಡಿಸೆಂಬರ್ 15ರೊಳಗೆ ಎಲ್ಲ ಶಾಲೆಗಳನ್ನು ತೆರೆಯಲೇಬೇಕು

ಡಾ.ಶ್ರೀನಿವಾಸ ಕಕ್ಕಿಲ್ಲಾಯಡಾ.ಶ್ರೀನಿವಾಸ ಕಕ್ಕಿಲ್ಲಾಯ5 Dec 2020 12:09 PM IST
share
ಡಿಸೆಂಬರ್ 15ರೊಳಗೆ ಎಲ್ಲ ಶಾಲೆಗಳನ್ನು ತೆರೆಯಲೇಬೇಕು

ಡಿಸೆಂಬರ್ 15ರೊಳಗೆ ಬಾಲವಾಡಿಯಿಂದ 12ರವರೆಗಿನ ಎಲ್ಲಾ ತರಗತಿಗಳನ್ನು ಎಲ್ಲಾ ಶಾಲೆಗಳಲ್ಲಿ ತೆರೆಯಲೇ ಬೇಕು. ಇನ್ನು ಕಾಯುವುದಾಗದು.

ಶಾಲೆ ಮುಚ್ಚಿರುವುದೇ ತಪ್ಪು. ಇನ್ನು ತೆರೆಯದಿದ್ದರೆ ಅದು ಘನ ಘೋರ ಅಪರಾಧವಾಗುತ್ತದೆ, 3-20 ವರ್ಷದ ಎಲ್ಲರ ಮೇಲೂ ಶಾಶ್ವತವಾದ ಹಾನಿಯುಂಟು ಮಾಡಲಿದೆ. ಇವರಿಗೆ ಕೊರೋನ ಏನೂ ಮಾಡುವುದಿಲ್ಲ, ಮಾಡಿರುವುದಕ್ಕೆ ಯಾರ ಬಳಿಯಾದರೂ ಸಾಕ್ಷ್ಯಾಧಾರಗಳಿದ್ದರೆ ತೋರಿಸಿ. ಶಾಲೆ ಮುಚ್ಚಿರುವ ಈ ಮಹಾ ತಪ್ಪು ಹಾನಿ ಮಾಡಿದೆ, ಅದು ಶಾಶ್ವತವಾಗಿರಲಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ, ಸಿ.ಡಿ.ಸಿ., ಯುನಿಸೆಫ್ ಮತ್ತಿತರ ಅನೇಕ ಸಂಸ್ಥೆಗಳು ಈಗಾಗಲೇ ಬರೆದಿವೆ. ದಿನಕ್ಕೆ 2 ಗಂಟೆಗೂ ಹೆಚ್ಚು ಕಾಲ ಫೋನ್, ಟಿವಿ ಪರದೆ ನೋಡುತ್ತಿದ್ದರೆ 3-5 ವರ್ಷದ ಮಕ್ಕಳ ಭಾಷೆ, ಬರವಣಿಗೆ, ಗ್ರಹಿಕೆಗಳು ಕುಗ್ಗುತ್ತವೆ ಎಂದೂ, 5-7 ಗಂಟೆ ಬಳಸಿದರೆ ಮಿದುಳಿನ ಬೆಳವಣಿಗೆಯೇ ಕುಂಠಿತಗೊಂದು ಮಿದುಳು ತೆಳ್ಳಗಾಗಿ ಶಾಶ್ವತ ಹಾನಿಯಾಗುತ್ತದೆಂದೂ ಅಧ್ಯಯನಗಳು ತೋರಿಸಿವೆ. ಕೊರೋನ ನೆಪದಲ್ಲಿ ಶಾಲೆಗಳನ್ನು ಮುಚ್ಚಿದ್ದರಿಂದ ಮಕ್ಕಳ ಕಲಿಕೆಯು ನಿಂತದ್ದಷ್ಟೇ ಅಲ್ಲ, ಮಕ್ಕಳ ಸಾಗಣೆ, ದುಡಿತ, ಲೈಂಗಿಕ ದೌರ್ಜನ್ಯ, ಇತರ ದೌರ್ಜನ್ಯಗಳು, ಬಾಲ್ಯ ವಿವಾಹ, ಕುಪೋಷಣೆ ಎಲ್ಲವೂ ಬಹಳಷ್ಟು ಹೆಚ್ಚುತ್ತಿವೆ ಎಂಬ ವರದಿಗಳು ಎಲ್ಲೆಡೆಯಿಂದಲೂ ಪ್ರತಿನಿತ್ಯವೂ ಬರುತ್ತಿವೆ.

ಕರ್ನಾಟಕ ಸರಕಾರವೇ ಹೇಳಿರುವಂತೆ ರಾಜ್ಯದಲ್ಲಿ ಕೊರೋನ ಸಾವಿನ ಪ್ರಮಾಣ 0.07% ಅಂದರೆ ಹತ್ತು ಸಾವಿರಕ್ಕೆ ಒಬ್ಬರು. ಸೋಂಕಿತರಲ್ಲಿ 99% ಹೆಚ್ಚಿನವರು ಯಾವುದೇ ಚಿಕಿತ್ಸೆಯಿಲ್ಲದೆ ಮನೆಯಲ್ಲೇ ಇದ್ದು ಗುಣಮುಖರಾಗುತ್ತಾರೆ, ಸಾವಿರಕ್ಕೆ 4 ಮಂದಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಬೇಕಾಗುತ್ತದೆ, ಅವರಲ್ಲಿ 70% ಆಧುನಿಕ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಾರೆ.

ಮಕ್ಕಳಲ್ಲಿ ರೋಗಲಕ್ಷಣಗಳಿರುವುದೇ ಅಪರೂಪ, ಸಮಸ್ಯೆಗಳಾಗುವುದು ಇನ್ನೂ ಅಪರೂಪ, ಸಾವುಂಟಾಗುವ ಸಾಧ್ಯತೆಗಳು ತೀರಾ ಕಡಿಮೆ. ಅಂದರೆ 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಕೊರೋನದಿಂದ ಅತಿ ಹೆಚ್ಚು ಸುರಕ್ಷಿತರು, ಅವರನ್ನು ಮನೆಯೊಳಗೆ ಕೂಡಿ ಹಾಕುವುದಕ್ಕೆ ಯಾವ ಕಾರಣವೂ ಇಲ್ಲ.

ರಾಜ್ಯದಲ್ಲಿ ಮೃತ ಪಟ್ಟವರಲ್ಲಿ ಮಕ್ಕಳ (0-20 ವಯಸ್ಸು) ಪ್ರಮಾಣ 0.7%. ಮೃತರಲ್ಲಿ 10 ವರ್ಷಕ್ಕಿಂತ ಕೆಳಗಿನವರು 0.2%, 10-20ರವರು 0.5%. ಇವರೂ ಕೂಡ ಮೊದಲೇ ಅತಿ ಗಂಭೀರ ಸಮಸ್ಯೆಗಳನ್ನು ಹೊಂದಿದ್ದವರಾಗಿದ್ದರು. ಅಂದರೆ ಸಾಮಾನ್ಯ ಮಕ್ಕಳಿಗೆ ಕೊರೋನದಿಂದ ಅಪಾಯ ನಗಣ್ಯ, ಶಾಲೆ ಮುಚ್ಚುವ ಅಗತ್ಯವಂತೂ ಇಲ್ಲವೇ ಇಲ್ಲ.

ಕೊರೋನ ನಿಭಾಯಿಸುವುದರ ಮೂಲ ಉದ್ದೇಶದ ಬಗ್ಗೆಯೇ ವಿಷಯ ಸ್ಪಷ್ಟತೆ ಇಲ್ಲದಿರುವುದು ಈ ಎಲ್ಲ ಅವಾಂತರಗಳಿಗೆ ಕಾರಣ. ಕೊರೋನ ಸೋಂಕು ಉಂಟಾಗುವುದನ್ನು ತಡೆಯಲು ಸಾಧ್ಯವೇ ಇಲ್ಲ ಎಂದ ಮೇಲೆ ಅಂಥ ಉದ್ದೇಶದಿಂದ ಶಾಲೆ ಮುಚ್ಚುವುದು ಅಪರಾಧ. ಕೊರೋನ ನಿಭಾಯಿಸುವ ಉದ್ದೇಶ ತೀವ್ರ ಸಮಸ್ಯೆಗಳನ್ನು ಮತ್ತು ಸಾವುಗಳನ್ನು ತಡೆಯುವುದು, ಅದಕ್ಕೆ ಶಾಲೆ ಮುಚ್ಚಿ ಯಾವ ಪ್ರಯೋಜನವೂ ಇಲ್ಲ.

ಲಸಿಕೆಗಳು ಬರುವುದಕ್ಕೆ ಇನ್ನೂ ಕೆಲವು ತಿಂಗಳು ಬೇಕು, ಬಂದರೂ ಅವು ಮಕ್ಕಳಿಗೆ ದೊರೆಯವು, ಇಲ್ಲಾಗಲೀ, ಇತರ ದೇಶಗಳಲ್ಲಾಗಲೀ ಮಕ್ಕಳಿಗೆ ಲಸಿಕೆ ನೀಡುವ ಪ್ರಸ್ತಾವವೇ ಇಲ್ಲ. ಮಕ್ಕಳಿಗೆ ಕೊರೋನ ಬಾಧಿಸುವುದಿಲ್ಲ ಎಂದ ಮೇಲೆ ಅವುಗಳ ಅಗತ್ಯವೂ ಇಲ್ಲ.

ಆದ್ದರಿಂದ ಕೊರೋನಕ್ಕಾಗಿ ಶಾಲೆಗಳನ್ನು ಮುಚ್ಚಲು ಕಾರಣಗಳು ಸೊನ್ನೆ (ಯಾರಲ್ಲಾದರೂ ಸಾಕ್ಷ್ಯಾಧಾರಿತ ಕಾರಣಗಳಿದ್ದರೆ ಕೊಡಿ). ಶಾಲೆಗಳಿಲ್ಲದಿರುವುದರಿಂದ ಮಕ್ಕಳ ಮೇಲಾಗಿರುವ ಹಾನಿಯು ಬಹಳಷ್ಟು, ಮತ್ತು ಶಾಶ್ವತ. ಒಟ್ಟಿನಲ್ಲಿ ಕೊರೋನ ಮಕ್ಕಳಿಗೆ ಯಾವ ಅಪಾಯವನ್ನೂ ಉಂಟು ಮಾಡುವುದಿಲ್ಲ, ಶಾಲೆಯಿಲ್ಲದಿರುವುದು ಬಹಳಷ್ಟು ಹಾನಿ ಮಾಡುತ್ತದೆ.

ಡಿಸೆಂಬರ್ 15ರೊಳಗೆ ಶಾಲೆ ತೆರೆಯಲೇ ಬೇಕು.


ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಡಿ.5ರ ಫೇಸ್ ಬುಕ್ ಪೋಸ್ಟ್ ನಿಂದ

share
ಡಾ.ಶ್ರೀನಿವಾಸ ಕಕ್ಕಿಲ್ಲಾಯ
ಡಾ.ಶ್ರೀನಿವಾಸ ಕಕ್ಕಿಲ್ಲಾಯ
Next Story
X