Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಸ್‌ಮಸ್ ಸಂಭ್ರಮದಲ್ಲಿ...

ಕ್ರಿಸ್‌ಮಸ್ ಸಂಭ್ರಮದಲ್ಲಿ ಪಾಲ್ಗೊಳ್ಳದಂತೆ ಹಿಂದುಗಳಿಗೆ ಬಜರಂಗದಳದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 Dec 2020 7:15 PM IST
share
ಕ್ರಿಸ್‌ಮಸ್ ಸಂಭ್ರಮದಲ್ಲಿ ಪಾಲ್ಗೊಳ್ಳದಂತೆ ಹಿಂದುಗಳಿಗೆ ಬಜರಂಗದಳದ ಎಚ್ಚರಿಕೆ

ಗುವಾಹಟಿ, ಡಿ.5: ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚ್‌ಗೆ ಹೋಗುವ ಹಿಂದುಗಳನ್ನು ಥಳಿಸುತ್ತೇವೆ ಎಂದು ಬಲಪಂಥೀಯ ಹಿಂದು ಸಂಘಟನೆ ಬಜರಂಗದಳದ ಮುಖಂಡ ಎಚ್ಚರಿಕೆ ನೀಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕ್ರಿಶ್ಚಿಯನ್ನರು ಬಹುಸಂಖ್ಯಾತರಾಗಿರುವ ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನಲ್ಲಿ ರಾಮಕೃಷ್ಣ ಮಿಷನ್ ಅಂಗಸಂಸ್ಥೆ ವಿವೇಕಾನಂದ ಕೇಂದ್ರವನ್ನು ಮುಚ್ಚಿರುವುದರಿಂದ ತನಗೆ ಆಘಾತವಾಗಿದೆ. ಆದ್ದರಿಂದ ಕ್ರಿಸ್‌ಮಸ್ ದಿನಾಚರಣೆ ಮತ್ತು ಹಬ್ಬದಲ್ಲಿ ಭಾಗವಹಿಸಲು ಹಿಂದೂಗಳಿಗೆ ಅವಕಾಶ ನೀಡುವುದಿಲ್ಲ ಎಂದು ಬಜರಂಗದಳದ ಮಾತೃಸಂಸ್ಥೆ ವಿಶ್ವಹಿಂದೂ ಪರಿಷದ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀತು ನಾಥ್ ಎಂಬಾತ ಎಚ್ಚರಿಕೆ ನೀಡಿದ್ದಾನೆ.

ನಮ್ಮ ಪ್ರಾರ್ಥನಾ ಕೇಂದ್ರವನ್ನು ಕ್ರಿಶ್ಚಿಯನ್ನರು ಮುಚ್ಚಿದ್ದರೂ, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಚರ್ಚ್‌ಗೆ ತೆರಳುವ ಹಿಂದುಗಳನ್ನು ಕಂಡರೆ ನನಗೆ ಸಿಟ್ಟು ಬರುತ್ತದೆ. ಈ ಬಾರಿಯ ಕ್ರಿಸ್‌ಮಸ್‌ನಲ್ಲಿ ಯಾವುದೇ ಹಿಂದುಗಳು ಚರ್ಚ್‌ಗೆ ಹೋಗದಂತೆ ನಾವು ನೋಡಿಕೊಳ್ಳುತ್ತೇವೆ.

ನಾವು ಹಿಂದುಗಳನ್ನು ಥಳಿಸಿದರೆ ಮರುದಿನದ ಪತ್ರಿಕೆಯಲ್ಲಿ ‘ಗೂಂಡಾ ದಳ’ದಿಂದ ದಾಂಧಲೆ ಎಂದು ಸುದ್ದಿಯಾಗುತ್ತದೆ. ಆದರೆ ಇದು ನಮ್ಮ ಉದ್ದೇಶವಲ್ಲ ಎಂದು ನಾಥ್ ಹೇಳಿದ್ದು ಈ ವೀಡಿಯೊ ವೈರಲ್ ಆಗಿದೆ. ಅಸ್ಸಾಂನ ಕಚಾರ್ ಜಿಲ್ಲೆಯ ಸಿಲ್‌ಚಾರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಥ್ ಮಾತನಾಡಿದ್ದು ಈ ಸಂದರ್ಭ ಸಭೆಯಲ್ಲಿ ಕೇಸರಿ ಬಟ್ಟೆ ಧರಿಸಿದ್ದ ಸುಮಾರು 70 ಮಂದಿ ‘ಜೈ ಶ್ರೀರಾಂ’ ಎಂದು ಘೋಷಿಸುವುದೂ ವೀಡಿಯೊದಲ್ಲಿ ದಾಖಲಾಗಿದೆ. ಸಿಲ್‌ಚಾರ್‌ನಲ್ಲಿ ಯಾವುದೇ ಪ್ರಾರ್ಥನಾ ಕೇಂದ್ರವನ್ನು ಮುಚ್ಚಿಲ್ಲ. ರಜಾ ದಿನದ ಹಿನ್ನೆಲೆಯಲ್ಲಿ, ಅಲ್ಲಿರುವ ಸಾಂಸ್ಕೃತಿಕ ಕೇಂದ್ರದ ಗೇಟ್‌ಗೆ ಬೀಗ ಜಡಿಯಲಾಗಿದೆ ಎಂದು ಮೇಘಾಲಯ ಸರಕಾರದ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X