Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತದಾರರ ಪಟ್ಟಿ ಪಾರದರ್ಶಕವಾಗಿರಲಿ:...

ಮತದಾರರ ಪಟ್ಟಿ ಪಾರದರ್ಶಕವಾಗಿರಲಿ: ಡಾ.ಎಂ.ಟಿ.ರೇಜು

ವಾರ್ತಾಭಾರತಿವಾರ್ತಾಭಾರತಿ5 Dec 2020 7:52 PM IST
share
ಮತದಾರರ ಪಟ್ಟಿ ಪಾರದರ್ಶಕವಾಗಿರಲಿ: ಡಾ.ಎಂ.ಟಿ.ರೇಜು

ಉಡುಪಿ, ಡಿ.5: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ. ಅಂತಿಮ ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಎಂ.ಟಿ.ರೇಜು ಹೇಳಿದ್ದಾರೆ.

ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ ಗಳು, ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳು ಮತ್ತು ಸಹಾಯಕ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪರಿಷ್ಕರಣೆ ಸಂದರ್ಭದಲ್ಲಿ ಈಗಾಗಲೇ ಮರಣ ಹೊಂದಿದವರು, ಎರಡು ಕ್ಷೇತ್ರಗಳಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಅವರನ್ನು ಪಟ್ಟಿ ಯಿಂದ ಕೈಬಿಡಿ. ಹೆಸರುಗಳ ತಿದ್ದುಪಡಿ, ಒಂದು ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ವರ್ಗಾವಣೆ ಪ್ರಕರಣಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಅನುಮೋದನೆ ನೀಡುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಡಾ. ರೇಜು ಸೂಚಿಸಿದರು.

ರಾಜಕೀಯ ಪಕ್ಷಗಳು ಸಹ ಮತದಾರರ ಪಟ್ಟಿಯಲ್ಲಿರುವ ಆಕ್ಷೇಪಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇದರಿಂದ ಚುನಾವಣೆಯನ್ನು ಸುಗಮವಾಗಿ ನಡೆಸಲು ಸಾದ್ಯವಾಗಲಿದೆ. ಜಿಲ್ಲಾಡಳಿತದ ಮೂಲಕ ಕರಡು ಮತದಾರರ ಪಟ್ಟಿಯನ್ನು ಪಡೆದು ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ, ತಮ್ಮ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ, ಯುವ ಮತದಾರರ ಸೇರ್ಪಡೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುವಂತೆ ಹಾಜರಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಮರಣ ಹೊಂದಿದವರ ಹೆಸರುಗಳನ್ನು ಕೂಡಲೇ ತೆಗೆಯಬೇಕು. ಕೆಲವರು ಹೆಸರುಗಳು ಪುನರಾವರ್ತನೆಯಾಗಿದ್ದು ಅಂತಹವು ಗಳನ್ನು ತೆಗೆಯಬೇಕು. ಕುಟುಂಬದ ಎಲ್ಲಾ ಸದಸ್ಯರ ಹೆಸರುಗಳನ್ನು ಒಂದೇ ಕಡೆ ಬರುವಂತೆ ಪಟ್ಟಿಯನ್ನು ಸಿದ್ದಪಡಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿ ಗಳು ಕೋರಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವಿಕೆಗಳಿಗೆ ಸಂಬಂದಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಲಾ ಗುವ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಪರಿಶೀಲಿಸಿ ಅನುಮೋದನೆ ನೀಡುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಸೂಚಿಸಿದ ಡಾ. ರೇಜು, ಜಿಲ್ಲೆಯಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಕುಂದಾಪುರ ಉಪವಿಬಾಗದ ಸಹಾಯಕ ಆಯುಕ್ತ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

10,08,220 ಮತದಾರರು

ಜಿಲ್ಲೆಯಲ್ಲಿ ಪ್ರಸ್ತುತ ನ.18ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ 4,85,747 ಪುರುಷರು, 5,22,464 ಮಹಿಳೆಯರು ಮತ್ತು 9 ಇತರೆ ಮಂದಿ ಸೇರಿದಂತೆ ಒಟ್ಟು 10,08,220 ಮತದಾರರಿದ್ದು, ಮಿಂಚಿನ ನೊಂದಣಿ ಕಾರ್ಯಕ್ರಮದಲ್ಲಿ ಇದುವರೆಗೆ 3,164 ಅರ್ಜಿಗಳನ್ನು ಸ್ವೀಕರಿಸ ಲಾಗಿದೆ. ಡಿಸೆಂಬರ್ 17 ರವರೆಗೆ ನಡೆಯುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X