ಕಾಪು ಪುರಸಭೆ; ಆತ್ಮನಿರ್ಭರ ಯೋಜನೆ ಶೇ. 90 ಗುರಿ : ರುದ್ರೇಶ್
ಕಾಪು: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿ ಸಾಲಕೋರಿ ಬಂದಿರುವ 283 ಅರ್ಜಿಗಳಲ್ಲಿ 192 ಅರ್ಜಿಗಳಿಗೆ ಸಾಲ ಮಂಜೂರಾತಿ ನೀಡಿ ಶೇ.90% ರಷ್ಟು ಗುರಿ ಸಾಧಿಸಿದೆ ಎಂದು ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್ ತಿಳಿಸಿದ್ದಾರೆ.
ಕಾಪು ಪುರಸಭೆ ವ್ಯಾಪ್ತಿಯ ಬೀದಿ ವ್ಯಾಪಾರಿ ಹಾಗೂ ಸಣ್ಣ ಉದ್ದಿಮೆದಾರರಿಗೆ ಪ್ರಧಾನ ಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿ ಕಿರು ಸಾಲ-ಮೇಳ ಕಾರ್ಯಕ್ರಮ ಶನಿವಾರ ಕಾಪು ಪುರರಸಭಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
5 ರಾಷ್ಟ್ರೀಕೃತ ಬ್ಯಾಂಕ್ಗಳಾದ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಸಿಂಡಿಕೇಟ್ ಬ್ಯಾಂಕ್ಗಳಿಂದ ನೀಡಲಾಗುವ ಈ ಸಾಲ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದು ಅವರು ಹೇಳಿದರು.
ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂಭವಿ ಎಸ್.ಕುಲಾಲ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಸಮುದಾಯ ಸಂಘಟಕರಾದ ಬಾಲೇಶ್, ಗೀತಾ, ಕೌಶಲ್ಯಾಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ರವರು ಉಪಸ್ಥಿತರಿದ್ದರು.