ರೈತರು ಕರೆ ನೀಡಿದ ಭಾರತ್ ಬಂದ್ಗೆ ನಿರಾಸಕ್ತಿ ವ್ಯಕ್ತಪಡಿಸಿದ ಕುಮಾರಸ್ವಾಮಿ
ಮೈಸೂರು: ರೈತ ಸಂಘಟನೆಗಳು ಡಿ.8ಕ್ಕೆ ಕರೆ ನೀಡಿರುವ ಭಾರತ್ ಬಂದ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರಾಸಕ್ತಿ ವ್ಯಕ್ತಪಡಿಸಿದರು.
ನಗರದ ಸಾ.ರಾ.ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರೈತರು ಡಿ.8 ರಂದು ಕರೆ ನೀಡಿರುವ ಭಾರತ್ ಬಂದ್ಗೆ ನಿಮ್ಮ ಪಕ್ಷ ಬೆಂಬಲ ವ್ಯಕ್ತಪಡಿಸಲಿದಿಯೇ ಎಂಬ ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚೆಗೆ ಬಂದ್ಗಳು ಅಷ್ಟಾಗಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿಲ್ಲ. ಕರ್ನಾಟಕ ಬಂದ್ ಮತ್ತು ಭಾರತ್ ಬಂದ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಸೇರಿದಂತೆ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಬೆಕು, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದ ಕುರಿತು ಮಾತನಾಡಿ ಅವರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಯಾವುದೇ ಸಮಸ್ಯೆಗಳಿಗೆ ತಕ್ಷಣ ಸರ್ಕಾರಗಳು ಸ್ಪಂದಿಸುವ ಕೆಲಸ ಮಾಡಿದರೆ ಯಾರೂ ಬಂದ್ ಮಾಡುವುದಿಲ್ಲ ಎಂದು ಹೇಳಿದರು.
Next Story