ಯಕ್ಷಗಾನ ಕಲಾವಿದ ಕುಷ್ಟ ಗಾಣಿಗ ನಿಧನ

ಉಡುಪಿ, ಡಿ.6: ಬಣ್ಣದ ವೇಷದ ಖ್ಯಾತಿಯಿಂದ ಬಣ್ಣದ ಕುಷ್ಟ ಎಂದೇ ಪರಿಚಿತರಾಗಿದ್ದ ಕೃಷ್ಣಯ್ಯ ಮಂಜಯ್ಯ ಶೆಟ್ಟಿ ಯಾನೆ ಕುಷ್ಟ ಗಾಣಿಗ(89) ಇಂದು ಬೆಳಗಿನ ಜಾವ ಹೊನ್ನಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕರ್ಕಿ, ಗುಂಡಬಾಳ, ಇಡಗುಂಜಿ, ಅಮೃತೇಶ್ವರಿ ಮೇಳಗಳಲ್ಲಿ ಐದು ದಶಕಗಳ ಕಲಾಸೇವೆಗೈದಿದ್ದರು. ಎಲ್ಲಾ ರೀತಿಯ ವೇಷಗಳನ್ನು ಮಾಡುತ್ತಿದ್ದ ಅವರು ಬಣ್ಣ ಮತ್ತು ಕಿರಾತ ವೇಷಗಳಲ್ಲಿ ವಿಶೇಷ ಸಿದ್ಧಿ ಪಡೆದಿದ್ದರು. ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿಯೂ ಸೇರಿದಂತೆ ಹಲವು ಪುರಸ್ಕಾರ ಗಳಿಗೆ ಭಾಜನರಾಗಿದ್ದರು.
ಅವರ ಅಗಲಿಕೆಗೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ ಮತ್ತು ಐವರು ಪುತ್ರಿಯರನ್ನು ಅಗಲಿದ್ದಾರೆ.
Next Story





