Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಈ ವರ್ಷ 4 ತೀವ್ರ ಬಿರುಗಾಳಿಯ...

ಭಾರತದಲ್ಲಿ ಈ ವರ್ಷ 4 ತೀವ್ರ ಬಿರುಗಾಳಿಯ ಚಂಡಮಾರುತ: ಹವಾಮಾನ ಇಲಾಖೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ6 Dec 2020 10:41 PM IST
share
ಭಾರತದಲ್ಲಿ ಈ ವರ್ಷ 4 ತೀವ್ರ ಬಿರುಗಾಳಿಯ ಚಂಡಮಾರುತ: ಹವಾಮಾನ ಇಲಾಖೆ ಮಾಹಿತಿ

ಹೊಸದಿಲ್ಲಿ, ಡಿ.6: ಈ ವರ್ಷ ಬಂಗಾಳ ಕೊಲ್ಲಿ ಅಥವಾ ಅರಬ್ಬಿ ಸಮುದ್ರದಲ್ಲಿ ಉಂಟಾದ 5 ಚಂಡಮಾರುತಗಳ ಪೈಕಿ 4 ತೀವ್ರ ಬಿರುಗಾಳಿಯ ಚಂಡಮಾರುತದ ವರ್ಗಕ್ಕೆ ಸೇರಿದ್ದವು ಎಂದು ಭಾರತದ ಹವಾಮಾನ ಇಲಾಖೆ ಹೇಳಿದೆ. ಮಾನ್ಸೂನ್ ಪೂರ್ವ ಅವಧಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಮತ್ತು ಮಾನ್ಸೂನ್ ಬಳಿಕದ ಅವಧಿಯಾದ ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವುದು ಸಹಜವಾಗಿದೆ.

1990ರಿಂದ ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿ ಭಾಗದಲ್ಲಿ (ಬಂಗಾಳ ಕೊಲ್ಲಿ ಮತ್ತು ಅರಬೀ ಸಮುದ್ರ) ನಾಲ್ಕು ಚಂಡಮಾರುತ ರೂಪುಗೊಂಡಿದೆ. ಈ ವರ್ಷದ ಮೊದಲ ಚಂಡಮಾರುತ ಅಂಫಾನ್ ಬಂಗಾಳ ಕೊಲ್ಲಿಯಲ್ಲಿ ಹುಟ್ಟಿದ್ದು ಬಳಿಕ ತೀವ್ರ ಬಿರುಗಾಳಿಯ ಚಂಡಮಾರುತವಾಗಿ ಮಾರ್ಪಟ್ಟಿದೆ. ಬಳಿಕ ಸ್ವಲ್ಪ ದುರ್ಬಲಗೊಂಡು ಮೇ 19ರಂದು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಿದೆ. ಇದಾದ 15 ದಿನದಲ್ಲೇ ಅರಬಿ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿ ತೀವ್ರ ಬಿರುಗಾಳಿಯ ಚಂಡಮಾರುತದ ಸ್ವರೂಪಕ್ಕೆ ತಿರುಗಿದೆ. ನಿಸರ್ಗ ಎಂದು ಹೆಸರಿಸಿದ ಈ ಚಂಡಮಾರುತ ಮುಂಬೈ ಸಮೀಪದ ಆಲಿಬಾಗ್‌ಗೆ ಅಪ್ಪಳಿಸಿದೆ ಮತ್ತು ಈ ವರ್ಷದ ಮುಂಗಾರು ಕೇರಳಕ್ಕೆ ಯಥಾಪ್ರಕಾರ ಜೂನ್ 1ರಂದೇ ಆಗಮಿಸಲು ಕಾರಣವಾಯಿತು ಎಂದು ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

ಕಳೆದ 1 ತಿಂಗಳಲ್ಲೇ ಬಂಗಾಳ ಕೊಲ್ಲಿಯಲ್ಲಿ 2 ಮತ್ತು ಅರಬ್ಬಿ ಸಮುದ್ರದಲ್ಲಿ ಒಂದು ಚಂಡಮಾರುತ ರೂಪುಗೊಂಡಿದೆ. ನವೆಂಬರ್‌ನಲ್ಲಿ ಉಂಟಾದ ಗತಿ ಚಂಡಮಾರುತ ಪಶ್ಚಿಮ ಕರಾವಳಿಯನ್ನು ಹಾದುಹೋಗುವ ಸಂದರ್ಭ ತೀವ್ರ ಸ್ವರೂಪಕ್ಕೆ ತಿರುಗಿದ್ದರಿಂದ ಕೇರಳದಲ್ಲಿ ಭಾರೀ ಮಳೆಯಾಗಿದೆ. ನವೆಂಬರ್ 23ರಂದು ಗತಿ ಚಂಡಮಾರುತ ಸೊಮಾಲಿಯಾ ತೀರವನ್ನು ದಾಟಿತು. ತೀವ್ರ ಬಿರುಗಾಳಿ ಚಂಡಮಾರುತ ಎಂದು ಆರಂಭದಲ್ಲಿ ಊಹಿಸಲಾಗಿದ್ದ ನಿವಾರ್ ಚಂಡಮಾರುತ ಬಳಿಕ ತೀವ್ರ ಸ್ವರೂಪ ಪಡೆದು ಅತೀ ತೀವ್ರ ಬಿರುಗಾಳಿ ಚಂಡಮಾರುತವಾಗಿ ಮಾರ್ಪಟ್ಟು ನವೆಂಬರ್ 25ರ ರಾತ್ರಿ ತಮಿಳುನಾಡು ಕರಾವಳಿಯನ್ನು ಹಾದುಹೋಯಿತು. ಡಿಸೆಂಬರ್ 2ರಂದು ಬುರೇವಿ ಚಂಡಮಾರುತ ದಕ್ಷಿಣ ತಮಿಳುನಾಡು ಕರಾವಳಿ ಪ್ರದೇಶವನ್ನು ಹಾದುಹೋಯಿತು.

ಅತೀ ತೀವ್ರ ಬಿರುಗಾಳಿ ಚಂಡಮಾರುತವು ಗಂಟೆಗೆ 120ರಿಂದ 160 ಕಿ.ಮಿ ಗಾಳಿಯೊಂದಿಗೆ ಅಪ್ಪಳಿಸುತ್ತದೆ ಮತ್ತು ಮರಗಳನ್ನು ಬುಡಮೇಲುಗೊಳಿಸುವ ಜೊತೆಗೆ ವಿದ್ಯುತ್ ಪೂರೈಕೆ, ಸಂಪರ್ಕ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಮನೆಗಳಿಗೂ ಹಾನಿ ಉಂಟುಮಾಡುತ್ತದೆ. ಅತ್ಯಂತ ತೀವ್ರ ಬಿರುಗಾಳಿ ಚಂಡಮಾರುತದ ಜೊತೆಗೆ ಗಂಟೆಗೆ 160ರಿಂದ 220 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತದೆ ಎಂದವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X