Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನಸಮುದಾಯವನ್ನು ಬಂಡವಾಳಶಾಹಿಗಳಿಗೆ...

ಜನಸಮುದಾಯವನ್ನು ಬಂಡವಾಳಶಾಹಿಗಳಿಗೆ ಉಣಬಡಿಸುತ್ತಿರುವ ಸರಕಾರ: ದೇವನೂರ ಮಹಾದೇವ

ವಾರ್ತಾಭಾರತಿವಾರ್ತಾಭಾರತಿ6 Dec 2020 11:30 PM IST
share
ಜನಸಮುದಾಯವನ್ನು ಬಂಡವಾಳಶಾಹಿಗಳಿಗೆ ಉಣಬಡಿಸುತ್ತಿರುವ ಸರಕಾರ: ದೇವನೂರ ಮಹಾದೇವ

ಮೈಸೂರು,ಡಿ.6: ಭಾರತದಲ್ಲಿ ಸರ್ಕಾರವೇ ಜನಸಮುದಾಯವನ್ನು ಸದೆಬಡಿದು ಬಂಡವಾಳಶಾಹಿಗಳಿಗೆ ಉಣಬಡಿಸುವ ಹಬ್ಬ ನಡೆಸುತ್ತಿದೆ ಎಂದು ಖ್ಯಾತ ಸಾಹಿತಿ ದೇವನೂರ ಮಹಾದೇವ ಬೇಸರ ವ್ಯಕ್ತಪಡಿಸಿದರು.

ನಗರದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ರವಿವಾರ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ 64ನೇ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಸಂವಿಧಾನ ಪ್ರಜಾಪ್ರಭುತ್ವ ಹಾಗೂ ಸಮಾನತೆಯ ಆಶಯಗಳನ್ನು ನಾಶ ಮಾಡುತ್ತಿರುವ ಆರೆಸ್ಸೆಸ್ ಬಿಜೆಪಿಯ ದುರಾಡಳಿತದ ವಿರುದ್ಧ ಜನಜಾಗೃತಿ ಅಭಿಯಾನದ ಕರಪತ್ರ ಬಿಡುಗಡೆ ಮಾಡಿ ನಂತರ ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯನ್ನು ಹಿನ್ನಡೆ ಮಾಡುತ್ತಿದೆ. ಇದು ಪೈಶಾಚಿಕ ನಡೆ. ದೆಹಲಿಯಲ್ಲಿ ಒಂದು ವಾರದಿಂದಲೂ ರೈತಾಪಿ ಸಮುದಾಯ ಹಗಲು ರಾತ್ರಿ ಎನ್ನದೇ, ಚಳಿ, ಮಳೆ, ಧೂಳು ಎನ್ನದೇ ಕೊರೋನಗೆ ಹೆದರದೇ ಕೃಷಿ ನೀತಿಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತುಕತೆಯಲ್ಲಿ ವಂಚಿಸುತ್ತಿರುವುದನ್ನು ನೋಡಿದರೆ ಇದಕ್ಕೆ ಕಣ್ಣಿಲ್ಲ, ಹೃದಯದಲ್ಲಿ ಕಲ್ಲಿದೆ. ಮನಸ್ಸಿನಲ್ಲಿ ಮನುಷ್ಯತ್ವ ಇಲ್ಲ ಅನ್ನಿಸಿಬಿಡುತ್ತದೆ ಎಂದು ವಾಗ್ದಾಳಿ ನಡೆಸಿದರು.

ಈ ಪೈಶಾಚಿಕ ನಡೆಯಲ್ಲೂ ಒಂದು ರಿದಂ ಇದೆ. ಭಾರತದ ಸಂವಿಧಾನವನ್ನು ಒಪ್ಪದೇ ಇರುವವರು, ತಮ್ಮದೇ ಒಂದು ಸಂವಿಧಾನವನ್ನು ಒಳಗಿಟ್ಟುಕೊಂಡವರು ಇಂದು ಆಳ್ವಿಕೆ ಮಾಡುತ್ತಿದ್ದಾರೆ. ಇವರು ಭಾರತದ ಸಂವಿಧಾನವನ್ನು ಮೊದಲು ಇಲ್ಲವಾಗಿಸಲು ನೋಡುತ್ತಾರೆ. ಆಗದಿದ್ದರೆ ಅದರ ಶೀಲ ಕೆಡಿಸುತ್ತಾರೆ. ಸಿಎಎ, ಎನ್‍ಪಿಆರ್, ಎನ್‍ಆರ್‍ಸಿ ಒಟ್ಟಿಗೆ ಮಾಡಿದ್ದು ಇದೇನೆ ಎಂದು ವಿಶ್ಲೇಷಿಸಿದರು.

ಈ ನೆಲದಲ್ಲಿ ಹುಟ್ಟಿದ ಕಂದಮ್ಮಗಳು ಇಲ್ಲಿನ ಪೌರರು ಎನ್ನುವುದು ಮುನ್ನಡೆ ಅಲ್ಲವೇ? ಹಿನ್ನಡೆ ಮಾಡಿಬಿಟ್ಟರು. ಹಾಗೇನೆ ಮೀಸಲಾತಿ ವಿಚಾರದಲ್ಲೂ ಮಂಡಲ್ ವಿರೋಧಕ್ಕೆ ಹಿನ್ನಲೆ ಗಾಯಕರು ಯಾರು? ವಿದ್ಯಾರ್ಥಿಯೊಬ್ಬನನ್ನು ಬೆಂಕಿಗೆ ಆಹುತಿ ಮಾಡಿಬಿಟ್ಟರು. ಈಗ ಅವರೇ ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಇಲ್ಲದಂತೆ ಮಾಡಬೇಕು. ಅದು ಅವರಿಗೆ ಆಗುತ್ತಿಲ್ಲ. ಹೀಗಾಗಿ, ಆರ್ಥಿಕವಾಗಿ ದುರ್ಬಲ ವರ್ಗದ ಹೆಸರಿನಲ್ಲಿ ಮೀಸಲಾತಿ ಕೊಟ್ಟರು. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿಯುವಿಕೆ ಪರಿಕಲ್ಪನೆಯನ್ನು ನೆಲಕಚ್ಚಿಸಿ ಬಿಟ್ಟರು. ಸಾಮಾಜಿಕ ನ್ಯಾಯ ಅಂಗಾತ ಬಿತ್ತು ಎಂದು ವಿಷಾದಿಸಿದರು.

ಭಾರತದ ಬುಡ ಕತ್ತರಿಸುತ್ತಿರುವ ಕೆಲವನ್ನು ನಾವು ಮರೆಯಬಾರದು. ಜಿಎಸ್‍ಟಿ ತಂದು ರಾಜ್ಯಗಳ ಸ್ಥಿತಿಯನ್ನು ಬಿಕ್ಷುಕ ಮಾಡಿಬಿಟ್ಟರು. ಇಂದು ರಾಜ್ಯಗಳಿಗೆ ಅಸ್ತಿತ್ವ ಇದೆಯೇ ? ದೇಶದಲ್ಲಿ ಒಕ್ಕೂಟ ಸ್ವರೂಪ ಇದೆಯೇ ? ರಾಜ್ಯಗಳು ಪಕ್ಷಾತೀತವಾಗಿ ಎಚ್ಚರಗೊಳ್ಳಬೇಕಾಗಿದೆ. ಹಾಗೇನೆ ಸ್ವಾಯತ್ತ ಸಂಸ್ಥೆಗಳ ಕತ್ತಿನ ನರ ಕೊಯ್ದು ಅವು ಕುತ್ತಿಗೆ ವಾಲಿಕೊಂಡು ನೇತಾಡುತ್ತಿವೆ. ಭಾರತವು ಭಾರತವಾಗಿ ಉಳಿಯುತ್ತದೆಯೇ ಎಂದು ಹೇಳುವುದು ತುಂಬಾ ಕಷ್ಟ ಎಂದರು.

ದೇಶದಲ್ಲಿ ಸರ್ಕಾರವೇ ಜನಸಮುದಾಯವನ್ನು ಸದೆ ಬಡಿದು ಬಂಡವಾಳಶಾಹಿಗಳಿಗೆ ಉಣಬಡಿಸುವ ಹಬ್ಬ ನಡೆಯುತ್ತಿದೆ. ಇಂಥ ದುರಿತ ಕಾಲದಲ್ಲಿ ಇಲ್ಲಿ ನಾಕಾರು ದಲಿತ ಬಣಗಳು ಒಟ್ಟುಗೂಡಿರುವುದು ಒಂದು ಆಶಾಕಿರಣ. ಹಾಗೆ ಇತ್ತೀಚೆಗೆ ದಲಿತರೂ, ರೈತರೂ, ಕಾರ್ಮಿಕರೂ ಜೊತೆಗೂಡಿಕೊಂಡು ಆಂದೋಲನ ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಮತ್ತೆ ಮತ್ತೆ ಹೇಳುತ್ತಿದ್ದೇನೆ, ಸಂಘಟನೆಗಳು ಸಮುದಾಯದೊಳಗೆ ಕರಗಿ ಹೋಗಬೇಕು. ಅಲ್ಲಿ ಸಹನೆ, ಪ್ರೀತಿ, ಸಮಾನತೆ ಬಿತ್ತಬೇಕು. ಆಗ ಕರ್ನಾಟಕ ನಿಮ್ಮದು, ಅದು ನನ್ನದೂ ಕೂಡ ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ಹಿರಿಯ ಮುಖಂಡ ಎನ್.ವೆಂಕಟೇಶ್ ವಹಿಸಿದ್ದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಹಿರಿಯ ರಂಗಕರ್ಮಿ ಜನಾರ್ಧನ್ ಜನ್ನಿ, ದಸಂಸ ಜಿಲ್ಲಾ ಸಂಚಾಲಕರುಗಳಾದ ಆಲಗೂಡು ಶಿವಕುಮಾರ್, ಕಾರ್ಯ ಬಸವಣ್ಣ, ಮಲ್ಲಹಳ್ಳಿ ನಾರಾಯಣ್, ರಾಜಶೇಖರ್ ಕೋಟೆ, ಸೋಮಣ್ಣ ಬನ್ನಹಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೈಸೂರು ತಾಲೂಕು ಸಂಚಾಲಕ ಕಲ್ಲಹಳ್ಳಿ ಕುಮಾರ್ ಸ್ವಾಗತ ಕೋರಿದರು. ಮಲ್ಲಹಳ್ಳಿ ನಾರಾಯಣ್ ನಿರೂಪಿಸಿದರೆ ರಾಮು ಐಲಾಪುರ ವಂದಾನರ್ಪಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X