Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಂದೂರು: ಬೀಚ್ ಕ್ಲೀನ್ ಮಾಡಿ ಮಾದರಿಯಾದ...

ಬೈಂದೂರು: ಬೀಚ್ ಕ್ಲೀನ್ ಮಾಡಿ ಮಾದರಿಯಾದ ನವವಿವಾಹಿತ ಜೋಡಿ !

ಒಂಭತ್ತು ದಿನಗಳಲ್ಲಿ 700 ಕೆಜಿ ಕಸ ಸಂಗ್ರಹಿಸಿದ ದಂಪತಿ

ವಾರ್ತಾಭಾರತಿವಾರ್ತಾಭಾರತಿ7 Dec 2020 7:01 PM IST
share
ಬೈಂದೂರು: ಬೀಚ್ ಕ್ಲೀನ್ ಮಾಡಿ ಮಾದರಿಯಾದ ನವವಿವಾಹಿತ ಜೋಡಿ !

ಬೈಂದೂರು, ಡಿ.7: ಮದುವೆ ಸಂಭ್ರದಲ್ಲಿರುವ ನವವಿವಾಹಿತ ಜೋಡಿ ಯೊಂದು ತಮ್ಮ ಹನಿಮೂನ್ ಕಾರ್ಯಕ್ರಮವನ್ನು ಮುಂದೂಡಿ ಬೀಚ್ ಸ್ವಚ್ಛಗೊಳಿಸುವ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾದರಿಯಾಗಿದೆ.

ಬೈಂದೂರು ತಾಲೂಕಿನ ಕಳವಾಡಿ ನಿವಾಸಿಯಾಗಿರುವ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ದಂಪತಿ ಒಂಭತ್ತು ದಿನಗಳ ಕಾಲ ಬೈಂದೂರಿನ ಸೋಮೇಶ್ವರ ಕಡಲ ತೀರವನ್ನು ಸ್ವಚ್ಛಗೊಳಿಸಿ ಸುಮಾರು 600-700ಕೆ.ಜಿ.ಗೂ ಅಧಿಕ ಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ.

ಆನ್‌ಲೈನ್ ಮೂಲಕ ಡಿಜಿಟಲ್ ಮಾರ್ಕೆಟಿಂಗ್ ವೃತ್ತಿ ಮಾಡಿಕೊಂಡಿರುವ ಅನುದೀಪ್ ಹೆಗ್ಡೆ, ಮೈಸೂರಿನ ಫಾರ್ಮಾಸಿಟಿಕಲ್ ಕಂಪೆನಿಯ ಉದ್ಯೋಗಿ ಯಾಗಿರುವ ಉಡುಪಿ ನಿವಾಸಿ ಮಿನುಷಾರನ್ನು ನ.18ರಂದು ಮದುವೆಯಾಗಿ ದ್ದರು. ಮದುವೆಯ ಬಳಿಕ ಸೋಮೇಶ್ವರ ಬೀಚ್‌ಗೆ ವಿವಾಹಕ್ಕೆ ತೆರಳಿದ್ದ ಜೋಡಿ ಅಲ್ಲಿನ ಕಸದ ರಾಶಿಯನ್ನು ಕಂಡು, ಬೀಚ್ ಸ್ವಚ್ಛಗೊಳಿಸುವ ನಿರ್ಧಾರ ಮಾಡಿದ್ದರು. ಅದಕ್ಕಾಗಿ ಅವರು ತಮ್ಮ ಹನಿಮೂನ್ ಕಾರ್ಯಕ್ರಮವನ್ನು ಕೂಡ ಮುಂದೂಡಿದರು.

ಹೀಗೆ ನವಜೋಡಿ ನ.27ರಿಂದ ಡಿ.5ರವರೆಗೆ ಬೀಚ್ ಸ್ವಚ್ಛ ಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿತು. ಇವರು ಈ ಕಡಲತೀರದ ಸುಮಾರು 700 ಮೀಟರ್ ದೂರವರೆಗೆ ಸ್ವಚ್ಛತಾ ಕಾರ್ಯವನ್ನು ನಡೆಸಿದ್ದಾರೆ. ಅದಕ್ಕಾಗಿ ಪ್ರತಿದಿನ ಎರಡು ಗಂಟೆ ಅವಧಿಯನ್ನು ಮೀಸಲಿರಿಸುತ್ತಿದ್ದರು. ಬೀಚ್‌ನಲ್ಲಿ ಸಿಕ್ಕಿದ ಮದ್ಯದ ಬಾಟಲಿಗಳು, ಪಾದರಕ್ಷೆಗಳು ಸಹಿತ ಅಪಾರ ಪ್ರಮಾಣದ ತ್ಯಾಜ್ಯ ವಸ್ತುಗಳನ್ನು ಒಗ್ಗೂಡಿಸಿದ್ದಾರೆ. ಇವರ ಈ ಸಾಮಾಜಿಕ ಕಾರ್ಯದಲ್ಲಿ ಬೈಂದೂರಿನ ಮಂಜುನಾಥ್ ಶೆಟ್ಟಿ ಹಾಗೂ ಹಸನ್ ಕೂಡ ಭಾಗಿಯಾಗಿದ್ದರು.

ಕೊರೋನ ಬಳಿಕ ಪತ್ನಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದಾರೆ. ಮದುವೆಯಾಗಿ ಬೀಚ್‌ಗೆ ತೆರಳಿದ್ದಾಗ ನಾವಿಬ್ಬರು ಕುಳಿತು ಹನಿಮೂನ್ ಹೋಗುವ ಪ್ಲಾನ್ ಹಾಕುತ್ತಿದ್ದೆವು. ಆಗ ಅಲ್ಲಿನ ಪರಿಸ್ಥಿತಿ ನೋಡಿ ಹನಿಮೂನ್ ಮುಂದೂಡಿ, ಬೀಚ್ ಸ್ವಚ್ಛಗೊಳಿಸುವ ತೀರ್ಮಾನವನ್ನು ನಾವಿಬ್ಬರು ಮಾಡಿದೆವು. ನಾನು ಹುಟ್ಟಿ ಬೆಳೆದದ್ದು ಇದೇ ಬೀಚ್‌ನಲ್ಲಿ. ಅದಕ್ಕೆ ನನ್ನಿಂದ ಏನಾದರೂ ಕೊಡುಗೆ ನೀಡುವ ಎಂಬ ಭಾವನೆಯಿಂದ ಈ ಕಾರ್ಯ ಮಾಡಿದ್ದೇವೆ.
-ಅನುದೀಪ್ ಹೆಗ್ಡೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X