ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ
![ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ](https://www.varthabharati.in/sites/default/files/images/articles/2020/12/7/270299-1607348615.jpg)
ಬ್ರಹ್ಮಾವರ, ಡಿ.7: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾ ಲೋಚನಾ ಸಭೆ ಹಾಗೂ ನೂತನ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಕಾರ್ಯ ಕ್ರಮವು ರವಿವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು.
ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿನಕರ ಹೇರೂರು ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿ ಶುಭ ಹಾರೈಸಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪಕ್ಷದ ಕಾರ್ಯ ಕರ್ತರೇ ಪಕ್ಷದ ಆಸ್ತಿ. ಅಂತಹ ಕಾರ್ಯಕರ್ತರೇ ಸ್ಪರ್ಧಿಸುವ ಚುನಾವಣೆ ಇದಾಗಿದೆ. ಸಂಘಟಿತವಾಗಿ ಚುನಾವಣೆಯನ್ನು ಎದುರಿಸಿ ಪಕ್ಷದ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬಂದು ಸಮಾಜ ಸೇವೆ ಗೈಯುವಂತೆ ಮಾಡ ಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಮಾಜಿ ತಾಪಂ ಸದಸ್ಯೆ ವೆರೋನಿಕಾ ಕರ್ನೇಲಿಯೋ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕರ್ಜೆ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಕಾಂ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಹಾವಂಜೆ ರಮೇಶ್ ಶೆಟ್ಟಿ, ಕರ್ಜೆ ರಾಘವೇಂದ್ರ ಶೆಟ್ಟಿ, ಸುಲೋಚನಾ ಕೆಮ್ಮಣ್ಣು, ಕೆ.ಪಿ. ಇಬ್ರಾಹಿಂ ಮಟಪಾಡಿ, ರಾಜೇಶ್ ಶೆಟ್ಟಿ ಕುಂಬ್ರಗೊಡು, ಸೂರ್ಯ ಸಾಲಿಯಾನ್, ಬಾಲ ಚಂದ್ರ ಹಂದಾಡಿ, ಸೌರಭ್ ಬಲ್ಲಾಳ್ ಉಪಸ್ಥಿತರಿದ್ದರು. ಹಿರಿಯ ಮುಖಂಡ ಸದಾಶಿವ ನಾಯಕ್ ಸ್ವಾಗತಿಸಿದರು. ರಮೇಶ್ ಕರ್ಕೇರ ಉಪ್ಪೂರು ಹಾಗೂ ಉದಯ ಆಚಾರ್ಯ ಹೇರೂರು ಕಾರ್ಯಕ್ರಮ ನಿರೂಪಿಸಿದರು.