Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಭಾರತ್ ಬಂದ್‍'ಗೆ ರಾಜ್ಯದಲ್ಲಿ 100ಕ್ಕೂ...

'ಭಾರತ್ ಬಂದ್‍'ಗೆ ರಾಜ್ಯದಲ್ಲಿ 100ಕ್ಕೂ ಅಧಿಕ ಸಂಘ-ಸಂಸ್ಥೆಗಳಿಂದ ಬೆಂಬಲ: ಜನಜೀವನ ಸ್ತಬ್ಧ ಸಾಧ್ಯತೆ

ಏನಿರುತ್ತೆ ? ಏನಿರಲ್ಲ ?

ವಾರ್ತಾಭಾರತಿವಾರ್ತಾಭಾರತಿ7 Dec 2020 7:59 PM IST
share
ಭಾರತ್ ಬಂದ್‍ಗೆ ರಾಜ್ಯದಲ್ಲಿ 100ಕ್ಕೂ ಅಧಿಕ ಸಂಘ-ಸಂಸ್ಥೆಗಳಿಂದ ಬೆಂಬಲ: ಜನಜೀವನ ಸ್ತಬ್ಧ ಸಾಧ್ಯತೆ

ಬೆಂಗಳೂರು, ಡಿ.7: ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕಾರ್ಪೋರೇಟ್ ಪರ ಮೂರು ಕೃಷಿ ಕಾನೂನು ಹಾಗೂ ಕರಾಳ ವಿದ್ಯುತ್ ಮಸೂದೆ-2020 ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಇಂದಿನ “ಅಖಿಲ ಭಾರತ್ ಬಂದ್”ಗೆ ವಿವಿಧ ರಾಜಕೀಯ ಪಕ್ಷಗಳು ಒಳಗೊಂಡಂತೆ 100ಕ್ಕೂ ಅಧಿಕ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿರುವ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಜನಜೀವನ ಸ್ತಬ್ಧಗೊಳ್ಳುವ ಸಾಧ್ಯತೆ ಹೆಚ್ಚಿದೆ.

ರೈತರು ರಾಜ್ಯ ವ್ಯಾಪ್ತಿಯಲ್ಲಿ ಹೆದ್ದಾರಿ ಮತ್ತು ರಸ್ತೆ ತಡೆ ಸೇರಿದಂತೆ ಹಲವು ರೀತಿಯಲ್ಲಿ ಪ್ರತಿಭಟನೆ ನಡೆಯುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸರಕಾರಿ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಇನ್ನು, ಸಾರಿಗೆ ನಿಗಮಗಳ ಸಿಬ್ಬಂದಿ ನೈತಿಕ ಬೆಂಬಲ ನೀಡಿದ್ದರೂ ಬಂದ್‍ನಲ್ಲಿ ಭಾಗವಹಿಸುವುದಿಲ್ಲ. ನಮ್ಮ ಮೆಟ್ರೋ ಮತ್ತು ಸಾರಿಗೆ ಸಂಸ್ಥೆ ಬಸ್‍ಗಳು ಎಂದಿನಂತೆ ಸಂಚರಿಸಲಿವೆ. ಗಲಭೆಗಳು ನಡೆದರೆ ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

ರಾಜ್ಯ ಲಾರಿ ಮಾಲಕರ ಸಂಘ, ಓಲಾ–ಊಬರ್ ಚಾಲಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘಟನೆ, ದಲಿತ ಸಂಘಟನೆಗಳು, ಆಟೊ ಯೂನಿಯನ್, ಜೈ ಭಾರತ್ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಟ್ಯಾಕ್ಸಿ ಮತ್ತು ಆಟೊ ಸಂಚಾರದಲ್ಲಿ ವ್ಯತ್ಯಯವಾಗುವ ಸಂಭವವಿದೆ.

ಹಾಲು, ಹಣ್ಣು, ತರಕಾರಿ, ಆರೋಗ್ಯ ಸೇವೆ, ಔಷಧಿ ಅಂಗಡಿಗಳು, ಪೆಟ್ರೋಲ್ ಬಂಕ್‍ಗಳು, ಮಾರುಕಟ್ಟೆಗಳು ತೆರೆದಿರುತ್ತವೆ. ಗ್ರಾಹಕರ ಹಿತದೃಷ್ಟಿಯಿಂದ ಹೊಟೇಲ್‍ಗಳನ್ನು ಮುಚ್ಚುವುದಿಲ್ಲ ಎಂದು ಹೊಟೇಲ್ ಮಾಲಕರ ಸಂಘ ಹೇಳಿದೆ. ಆದರೂ ಪರಿಸ್ಥಿತಿ ಅನುಗುಣವಾಗಿ ಈ ಸೇವೆಗಳಲ್ಲಿ ಏರುಪೇರಾಗುವ ಸಾಧ್ಯತೆಯಿದೆ.

ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬಿಗಿ ಭದ್ರತೆ

ಡಿ.8ರಂದು ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್ ನಿಲ್ದಾಣ, ಮೆಟ್ರೊ ರೈಲು ನಿಲ್ದಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ.

ಏನಿರುತ್ತದೆ?

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಸರಕಾರಿ ಸಂಸ್ಥೆಗಳೂ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೊಟೇಲ್ ಮಾಲಕರ ಸಂಘವು ಬಂದ್‍ಗೆ ನೈತಿಕ ಬೆಂಬಲ ಮಾತ್ರ ನೀಡಿದ್ದು, ಇವುಗಳ ಸೇವೆಯೂ ಎಂದಿನಂತೆ ಇರಲಿದೆ. ಇನ್ನು, ಆರೋಗ್ಯ ಸೇವೆ, ಔಷಧ ಅಂಗಡಿ, ಹಾಲು, ಪತ್ರಿಕೆಗಳು ಲಭ್ಯ ಇರಲಿವೆ.

ಏನಿರುವುದಿಲ್ಲ?

ಆಟೊ ಚಾಲಕರು- ಮಾಲಕರ ಸಂಘ, ಓಲಾ- ಉಬರ್ ಚಾಲಕರ ಸಂಘ ಬಂದ್‍ಗೆ ಬೆಂಬಲ ನೀಡಿದ್ದು, ಇವುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಬೀದಿ–ಬದಿ ವ್ಯಾಪಾರಸ್ಥರ ಸಂಘವೂ ಬಂದ್‍ಗೆ ಬೆಂಬಲ ನೀಡಿರುವುದರಿಂದ ತರಕಾರಿ ಮತ್ತಿತರ ಅಗತ್ಯ ವಸ್ತುಗಳ ಸೇವೆ ಸಿಗುವ ಸಾಧ್ಯತೆ ಇಲ್ಲ. ಪ್ರತಿಭಟನೆ ತೀವ್ರಗೊಂಡರೆ ಬಸ್‍ಗಳ ಸೇವೆಯಲ್ಲಿಯೂ ವ್ಯತ್ಯಯವಾಗುವ ಸಾಧ್ಯತೆ ಇದೆ.

ಅಷ್ಟ ದಿಕ್ಕಿನಿಂದಲೂ ಪ್ರತಿಭಟನಾ ಮೆರವಣಿಗೆ

ಅಷ್ಟೂ ದಿಕ್ಕುಗಳಿಂದಲೂ ರಾಜ್ಯ ರಾಜಧಾನಿ ಬೆಂಗಳೂರಿಗೆ ಪ್ರತಿಭಟನಾಕಾರರು ಬರಲಿದ್ದು, ಪ್ರಮುಖವಾಗಿ ರೈತ, ದಲಿತ, ಕಾರ್ಮಿಕ, ಕನ್ನಡ, ಜನಪರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ ಎಲ್ಲರೂ ಜಮಾವಣೆಗೊಳ್ಳಲಿದ್ದೇವೆ. ಅದೇ ರೀತಿ, ಪೀಣ್ಯ, ಮೈಸೂರು ರಸ್ತೆ, ಅಂತರ್‍ರಾಷ್ಟ್ರೀಯ ವಿಮಾಣ ನಿಲ್ದಾಣ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆ ತಡೆ ಚಳುವಳಿ ಹೋರಾಟ ರೂಪಿಸಲಾಗುವುದು.

-ಕುರುಬೂರು ಶಾಂತಕುಮಾರ್, ರೈತ ಮುಖಂಡ

ಪೊಲೀಸರಿಗೆ ಸೂಚನೆ

ಆಯಾ ವಿಭಾಗದಲ್ಲಿ ಸಂಬಂಧಪಟ್ಟ ಡಿಸಿಪಿ ಭದ್ರತೆ ಉಸ್ತುವಾರಿ ವಹಿಸಿಕೊಳ್ಳಬೇಕು. ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಬೇಕು. ಅನುಮಾನಾಸ್ಪದ ಹಾಗೂ ಕಾನೂನು ಬಾಹಿರ ವರ್ತನೆ ತೋರಿದರೆ ಬಂಧಿಸುವಂತೆ ಸೂಚನೆ ನೀಡಲಾಗಿದೆ.

-ಕಮಲ್ ಪಂತ್, ನಗರ ಪೊಲೀಸ್ ಆಯುಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X