Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.8ರಂದು ಭಾರತ್ ಬಂದ್ : ದ.ಕ. ಜಿಲ್ಲೆಯ...

ಡಿ.8ರಂದು ಭಾರತ್ ಬಂದ್ : ದ.ಕ. ಜಿಲ್ಲೆಯ ವಿಪಕ್ಷಗಳ ಸಹಿತ ಹಲವು ಸಂಘಟನೆಗಳು ಬೆಂಬಲ

ವಾರ್ತಾಭಾರತಿವಾರ್ತಾಭಾರತಿ7 Dec 2020 8:03 PM IST
share

ಮಂಗಳೂರು, ಡಿ.7: ಕೇಂದ್ರ ಸರಕಾರದ ರೈತ ಮಸೂದೆ ವಿರೋಧಿಸಿ ರೈತ ಸಂಘಟನೆಗಳು ಡಿ.8ರಂದು ದ.ಕ. ಜಿಲ್ಲೆಯಲ್ಲೂ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿವೆ.

ಮಂಗಳೂರು ಸಂಪರ್ಕಿಸುವ ಮೂರು ಕಡೆಗಳಲ್ಲಿ ರಸ್ತೆ ತಡೆ ಹೊರತುಪಡಿಸಿದರೆ ಬಲಾತ್ಕಾರದ ಬಂದ್ ಸಾಧ್ಯತೆ ಇಲ್ಲ. ಬಂದ್‌ಗೆ ವಿಪಕ್ಷಗಳ ಸಹಿತ ಹಲವು ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ.

ರೈತ ಸಂಘ, ಹಸಿರು ಸೇನೆ, ಪ್ರಾಂತ ರೈತ ಸಂಘ, ವಿದ್ಯಾರ್ಥಿ, ಯುವ, ದಲಿತ ಸಂಘಟನೆಗಳು ಡಿ.8ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರು ಜಂಕ್ಷನ್, ಉಪ್ಪಿನಂಗಡಿ ಹಾಗೂ ಬೆಳ್ತಂಗಡಿಗಳಲ್ಲಿ ರಸ್ತೆ ತಡೆ ನಡೆಸಲು ತೀರ್ಮಾನಿಸಿವೆ. ಮಂಗಳೂರು ಬಂದರು ಶ್ರಮಿಕರ ಸಂಘವು ಕೂಡ ನಗರದ ಹಳೆ ಬಂದರು ಕಾರ್ಮಿಕ ಕಟ್ಟೆಯ ಸಮೀಪ ಬೆಳಗ್ಗೆ 9:30ಕ್ಕೆ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದೆ. ಆದರೆ ಯಾವುದೇ ಬಂದ್‌ಗೆ ಅವಕಾಶ ಇಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.

ಹಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿರುವುದರಿಂದ ಜಿಲ್ಲೆಯಲ್ಲಿನ ಬಸ್, ಆಟೋರಿಕ್ಷಾ ಹಾಗೂ ಕಾರ್ಮಿಕ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಬಹುದು. ಇದನ್ನು ಹೊರತುಪಡಿಸಿದರೆ, ಖಾಸಗಿ ಹಾಗೂ ಸರಕಾರಿ ಬಸ್‌ಗಳು ಬಂದ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ. ಅಂಗಡಿ ಮುಂಗಟ್ಟುಗಳು ಬಂದ್‌ನಿಂದ ದೂರ ಉಳಿದಿವೆ. ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ, ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ, ಬಂದರು ಶ್ರಮಿಕರ ಸಂಘಗಳು ಕೂಡ ಬಂದ್, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.

‘ಬಂದ್ ರೈತರಿಗಷ್ಟೇ ಅಲ್ಲ, ಗ್ರಾಹಕನಿಗೂ ಅನ್ವಯ’

ಭಾರತ್ ಬಂದ್‌ಗೆ ರೈತ ಸಂಘಟನೆಗಳು ದೇಶಾದ್ಯಂತ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ. ಇದು ಕೇವಲ ರೈತರಿಗೆ ಮಾತ್ರವಲ್ಲ ಕಾರ್ಮಿಕರು, ಕಟ್ಟಕಡೆಯ ಗ್ರಾಹಕನಿಗೂ ಅನ್ವಯವಾಗಲಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯದರ್ಶಿ ರವಿಕಿರಣ ಪುಣಚ ತಿಳಿಸಿದ್ದಾರೆ.

ಕೃಷಿ ಮಸೂದೆಗಳನ್ನು ಜಾರಿಗೆ ತರಲು ಕೇಂದ್ರ ಸರಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಾಪಸ್ ಪಡೆಯಲು ಆಗ್ರಹಿಸಿ ನಡೆಸುತ್ತಿರುವ ಬಂದ್‌ಗೆ ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸವಿದೆ. ಇದು ಎರರಡನೇ ಸ್ವಾತಂತ್ರ ಸಂಗ್ರಾಮ ಎನ್ನುವಷ್ಟು ವ್ಯಾಪಕವಾಗಿ ಹೋರಾಟಗಳು ನಡೆಯು ತ್ತಿವೆ. ಇದು ಕೇಂದ್ರ ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ ಎಂದರು.

ದ.ಕ. ಜಿಲ್ಲೆಯಲ್ಲೂ ರೈತ, ದಲಿತ, ಕಾರ್ಮಿಕ, ಜನಪರ, ಕನ್ನಡಪರ ಸಂಘಟನೆಗಳು ಸಹಿತ ಹಲವು ರಾಜಕೀಯ ಪಕ್ಷಗಳು ಸಹಿತ ಸ್ವಯಂ ಪ್ರೇರುತ ಬಂದ್‌ಗೆ ಬೆಂಬಲ ಸೂಚಿಸಿವೆ. ಎಲ್ಲ ಸಾರ್ವಜನಿಕರೂ ಬಂದ್‌ಗೆ ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯದರ್ಶಿ ರವಿಕಿರಣ ಪುಣಚ ಮನವಿ ಮಾಡಿದ್ದಾರೆ.

ಎಂದಿನಂತೆಯೇ ಬಸ್ ಸಂಚಾರ

ಮಂಗಳೂರು ನಗರದಲ್ಲಿ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ ಎನ್ನುವ ಮಾಹಿತಿ ಇದೆ. ಆದರೆ ನಮ್ಮ ಸಂಘಟನೆಯಿಂದ ಬಂದ್‌ಗೆ ಯಾವುದೇ ಬೆಂಬಲವಿಲ್ಲ. ಎಂದಿನಂತೆಯೇ ಸಿಟಿ ಬಸ್‌ಗಳು ಸಂಚರಿಸಲಿವೆ. ಪ್ರಯಾಣಿಕರು ಅನಗತ್ಯ ಗೊಂದಲಗಳಿಗೆ ಒಳಗಾಗುವ ಅಗತ್ಯವಿಲ್ಲ ಎಂದು ಮಂಗಳೂರು ಸಿಟಿ ಬಸ್‌ಗಳ ಅಸೋಸಿಯೇಶನ್‌ನ ಅಧ್ಯಕ್ಷ ದಿಲ್‌ರಾಜ್ ಆಳ್ವ ಸ್ಪಷ್ಟಪಡಿಸಿದ್ದಾರೆ.

ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್, ಜಿಲ್ಲಾಡಳಿತ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಬಸ್ ನಿಲ್ಲಿಸುವಂತೆ ಸಂಘಕ್ಕೆ ಯಾವುದೇ ಆದೇಶ ಬಂದಿಲ್ಲ. ಹಾಗಾಗಿ ಬಸ್ ಸಂಚಾರವು ಎಂದಿನಂತೆಯೇ ಇರಲಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಬಂದೋಬಸ್ತ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವು ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಬಂದ್‌ಗೆ ಸಂಬಂಧಪಟ್ಟಂತೆ ನಗರದಲ್ಲಿ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್‌ಕುಮಾರ್ ತಿಳಿಸಿದ್ದಾರೆ.

ಬಂದ್‌ಗೆ ಬೆಂಬಲ ಸೂಚಿಸಿರುವ ಸಂಘಟನೆಗಳ ಜೊತೆ ಮಾತುಕತೆ ನಡೆಸಲಾಗಿದೆ. ಯಾವುದೇ ದುರ್ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಗರದ ಆಯಕಟ್ಟಿನ ಜಾಗದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅವಘಡ ಸಂಭವಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X