Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶಸ್ತಿ ಹಿಂದಿರುಗಿಸಲು ರಾಷ್ಟ್ರಪತಿ...

ಪ್ರಶಸ್ತಿ ಹಿಂದಿರುಗಿಸಲು ರಾಷ್ಟ್ರಪತಿ ಭವನಕ್ಕೆ ಕ್ರೀಡಾಪಟುಗಳು ನಡೆಸಿದ ರ‍್ಯಾಲಿಗೆ ಪೊಲೀಸ್ ತಡೆ

ವಾರ್ತಾಭಾರತಿವಾರ್ತಾಭಾರತಿ7 Dec 2020 8:31 PM IST
share
ಪ್ರಶಸ್ತಿ ಹಿಂದಿರುಗಿಸಲು ರಾಷ್ಟ್ರಪತಿ ಭವನಕ್ಕೆ ಕ್ರೀಡಾಪಟುಗಳು ನಡೆಸಿದ ರ‍್ಯಾಲಿಗೆ ಪೊಲೀಸ್ ತಡೆ

ಹೊಸದಿಲ್ಲಿ, ಡಿ. 6: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ‘‘35 ರಾಷ್ಟ್ರೀಯ ಪ್ರಶಸ್ತಿ’’ಗಳನ್ನು ಹಿಂದಿರುಗಿಸಲು ಪಂಜಾಬ್‌ನಿಂದ ಸೋಮವಾರ ರಾಷ್ಟ್ರಪತಿ ಭವನಕ್ಕೆ  ರ‍್ಯಾಲಿ ನಡೆಸಿದ ಎರಡು ಬಾರಿ ಏಷಿಯನ್ ಗೇಮ್‌ನ ಚಿನ್ನದ ಪದಕ ವಿಜೇತ ಮಾಜಿ ಕುಸ್ತಿಪಟು ಕರ್ತಾರ್ ಸಿಂಗ್ ನೇತೃತ್ವದ ಕೆಲವು ಕ್ರೀಡಾಪಟುಗಳನ್ನು ದಾರಿ ಮಧ್ಯೆ ಪೊಲೀಸರು ತಡೆದಿದ್ದಾರೆ.

 1982ರಲ್ಲಿ ಅರ್ಜುನ ಪ್ರಶಸ್ತಿ ಪುರಷ್ಕೃತ ಹಾಗೂ 1987ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರ್ತಾರ್ ಸಿಂಗ್ ಅವರೊಂದಿಗೆ ಒಲಿಂಪಿಂಕ್ ಚಿನ್ನ ವಿಜೇತ ಮಾಜಿ ಹಾಕಿ ಆಟಗಾರ ಗುರ್ಮೈಲ್ ಸಿಂಗ್ ಹಾಗೂ ಮಹಿಳಾ ಹಾಕಿ ತಂಡ ಮಾಜಿ ಕ್ಯಾಪ್ಟನ್ ರಾಜ್‌ಬೀರ್ ಕೌರ್ ಹಾಗೂ ಇತರರು ಇದ್ದರು. ಗುರ್ಮೈಲ್ 2014ರ ದ್ರೋಣಾಚಾರ್ಯ ಪ್ರಶಸ್ತಿ ವಿಜೇತರಾಗಿದ್ದರೆ, ರಾಜ್‌ಬೀರ್ 1984ರಲ್ಲಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು.

 ‘‘ರೈತರು ಯಾವಾಗಲೂ ನಮಗೆ ಬೆಂಬಲ ನೀಡುತ್ತಾರೆ. ನಮ್ಮ ರೈತ ಸಹೋದರರ ಮೇಲೆ ಲಾಠಿಚಾರ್ಜ್ ನಡೆಸುತ್ತಿದ್ದಾರೆ. ರಸ್ತೆ ಬಂದ್ ಆಗಿದೆ. ಅವರು ತಮ್ಮ ಹಕ್ಕುಗಳಿಗಾಗಿ ತೀವ್ರ ಚಳಿಯಲ್ಲಿ ರಸ್ತೆಯಲ್ಲಿ ಧರಣಿ ನಡೆಸುತ್ತಿದ್ದಾರೆ. ಇದನ್ನು ನೋಡುವಾಗ ನಮಗೆ ಬೇಸರವಾಗುತ್ತದೆ’’ ಎಂದು 1978 ಹಾಗೂ 1986ರಲ್ಲಿ ಏಷಿಯನ್ ಗೇಮ್‌ನಲ್ಲಿ ಚಿನ್ನದ ಪದಕ ಪಡೆದ ಕರ್ತಾರ್ ಸಿಂಗ್ ಹೇಳಿದ್ದಾರೆ. ‘‘ನಾನು ರೈತನ ಮಗ, ಪೊಲೀಸ್ ಐಜಿಯಾಗಿದ್ದರೂ ನಾನು ಈಗಲೂ ಕೃಷಿ ಕೆಲಸ ಮಾಡುತ್ತಿದ್ದೇನೆ’’ ಎಂದು ಅವರು ಹೇಳಿದ್ದಾರೆ.

ಕ್ರೀಡಾಪಟುಗಳು ರವಿವಾರ ದಿಲ್ಲಿಗೆ ತಲುಪಿದರು. ಸೋಮವಾರ ಪ್ರೆಸ್ ಕ್ಲಬ್ ಆಫ್ ಇಂಡಿಯಾದಿಂದ ರ್ಯಾಲಿ ಆರಂಭಿಸಿದರು. ಆದರೆ, ಅವರನ್ನು ಕೃಷಿ ಭವನದ ಸಮೀಪ ಪೊಲೀಸರು ತಡೆದು ಹಿಂದೆ ಕಳುಹಿಸಿದರು. ‘‘ಕರಾಳ ಕಾಯ್ದೆಯನ್ನು ಹಿಂಪಡೆಯುವಂತೆ ನಾನು ಕೇಂದ್ರ ಸರಕಾರದಲ್ಲಿ ವಿನಂತಿಸುತ್ತಿದ್ದೇನೆ. ದೇಶ ಕೋರೊನಾದಿಂದ ತತ್ತರಿಸುತ್ತಿದೆ. ಈ ನಡುವೆ ಕೇಂದ್ರ ಸರಕಾರ ಎರಡೂ ಸದನಗಳಲ್ಲಿ ಈ ಮಸೂದೆಯನ್ನು ಮಂಜೂರು ಮಾಡಿದೆ. ಅಲ್ಲದೆ ರಾಷ್ಟ್ರಪತಿಯವರಿಂದ ಅಂಕಿತ ಹಾಕಿಸಿದೆ’’ ಎಂತು ಕರ್ತಾರ್ ಹೇಳಿದ್ದಾರೆ. ‘‘ಕೃಷಿ ಕಾಯ್ದೆಯಲ್ಲ್ಲಿ ಬದಲಾವಣೆ ತರಬೇಕು ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ನಮ್ಮ ಮಕ್ಕಳು ಸಂತುಷ್ಟರಾಗದೇ ಇರುವಾಗ ಅವರನ್ನು ಸಂತುಷ್ಟಪಡಿಸಲು ಕೇಂದ್ರ ಸರಕಾರ ಆದ್ಯತೆ ನೀಡಬೇಕು. ವಿವಾದಾತ್ಮಕ ಕಾಯ್ದೆಯನ್ನು ರೈತರು ಒಪ್ಪಿಕೊಳ್ಳಬೇಕು ಎಂದು ಸರಕಾರ ಯಾಕೆ ಬಲವಂತ ಮಾಡುತ್ತಿದೆ’’ ಎಂದು ಕರ್ತಾರ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X