Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ್ ಬಂದ್‍ ಬೆಂಬಲಿಸಿ ಅನ್ನದಾತರ ಋಣ...

ಭಾರತ್ ಬಂದ್‍ ಬೆಂಬಲಿಸಿ ಅನ್ನದಾತರ ಋಣ ಸಂದಾಯ ಮಾಡಬೇಕಾಗಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Dec 2020 9:08 PM IST
share
ಭಾರತ್ ಬಂದ್‍ ಬೆಂಬಲಿಸಿ ಅನ್ನದಾತರ ಋಣ ಸಂದಾಯ ಮಾಡಬೇಕಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಡಿ.7: ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆಕೊಟ್ಟಿರುವ ಡಿ.8ರ ಭಾರತ ಬಂದ್‍ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಬಂದ್‍ನಲ್ಲಿ ಭಾಗವಹಿಸುವುದಲ್ಲದೆ ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೋರಿದ್ದಾರೆ.

ದೇಶದ ರಾಜಧಾನಿಯಲ್ಲಿ ಲಕ್ಷಾಂತರ ರೈತರು ಕೊರೆಯುವ ಚಳಿ, ಪೊಲೀಸರ ದೌರ್ಜನ್ಯ ಮತ್ತು ಬಿಜೆಪಿ ಕಿಡಿಗೇಡಿಗಳ ಅಪಪ್ರಚಾರಕ್ಕೆ ಎದೆಗೊಟ್ಟು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ನಮಗಾಗಿ ಹೋರಾಟ ನಡೆಸುತ್ತಿರುವ ಅನ್ನದಾತರ ಬೆಂಬಲಕ್ಕೆ ನಿಲ್ಲುವುದು ಅನ್ನ ತಿನ್ನುವ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನ ವೈರಸ್ ದಾಳಿಯಿಂದ ತಾವು ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿ ನರಳುತ್ತಿರುವ ನಮ್ಮ ರೈತ ಬಂಧುಗಳು ‘ನಮ್ಮನ್ನು ರಕ್ಷಿಸಿ, ಉಳಿಸಿ’ ಎಂದು ಗೋಗರೆಯುತ್ತಿರುವಾಗ, ಕೇಂದ್ರ ಸರಕಾರ ಕೃಷಿ ವಿರೋಧಿ ಕಾಯ್ದೆಗಳನ್ನು ಅವಸರದಲ್ಲಿ ಜಾರಿಗೊಳಿಸಿ ಅವರ ಗಾಯದ ಮೇಲೆ ಬರೆ ಎಳೆದು ನಿಧಾನವಾಗಿ ಸಾಯಿಸಲು ಹೊರಟಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಖಾಸಗಿ ಕಂಪೆನಿಗಳ ತಾಳಕ್ಕೆ ಕೇಂದ್ರ ಸರಕಾರ ಕುಣಿಯತೊಡಗಿದೆ. ಈ ಸಂಚಿನ ಭಾಗವಾಗಿಯೇ ಎಪಿಎಂಸಿ ಹೊಂದಿರುವ ನಿಯಂತ್ರಣವನ್ನು ಕಿತ್ತು ಹಾಕಿ ಖಾಸಗಿಯವರಿಗೆ ಅನಿಯಂತ್ರಿತವಾದ ಮುಕ್ತ ಹಸ್ತ ನೀಡುವ ದುರುದ್ದೇಶದಿಂದ ಈ ಕಾಯ್ದೆ ತರಲಾಗಿದೆ. ಈ ಬಗ್ಗೆ ನಮ್ಮ ರೈತರು ಜಾಗೃತರಾಗಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ರೈತ ಸಂಘಟನೆಗಳ ಜೊತೆ ಕೇಂದ್ರ ಸರಕಾರ ಹಲವು ಸುತ್ತಿನ ಮಾತುಕತೆ ನಡೆಸಿದರೂ ಕನಿಷ್ಠ ಬೆಂಬಲ ಬೆಲೆಯ ಒಂದು ಅಂಶವನ್ನು ಕಾನೂನಿನಲ್ಲಿ ಅಳವಡಿಸಬೇಕೆಂಬ ಸಣ್ಣ ಬೇಡಿಕೆಯನ್ನು ಒಪ್ಪದಿರುವ ಕೇಂದ್ರ ಸರಕಾರದ ದುರುದ್ದೇಶ ಸ್ಪಷ್ಟವಾಗಿದೆ. ಇದು ಕಾರ್ಪೋರೇಟ್ ಧಣಿಗಳ ಗುಲಾಮಿ ಸರಕಾರ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಪ್ರಕಾರ ಕೃಷಿ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದ್ದರೂ ರಾಜ್ಯ ಸರಕಾರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಈ ಕರಾಳ ಕಾನೂನುಗಳನ್ನು ತಂದಿರುವ ಕೇಂದ್ರ ಸರಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಅವರು ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರದ ಖಾಸಗೀಕರಣದ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯವಸ್ತುಗಳ ಕಾಯ್ದೆ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್‍ಟಿ. ಹೀಗೆ ಒಂದಾದರ ಮೇಲೊಂದರಂತೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಬಿಜೆಪಿಯಿಂದ ದೇಶಕ್ಕೆ ಉಳಿಗಾಲ ಇಲ್ಲ. ರಾಜ್ಯದ ಬಿಜೆಪಿ ಸರಕಾರ ಕರ್ನಾಟಕ ಭೂ ಸುಧಾರಣಾ ಕಾಯ್ದಗೆ ತಂದಿರುವ ತಿದ್ದುಪಡಿ ಕೂಡ ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳ ಹಿತಾಸಕ್ತಿ ರಕ್ಷಣೆಗಾಗಿ ರೈತರನ್ನು ಬಲಿಗೊಡುವ ಅಜೆಂಡಾದ ಭಾಗವಾಗಿದೆ ಎಂದು ಅವರು ದೂರಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರದ ರೈತವಿರೋಧಿ ನೀತಿ-ನಿರ್ಧಾರಗಳನ್ನು ಗುಲಾಮರಂತೆ ತಲೆಬಗ್ಗಿಸಿ ಒಪ್ಪಿಕೊಂಡು ಜಾರಿಗೊಳಿಸುತ್ತಿರುವ ರಾಜ್ಯದ ಬಿಜೆಪಿ ಸರಕಾರ ರಾಜ್ಯದ ರೈತರಿಗೆ ದ್ರೋಹಬಗೆಯುತ್ತಿದೆ. ಹಿಂದೆ ಗುಂಡು ಹೊಡೆದು ರೈತರನ್ನು ಸಾಯಿಸಿದ ಯಡಿಯೂರಪ್ಪ ಈಗ ಕರಾಳ ಕಾನೂನುಗಳ ಮೂಲಕ ರೈತರನ್ನು ಸಾಯಿಸಲು ಹೊರಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿಲ್ಲಿಯಲ್ಲಿ ರೈತರು ಪ್ರಭತ್ವದ ದೌರ್ಜನ್ಯವನ್ನು ಎದುರಿಸಿ, ಕಷ್ಟ-ನಷ್ಟಗಳನ್ನುಂಡು ನಮಗಾಗಿ ಹೋರಾಡುತ್ತಿದ್ದಾರೆ. ನಾಳಿನ ಭಾರತ ಬಂದ್‍ಗೆ ಎಲ್ಲರೂ ಬೆಂಬಲ ನೀಡುವ ಮೂಲಕ ಅನ್ನದಾತರ ಋಣ ಸಂದಾಯ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X