Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಭಾರತ್ ಬಂದ್'ಗೆ ಮೈಸೂರಿನಲ್ಲಿ ವ್ಯಾಪಕ...

'ಭಾರತ್ ಬಂದ್'ಗೆ ಮೈಸೂರಿನಲ್ಲಿ ವ್ಯಾಪಕ ಬೆಂಬಲ: ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತ ಬಂದ್

ವಾರ್ತಾಭಾರತಿವಾರ್ತಾಭಾರತಿ8 Dec 2020 1:42 PM IST
share
ಭಾರತ್ ಬಂದ್ಗೆ ಮೈಸೂರಿನಲ್ಲಿ ವ್ಯಾಪಕ ಬೆಂಬಲ: ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತ ಬಂದ್

ಮೈಸೂರು: ಭಾರತ್ ಬಂದ್ ಗೆ ಮೈಸೂರಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ನೀಡಿದರು.

ಮಂಗಳವಾರ ಬೆಳಗ್ಗೆಯೇ ನಗರದ ಗ್ರಾಮಾಂರ ಬಸ್ ನಿಲ್ದಾಣಕ್ಕೆ ಜಮಾಯಿಸಿದ ರೈತರು ಬಸ್ ಗಳ ಸಂಚಾರವನ್ನು ತಡೆದರು. ನಂತರ ಅಲ್ಲಿಂದ ಇರ್ವಿನ್ ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಕೆಲವು ಅಂಗಡಿಗಳು ಬಾಗಿಲಿ ತೆಗೆದಿದ್ದವು. ಈ ಸಂದರ್ಭದಲ್ಲಿ ರೈತರು ನಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು‌. ರೈತರ ಮನವಿಗೆ  ಸ್ಪಂದಿಸಿದ ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ನೀಡಿದರು.

ಮತ್ತೊಂದೆಡೆ ಮೈಸೂರು-ನಂಜನಗೂಡು ರಸ್ತೆಯ ಜೆಎಸ್ಎಸ್ ಕಾಲೇಜಿನ ಬಳಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ನೇತೃತ್ವದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಲಾಯಿತು. ಕೊಂಬಿಯಾ ಏಷಿಯಾ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘಟನೆ, ಮತ್ತು ವಿವಿಧ ಪ್ರಗತಿಪರ ಮುಖಂಡರು, ರೈತ ಮುಖಂಡ ಹೊಸಕೋಟೆ ಬಸವರಾಜು, ಹಿರಿಯ ಸಮಾಜವಾದಿ ಪ‌ಮಲ್ಲೇಶ್ ನೇತೃತ್ವದಲ್ಲಿ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಆಗಮಿಸಿ ಪ್ರತಿಭಟನೆ ನಡೆಸಿ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಇದೇ ವೇಳೆ ಆಗಮಿಸಿದ ಖ್ಯಾತ ಸಾಹಿತಿ ದೇವನೂರ ಮಹಾದೇವ ಮಾತನಾಡಿ, ಕೃಷಿ ಸಂಬಂಧ ಕಾನೂನು ರೂಪಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಆದರೆ ರಾಜ್ಯ ಸರ್ಕಾರಗಳು ಪ್ರಶ್ನೆಯನ್ನೇ ಮಾಡುತ್ತಿಲ್ಲ, ಜಿಎಸ್ಟಿ ತಂದು ರಾಜ್ಯಗಳ ಜುಟ್ಟನ್ನು ಕೇಂದ್ರ ಸರ್ಕಾರ ಹಿಡಿದಿದೆ. ಸಂವಿವಧಾನದ ಪ್ರಕಾರ ಕೃಷಿ ಸಂಬಂಧಿಸಿದ ಕಾನೂನು ರೂಪಿಸುವ ಅಧಿಕಾರ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ರೈತರನ್ನು ಕೇಳದೆ, ಸಂಸತ್ ನಲ್ಲೂ ಚರ್ಚೆ ಮಾಡದೆ ಕೃಷಿ ವಿರೋಧಿ ಕಾನೂನುಗಳನ್ನು ತರುವ ಮೂಲಕ ಸರ್ವಾಧಿಕಾರಿ ಆಡಳಿತ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಕೊರೆಯುವ ಚಳಿ ಇದ್ದಿರೂ ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಲಾಗಿದೆ. ರೈತರನ್ನು ಇಭ್ಬಾಗ ಮಾಡಿ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಸಂಘಪರಿವಾರ ಎನ್ನುವುದು ವಂಚನೆ ದ್ರೋಹ ಗುಣಲಕ್ಷಣಗಳನ್ನು ಹೊಂದಿದೆ. ಅದನ್ನು ಅವರು ಬದಲಾಯಿಸಿಕೊಂಡರೆ ಮಾತ್ರ ದೇಶಕ್ಕೆ ಒಳ್ಳೆಯದಾಗುತ್ತದೆ. ಇಲ್ಲದಿದ್ದರೆ ದೇಶ ಛಿದ್ರವಾಗುತ್ತದೆ ಎಂದು ಹೇಳಿದರು.

ರೈತ ಸಂಘಟನೆಯ ಮುಖಂಡರು ಜಿಲ್ಲಾಧ್ಯಕ್ಷ ವಿದ್ಯಾಸಾಗರ ನೇತೃತ್ವದಲ್ಲಿ ಗನ್ ಹೌಸ್ ವೃತ್ತದಿಂದ ನೂರಡಿ ರಸ್ತೆ ಮೂಲಕ ಜಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನೆ ವ್ಯಕ್ತಪಡಿಸಿದರು. ಇದೇ ವೇಳೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು.

ಪ್ರತಭಟನೆಯಲ್ಲಿ ಮುಖಂಡರಾದ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಉಗ್ರನರಸಿಂಹೇಗೌಡ, ಪ.ಮಲ್ಲೇಶ್, ಚಂದ್ರಶೇಖರ ಮೇಟಿ, ಸಂಧ್ಯಾ ಪಿ, ಉಮಾದೇವಿ, ಪಂಡಿತಾರಾಧ್ಯ, ರತಿರಾವ್, ಡಾ.ವಿ.ಲಕ್ಷ್ಮಿನಾರಾಯಣ್, ಭಾಗವಹಿಸಿದ್ದರು.

ಸಾಮೂಹಿಕ ನಾಯಕತ್ವ ರೈತ ಸಂಘದ ವಿದ್ಯಾಸಾಗರ್, ಕನ್ನಡ ಚಳುವಳಿ ಬಿ.ಎ.ಶಿವಶಂಕರ್, ದಸಂಸ ಮುಖಂಡರಾದ ಕಾರ್ಯ ಬಸವಣ್ಣ, ಮಲ್ಲಹಳ್ಳಿ ನಾರಾಯಣ, ಜನಸಂಗ್ರಾಮ ಪರಿಷತ್ ನ ನಗರ್ಲೆ ವಿಜಯಕುಮಾರ್, ಎಎಪಿ ಪಕ್ಷದ ಮಾಲವಿಕ ಗುಬ್ಬಿವಾಣಿ, ಮಂಜು ಕಿರಣ್ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X