Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೋರಾಟ ನಿರತ ರೈತರನ್ನು ಅವಮಾನಿಸಿದ ಶೋಭಾ...

ಹೋರಾಟ ನಿರತ ರೈತರನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ

ವಿವಾದಾತ್ಮಕ ಹೇಳಿಕೆ ನೀಡಿದ ಸಂಸದೆ

ವಾರ್ತಾಭಾರತಿವಾರ್ತಾಭಾರತಿ8 Dec 2020 7:43 PM IST
share
ಹೋರಾಟ ನಿರತ ರೈತರನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಡಿ.8: ದಿಲ್ಲಿಯಲ್ಲಿ ಕೃಷಿ ಮಸೂದೆಗಳ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಶಾಹಿನ್‍ ಬಾಗ್ ಮತ್ತು ಖಾಲಿಸ್ತಾನಿಗಳ ತುಕಡೇ ಗ್ಯಾಂಗ್ ಹಸಿರು ಸಾಲು ಹೊದ್ದು ಪಾಲ್ಗೊಂಡಿವೆ. ದಿಲ್ಲಿಯ ರೈತ ಚಳವಳಿ ರಾಜಕೀಯ ಪ್ರೇರಿತ ಹಾಗೂ ಸ್ಥಾಪಿತ ಹಿತಾಸಕ್ತಿಗಳ ಹೋರಾಟವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿಎಎ ಚಳವಳಿಯಲ್ಲಿ ಭಾಗವಹಿಸಿದ್ದ ಶಾಹಿನ್‍ ಬಾಗ್ ತುಕಡೇ ತುಕಡೇ ಗ್ಯಾಂಗ್ ಕೂಡ ಹಸಿರು ಶಾಲು ಹೊದ್ದು ರೈತ ಹೋರಾಟದಲ್ಲಿ ಭಾಗವಹಿಸಿವೆ. ದಿಲ್ಲಿಯ ರೈತ ಚಳವಳಿ ರಾಜಕೀಯ ಪ್ರೇರಿತ ಹಾಗೂ ಸ್ಥಾಪಿತ ಹಿತಾಸಕ್ತಿಗಳ ಹೋರಾಟ. ವಿರೋಧಕ್ಕಾಗಿ ವಿರೋಧ ಮಾಡುವ ನಾಟಕವನ್ನು ವಿಪಕ್ಷಗಳು ಮಾಡುತ್ತಿವೆ. ಈ ಷಡ್ಯಂತ್ರದ ಬಗ್ಗೆ ಜನಸಾಮಾನ್ಯರು, ರೈತರು ಅರ್ಥಮಾಡಿಕೊಳ್ಳಬೇಕು ಎಂದ ಅವರು, ಪಂಜಾಬಿಗರ ತ್ಯಾಗ, ಬಲಿದಾನದ ಬಗ್ಗೆ ಗೌರವವಿದೆ. ಆದರೆ, ಕೆನಡಾ ಮತ್ತು ಇಂಗ್ಲೆಂಡ್‍ನಲ್ಲಿ ಖಾಲಿಸ್ತಾನ್ ಚಳವಳಿಯ ಬೀಜ ಇನ್ನೂ ಉಳಿದುಕೊಂಡಿದೆ. ಅವರು ಇನ್ನೂ ಖಾಲಿಸ್ತಾನ್ ಚಳವಳಿ ಬಗ್ಗೆ ಮಾತಾಡುತ್ತಾರೆ. ಸಂಸದರಿಗೆ ಧ್ವನಿ ಮುದ್ರಿಕೆ ಕಳುಹಿಸಿ ಪಂಜಾಬಿನ ಪೊಲೀಸ್ ಮತ್ತು ಸೈನ್ಯ ಭಾರತದ ವಿರುದ್ಧ ತಿರುಗಿಬೀಳಬೇಕು ಎಂದು ಪ್ರಚೋದಿಸುತ್ತಾರೆ. ದೇಶ ವಿರೋಧಿ ಚಟುವಟಿಕೆಯಲ್ಲಿದ್ದವರು ಕೂಡ ರೈತ ಹೋರಾಟಕ್ಕೆ ಕೈಜೋಡಿಸಿದ್ದಾರೆ ಎಂದು ದೂರಿದರು.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯಿದೆ, ರೈತರ ಬೆಳೆಗಳಿಗೆ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಹಾಗೂ ಅಗತ್ಯ ಸರಕುಗಳ ಕಾಯಿದೆಗಳನ್ನು ಕಳೆದ ಅವೇಶನದಲ್ಲಿ ಮಂಡಿಸಿ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ 3 ತಾಸು ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ರೈತರ ಬೆಳೆಗೆ ಈ ಬಾರಿ ಬೆಂಬಲ ಬೆಲೆ ದೊರಕಿದೆ. ಆದರೆ, ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ಚಟುವಟಿಕೆ, ಕೃಷಿ ಉತ್ಪನ್ನಗಳ ರಫ್ತು, ಆಮದು ಮಾರಾಟ ನಿಯಂತ್ರಿಸುವ ಮಧ್ಯವರ್ತಿಗಳು ಈ ಹೋರಾಟದ ಹಿಂದೆ ಇದ್ದಾರೆ. ಇವರಿಗೆ ಮಣಿದು ಪಂಜಾಬ್ ಸರಕಾರ ರೈತ ಹೋರಾಟಕ್ಕೆ ಬೆಂಬಲ ನೀಡಿದೆ ಎಂದು ದೂರಿದರು.

ಕಳೆದ 2 ಲೋಕಸಭೆ ಚುನಾವಣೆಯಲ್ಲಿ ನೂತನ ಕೃಷಿ ಕಾಯ್ದೆ ಬೆಂಬಲ ಹಾಗೂ ಎಪಿಎಂಸಿಯಿಂದ ರೈತರನ್ನು ಮುಕ್ತಮಾಡುತ್ತೇವೆ ಎಂಬುದು ಕಾಂಗ್ರೆಸ್ ಪ್ರಣಾಳಿಕೆ ಆಗಿತ್ತು. ಯುಪಿಎ ಕೂಟದಲ್ಲಿದ್ದ ಶರದ್ ಪವಾರ್ ಕೂಡ ಮುಖ್ಯಮಂತ್ರಿಗೆ ಪತ್ರ ಬರೆದು ಕೃಷಿ ವಲಯದಲ್ಲಿ ಖಾಸಗೀಕರಣಕ್ಕೆ ಉತ್ತೇಜನ ನೀಡಬೇಕು ಎಂದು ಹೇಳಿದ್ದರು. ಕಾಂಗ್ರೆಸ್ ಮುಖಂಡ ರಾಹುಲ್‍ ಗಾಂಧಿ ಕೂಡ ಅಂದಿನ ಕಾಂಗ್ರೆಸ್ ನೇತೃತ್ವದ ಸರಕಾರಗಳಿಗೆ ಪತ್ರ ಬರೆದು ಎಪಿಎಂಸಿಯಿಂದ ಹಣ್ಣು ತರಕಾರಿಗಳನ್ನು ಹೊರಗಿಡಬೇಕು ಎಂದು ಸೂಚನೆ ನೀಡಿದ್ದಾರೆ. ಕೃಷಿ ಕಾಯ್ದೆ ಜಾರಿ ಬಗ್ಗೆ ರಚಿಸಿದ್ದ ಸ್ಥಾಯಿ ಸಮಿತಿ ಸದಸ್ಯರಾಗಿ ಕಾಂಗ್ರೆಸ್ ಮುಖಂಡರಾದ ಕಮಲ್‍ನಾಥ್ ಮತ್ತು ಅಮರಿಂದರ್ ಸಿಂಗ್ ಕೂಡ ಇದ್ದರು. ಅಂದರೆ 2013 ರಲ್ಲಿ ಕಾಂಗ್ರೆಸ್ ಕೃಷಿ ಕಾಯ್ದೆ ಪರವಾಗಿತ್ತು. ಈಗ ವಿರೋಧಕ್ಕಾಗಿ ವಿರೋಧ ಮಾಡಲು ರೈತರ ಪ್ರತಿಭಟನೆಗೆ ಬೆಂಬಲ ನೀಡುತ್ತಿದೆ ಎಂದು ಟೀಕಿಸಿದರು.

ಸಿಪಿಐ ಆಡಳಿತ ಇರುವ ಕೇರಳದಲ್ಲಿ ಎಪಿಎಂಸಿ ಕಾಯ್ದೆಯೇ ಇಲ್ಲ. ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಕೇಂದ್ರದ ಕೃಷಿ ಕಾಯ್ದೆಗಳನ್ನು ನವಂಬರ್ ನಲ್ಲಿ ಅನುಷ್ಠಾನ ಮಾಡುವುದಾಗಿ ಹೇಳಿ ಈಗ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರಕಾರಕ್ಕೆ ಜನತೆ ಅಭೂತಪೂರ್ವ ಬೆಂಬಲ ನೀಡಿದ್ದು, ಮೂಲೆ ಗುಂಪಾಗಿರುವ ರಾಜಕೀಯ ಪಕ್ಷಗಳು ತಮ್ಮ ಅಸ್ಥಿತ್ವಕ್ಕಾಗಿ ರೈತರ ಹೆಸರಲ್ಲಿ ಮಧ್ಯವರ್ತಿಗಳನ್ನು ಮತ್ತು ಕಮಿಷನ್ ಏಜೆಂಟರನ್ನು ಎತ್ತಿ ಕಟ್ಟಿ ಹೋರಾಟ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವರಸಿದ್ದಿವೇಣುಗೋಪಾಲ, ಸುಧೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X