Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ ರೈತರನ್ನು ದಾರಿ...

ಕಾಂಗ್ರೆಸ್‍ ರೈತರನ್ನು ದಾರಿ ತಪ್ಪಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ8 Dec 2020 7:54 PM IST
share
ಕಾಂಗ್ರೆಸ್‍ ರೈತರನ್ನು ದಾರಿ ತಪ್ಪಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು, ಡಿ.8: ರೈತರನ್ನು ನಾವಾಗಲಿ, ನೀವಾಗಲಿ ಯಾರಿಂದಲೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಶಿಕ್ಷಣ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುವ ರೈತರು, ಬಹಳ ಬುದ್ಧಿವಂತರು. ಅವರನ್ನು ಯಾರಾದರೂ ದಾರಿ ತಪ್ಪಿಸುತ್ತಿದ್ದೇವೆ ಎಂದು ಭಾವಿಸಿದರೆ ನಾವು ಮೂರ್ಖರಾಗುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಕುರಿತು ನಡೆಯುತ್ತಿದ್ದ ಚರ್ಚೆ ವೇಳೆ ಕಾಂಗ್ರೆಸ್‍ನವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಮಾಡಿದ ಟೀಕೆಗೆ ಅವರು ತಿರುಗೇಟು ನೀಡಿದರು.

ದಿಲ್ಲಿ ಬಳಿ ಪ್ರತಿಭಟನೆ ಮಾಡುತ್ತಿರುವ ಹರಿಯಾಣ, ಪಂಜಾಬ್ ರಾಜ್ಯದ ರೈತರನ್ನು ದಾರಿ ತಪ್ಪಿಸಲು ಸಾಧ್ಯವೇ. ಯಾವುದು ಸರಿ, ಯಾವುದು ತಪ್ಪು ಎಂದು ರಾಜಕೀಯ ನಾಯಕರಿಗೆ, ಅಧಿಕಾರಿಗಳಿಗೆ ಹೇಳುವ ಶಕ್ತಿ ಅವರಿಗಿದೆ. ರೈತ ಸಂಘದ ಅಧ್ಯಕ್ಷರಾಗಿದ್ದ ಪ್ರೊ.ನಂಜುಂಡಸ್ವಾಮಿ ಅವರನ್ನು ದಾರಿ ತಪ್ಪಿಸಲು ಸಾಧ್ಯವಿತ್ತೆ? ಕೇಂದ್ರ, ರಾಜ್ಯದಲ್ಲಿಯೂ ರೈತ ಸಂಘದವರು ಇದ್ದಾರೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳಿಂದ ರೈತರಿಗೆ ಏನು ಅನುಕೂಲವಾಗಲಿದೆ, ಅವರ ಮನಸ್ಸಿನಲ್ಲಿರುವ ಆತಂಕಗಳು ಏನು ಎಂಬುದರ ಕುರಿತು ಅವರೊಂದಿಗೆ ಚರ್ಚಿಸಿ, ಅವರಿಗೆ ಮನವರಿಕೆ ಮಾಡಿಕೊಡಲಿ. ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ನಾಲ್ಕು ಸಭೆಗಳು ಆಗಿವೆ. ಆದರೂ, ರೈತರು ತಮ್ಮ ನಿಲುವಿನಿಂದ ಹಿಂದಕ್ಕೆ ಸರಿದಿಲ್ಲ. ಅವರ ಜೊತೆ ಯಾವುದಾದರೂ ರಾಜಕೀಯ ಪಕ್ಷ ಇತ್ತೆ ಅಲ್ಲಿ. ರೈತರನ್ನು ದಾರಿ ತಪ್ಪಿಸುತ್ತೇವೆ ಅಂದುಕೊಂಡರೆ ಅದು ಭ್ರಮೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರೈತರ ವಿಷಯವನ್ನು ಮುಂದಿಟ್ಟುಕೊಂಡು ನಾವು ಸದನದಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದರೆ, ಹೊರಗಡೆ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಸರಕಾರದ ಪ್ರತಿನಿಧಿಗಳು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಿ ಎಂದು ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ರೈತರ ಬಳಿ ಹೋಗಿ ಮಾತನಾಡುವ ಯೋಗ್ಯತೆ ಈ ಸರಕಾರಕ್ಕೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ನಾವು ಎಪಿಎಂಸಿಗಳನ್ನು ಮುಚ್ಚಿಲ್ಲ. ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಆಯ್ಕೆ ನೀಡಿದ್ದೇವೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಿ, ರೈತರ ಪ್ರತಿಭಟನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‍ನವರು ತಮ್ಮ ರಾಜಕೀಯ ರೊಟ್ಟಿ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ಪುನಃ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವದ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X