Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತ್ಯೇಕ ಲಿಂಗಾಯತ ಧರ್ಮ ಹೊರಾಟಕ್ಕೆ...

ಪ್ರತ್ಯೇಕ ಲಿಂಗಾಯತ ಧರ್ಮ ಹೊರಾಟಕ್ಕೆ ಮತ್ತೆ ಚಾಲನೆ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

''ವೀರಶೈವ-ಲಿಂಗಾಯತ ನಿಗಮದಿಂದ ಲಾಭವಿಲ್ಲ''

ವಾರ್ತಾಭಾರತಿವಾರ್ತಾಭಾರತಿ8 Dec 2020 9:56 PM IST
share
ಪ್ರತ್ಯೇಕ ಲಿಂಗಾಯತ ಧರ್ಮ ಹೊರಾಟಕ್ಕೆ ಮತ್ತೆ ಚಾಲನೆ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

ಬೆಳಗಾವಿ, ಡಿ.8: ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಸಮಾಜಕ್ಕೆ ಯಾವುದೇ ರೀತಿಯ ಲಾಭ ಆಗುವುದಿಲ್ಲ ಆದುದರಿಂದ, ಸ್ವತಂತ್ರ ಲಿಂಗಾಯತ ಧರ್ಮ ಹೋರಾಟ ತಾತ್ಕಾಲಿಕವಾಗಿ ವೇಗ ಕಡಿಮೆಯಾಗಿದೆ ಅದಕ್ಕೆ ಮತ್ತೆ ಚಾಲನೆ ನೀಡಲಾಗುವುದು ಎಂದು ಶಿವಮೊಗ್ಗ ಆನಂದಪುರಂ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿರುವ ನಾಗನೂರು ರುದ್ರಾಕ್ಷಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದಾಗಿ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆಯಾಗಿದ್ದು ನಿಜ. ಈ ಬೆಳವಣಿಗೆ ಸರಿಯಲ್ಲ. ಸಮಾಜದ ಎಲ್ಲರೂ ಒಗ್ಗಟ್ಟಾಗಿ ಹೋಗುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ತಾವು ಪ್ರಯತ್ನ ಮಾಡುವುದಾಗಿ ಹೇಳಿದರು.

ತಾವು ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ನಾಡಿನ ಎಲ್ಲ ಗುರು ಮಠಗಳು ಮತ್ತು ವಿರಕ್ತ ಮಠಗಳ ಮಠಾಧೀಶರೊಂದಿಗೆ ಚರ್ಚೆ ನಡೆಸಲಾಗುವುದು. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆ ಆಯಿತು ಎಂದು ಪಂಚಮಸಾಲಿ ಪೀಠದ ಸ್ವಾಮೀಜಿ ಭಾವಿಸಿಕೊಂಡಿರಬಹುದು. ಹೀಗಾಗಿ ಅವರು ಬೇರೆಯೇ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ಅದರಿಂದ ಪ್ರಯೋಜನಕ್ಕಿಂತ ಹಾನಿಯೇ ಹೆಚ್ಚು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಾವೆಲ್ಲ ಸಮಾಜದ ಎಲ್ಲ ವರ್ಗದವರು ಎಲ್ಲ ಗುರು-ವಿರಕ್ತರು ಸೇರಿ ಹೋರಾಟ ಮಾಡಿದರೆ ಮಾತ್ರ ಸಮಾಜದ ಉನ್ನತಿ ಸಾಧ್ಯ. ಸಮಾಜಕ್ಕೆ ಸಕಲ ಸವಲತ್ತುಗಳು ಸಿಗುವುದಕ್ಕೆ ಸಾಧ್ಯ, ಎಲ್ಲ ರೀತಿಯ ಮೀಸಲಾತಿ ಸೌಲಭ್ಯಗಳು ಸಿಗುವುದಕ್ಕೆ ಸಾಧ್ಯ. ಇದನ್ನು ಪಂಚಮಸಾಲಿ ಪೀಠದ ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಒಗ್ಗಟ್ಟಾಗಿ ಹೋದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮಲ್ಲಿಕಾರ್ಜುನ ಸ್ವಾಮಿ ಹೇಳೀದರು.

ಲಿಂಗಾಯತ ಧರ್ಮವು ತನ್ನದೇ ಆದ ಪ್ರತ್ಯೇಕ ತತ್ವಜ್ಞಾನ, ಪ್ರತ್ಯೇಕ ಆಚರಣೆ, ಪ್ರತ್ಯೇಕ ವಿಧಿವಿಧಾನ, ವಿಶಿಷ್ಟ ಪರಂಪರೆ, ವಿಶಿಷ್ಟ ಆಚರಣೆ ಅಳವಡಿಸಿಕೊಂಡಿದೆ. ಹೀಗಾಗಿ 80 ವರ್ಷದ ಹಿಂದೆ ಈ ಸಮಾಜದ ಅಂದಿನ ಹಿರಿಯರು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಬೇಕೆಂದು ಕೇಳಿದ್ದರು ಎಂದು ಅವರು ನುಡಿದರು.

ಕರ್ನಾಟಕದಲ್ಲಿ ನಮ್ಮ ಸಮಾಜದ ಜನಸಂಖ್ಯೆ ಸ್ವಲ್ಪ ಹೆಚ್ಚಾಗಿದ್ದರೂ ಸಹ ಭಾರತದಾದ್ಯಂತ ಇರುವ ಜನಸಂಖ್ಯೆಗೆ ಹೋಲಿಸಿದಾಗ ನಮ್ಮ ಸಮಾಜದ ಜನಸಂಖ್ಯೆ ಅತ್ಯಲ್ಪ. ಹೀಗಾಗಿ ನಮ್ಮ ಸಮಾಜಕ್ಕೆ ಅಲ್ಪಸಂಖ್ಯಾತರ ಸ್ಥಾನಮಾನ ಸಿಗಲೇಬೇಕು ಮತ್ತು ಅಲ್ಪಸಂಖ್ಯಾತ ಧರ್ಮದ ಸ್ಥಾನಮಾನದ ಅಡಿಯಲ್ಲಿಯೇ ನಮಗೆ ಎಲ್ಲ ಸವಲತ್ತುಗಳು ಸಿಗುವಂತಾಗಬೇಕು. ಆದುದರಿಂದ, ಸಮಾಜದ ಎಲ್ಲ ಪಂಗಡಗಳ, ಎಲ್ಲ ವರ್ಗಗಳ ಹಿರಿಯರು ಮತ್ತು ಮಠಾಧೀಶರುಗಳು ಒಗ್ಗಟ್ಟಾಗಿ ಈ ಹೋರಾಟಕ್ಕೆ ಬೆಂಬಲಿಸಬೇಕಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X