Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲುಮರದ ತಿಮ್ಮಕ್ಕರ ಉಪಸ್ಥಿತಿಯಲ್ಲಿ...

ಸಾಲುಮರದ ತಿಮ್ಮಕ್ಕರ ಉಪಸ್ಥಿತಿಯಲ್ಲಿ ಅವರು ನೆಟ್ಟಿದ್ದ ಮರಗಳ ಎಣಿಕೆ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ8 Dec 2020 10:37 PM IST
share
ಸಾಲುಮರದ ತಿಮ್ಮಕ್ಕರ ಉಪಸ್ಥಿತಿಯಲ್ಲಿ ಅವರು ನೆಟ್ಟಿದ್ದ ಮರಗಳ ಎಣಿಕೆ ಕಾರ್ಯ

ಬೆಂಗಳೂರು, ಡಿ.8: ಸಾಲುಮರದ ತಿಮ್ಮಕ್ಕರ ಉಪಸ್ಥಿತಿಯಲ್ಲಿ ಅವರು ನೆಟ್ಟಿದ್ದ ಮರಗಳ ಎಣಿಕೆ ಕಾರ್ಯ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಾವು ನೆಟ್ಟು ಬೆಳೆಸಿದ ಮರಗಳನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆ ಅಗಲೀಕರಣದ ನೆಪದಲ್ಲಿ ಉರುಳಿಸಿದ್ದಾರೆ ಎಂದು ಸಾಲು ಮರದ ತಿಮ್ಮಕ್ಕ ಆರೋಪಿಸಿದ್ದರು. ತಿಮ್ಮಕ್ಕ ನೆಟ್ಟು, ಬೆಳೆಸಿದ್ದ ಸಾಲು ಮರಗಳ ಬುಡವನ್ನು ರಸ್ತೆ ನಿರ್ಮಾಣಕ್ಕಾಗಿ ಅಗೆಯಲಾಗಿದೆ ಎಂದು ಮಾಧ್ಯಮಗಳಲ್ಲಿಯೂ ವರದಿಯಾಗಿತ್ತು.

ಕುದೂರು ಮತ್ತು ಹುಲಿಕಲ್ ರಸ್ತೆಯ ಎರಡೂ ಬದಿಗಳಲ್ಲಿ ತಿಮ್ಮಕ್ಕ ನೆಟ್ಟು ಬೆಳೆಸಿದ ಮರಗಳು ಬೆಳೆದಿವೆ. ಇಲ್ಲಿ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಸಿದವರು ಮರಗಳ ಬುಡವನ್ನು ಅಗೆದು ಮಣ್ಣು ತೆಗೆದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

ರಸ್ತೆ ಕಾಮಗಾರಿಯಲ್ಲಿ ಮರಗಳಿಗೆ ಅಪಾಯ ಉಂಟಾಗಬಹುದು ಎಂಬ ಆತಂಕದ ನಡುವೆ ಸರಕಾರ ಕೂಡ ಮರಗಳಿಗೆ ಹಾನಿಯಾಗದಂತೆ ನೋಡಿಕೊಳ್ಳುವಂತೆ ಆದೇಶ ನೀಡಿತ್ತು. ಆದರೆ, ಅನೇಕ ಮರಗಳ ಬುಡಗಳಿಂದ ಮಣ್ಣು ತೆಗೆಯಲಾಗಿದೆ. ಇದರ ವಿರುದ್ಧ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿಗೆ ದೂರು ನೀಡುವುದಾಗಿ ತಿಮ್ಮಕ್ಕ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್ ತಿಮ್ಮಕ್ಕ ಉಪಸ್ಥಿತಿಯಲ್ಲಿಯೇ, ಅವರು ನೆಟ್ಟು, ಬೆಳೆಸಿದ್ದ ಮರಗಳ ಎಣಿಕೆ ಕಾರ್ಯ ನಡೆಸಲು ತೀರ್ಮಾನಿಸಿದ್ದಾರೆ. ಅಂತೆಯೇ ಈಗಾಗಲೇ ಬುಡದಿಂದ ಮಣ್ಣು ತೆಗೆಯಲಾಗಿರುವ ಮರಗಳ ಬುಡಕ್ಕೆ ಮತ್ತೆ ಮಣ್ಣು ಹಾಕಿಸಲಾಗಿದೆ.

ತಿಮ್ಮಕ್ಕ ಅವರು 1950 ಮತ್ತು 1970 ರ ಅವಧಿಯಲ್ಲಿ ಹುಲಿಕಲ್-ಕುದೂರು ಹೆದ್ದಾರಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ದೂರದಲ್ಲಿ ಸುಮಾರು 385 ಮರಗಳನ್ನು ನೆಟ್ಟಿ ಬೆಳೆಸಿದ್ದರು. ಇದೇ ಮರಗಳನ್ನು ಪರಂಪರೆಯ ಮರಗಳೆಂದು ಘೋಷಿಸಲು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಜೀವವೈವಿಧ್ಯ ಮಂಡಳಿಗಳು ಮುಂದಾಗಿವೆ. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಈ ಮರಗಳನ್ನು ಕಡಿದಿದೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X