Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರಾಣ ರಕ್ಷಣೆಯ ಸಾಹಸ ಮತ್ತೊಂದು...

ಪ್ರಾಣ ರಕ್ಷಣೆಯ ಸಾಹಸ ಮತ್ತೊಂದು ಪ್ರಾಣಕ್ಕೆ ಕುತ್ತಾಗದಿರಲಿ

-ಶಫಾಹತ್, ಮಂಗಳೂರು-ಶಫಾಹತ್, ಮಂಗಳೂರು8 Dec 2020 11:18 PM IST
share
ಪ್ರಾಣ ರಕ್ಷಣೆಯ ಸಾಹಸ ಮತ್ತೊಂದು ಪ್ರಾಣಕ್ಕೆ ಕುತ್ತಾಗದಿರಲಿ

ಮಾನ್ಯರೇ,

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ‘ಝೀರೋ ಟ್ರಾಫಿಕ್’ನಲ್ಲಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿತ್ತು. ಕಡಿಮೆ ಸಮಯದಲ್ಲಿ ಪುತ್ತೂರಿನಿಂದ ಬೆಂಗಳೂರಿಗೆ ಆ್ಯಂಬುಲೆನ್ಸ್ ತಲುಪಿದ್ದು, ಆ್ಯಂಬುಲೆನ್ಸ್ ಚಾಲಕನ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು ಮತ್ತು ಝೀರೋ ಟ್ರಾಫಿಕ್‌ಗೆ ಸಹಕಾರ ನೀಡಿದ ರಾಜ್ಯದ ಜನತೆ, ಪೊಲೀಸರು ಕೂಡ ಶ್ಲಾಘನೆಗೆ ಪಾತ್ರರಾಗಿದ್ದರು. ಆದರೆ ಇದೇ ಸಂದರ್ಭ ಆ್ಯಂಬುಲೆನ್ಸ್‌ನ ಮುಂದೆ ಮತ್ತು ಹಿಂದೆ ಸಂಚರಿಸುತ್ತಿದ್ದ ಕೆಲ ವಾಹನಗಳು, ಅದರಲ್ಲಿದ್ದ ಯುವಕರ ದುಸ್ಸಾಹಸದ ವೀಡಿಯೊಗಳು ವೈರಲ್ ಆಗಿವೆ. ಝೀರೋ ಟ್ರಾಫಿಕ್‌ನ ಮಹತ್ವ, ಆ್ಯಂಬುಲೆನ್ಸ್‌ನ ಒಳಗಿದ್ದ ಯುವತಿಯ ಪರಿಸ್ಥಿತಿ, ಆಕೆಯ ಮನೆಯವರ ಸಂಕಟ, ಇಂತಹ ಸಂದರ್ಭಗಳಲ್ಲಿ ನಾಗರಿಕ ಸಮಾಜದ ಸದಸ್ಯರಾಗಿ, ಒಬ್ಬ ಮನುಷ್ಯನಾಗಿ ಮಾಡಬೇಕಾದ ಕರ್ತವ್ಯಗಳನ್ನು ಮರೆತು ಝೀರೋ ಟ್ರಾಫಿಕನ್ನು ಜಾಲಿ ರೈಡ್‌ನಂತೆ ಪರಿಗಣಿಸಿದ ಕೆಲ ಯುವಕರು ಅಮಾನವೀಯವಾಗಿ ವರ್ತಿಸಿದ್ದಾರೆ.

ಝೀರೋ ಟ್ರಾಫಿಕ್ ಆ್ಯಂಬುಲೆನ್ಸ್‌ನ ಮುಂದೆ ಮತ್ತು ಹಿಂದೆ ಇಂತಹ ಹಲವು ವಾಹನಗಳಿದ್ದವು ಮತ್ತು ಅದರಲ್ಲಿದ್ದ ಯುವಕರು ವಿಷಯದ ಗಂಭೀರತೆಯನ್ನು ಅರಿಯದೆ ಹುಚ್ಚುಹುಚ್ಚಾಗಿ ವರ್ತಿಸಿದರು. ಇದರಿಂದಾಗಿ ಕೊನೆಗೆ ಝೀರೋ ಟ್ರಾಫಿಕ್‌ನ ಬಗ್ಗೆಯೇ ಅಸಮಾಧಾನದ ಮಾತುಗಳು ಕೇಳಿ ಬಂದವು. ಝೀರೋ ಟ್ರಾಫಿಕ್‌ನಂತಹ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾದವು. ಸ್ವತಃ ಆ್ಯಂಬುಲೆನ್ಸ್ ಚಾಲಕ ಹನೀಫ್ ಸಾಮಾಜಿಕ ಹೊಣೆಗಾರಿಕೆ ಅರಿಯದ ಯುವಕರ ಕೃತ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಪ್ರಶ್ನೆ ಇರುವುದು ‘ಝೀರೋ ಟ್ರಾಫಿಕ್’ ಎನ್ನುವ ವ್ಯವಸ್ಥೆಯ ನಡುವೆ ಈ ಯುವಕರು ನುಸುಳಿದ್ದು ಹೇಗೆ?, ಝೀರೋ ಟ್ರಾಫಿಕ್‌ನಲ್ಲಿ ಸಾಗಬೇಕಾಗಿದ್ದ ವಾಹನಗಳ ಪಟ್ಟಿಯಲ್ಲಿ ಇವರ ವಾಹನಗಳು ಕೂಡ ಇತ್ತೇ? ಪೊಲೀಸ್ ಇಲಾಖೆಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ?. ಯುವತಿಯೊಬ್ಬಳ ಆರೋಗ್ಯಕ್ಕೆ ಸಂಬಂಧಿಸಿದ ಈ ಪ್ರಯಾಣದಲ್ಲಿ ಬೇಜವಾಬ್ದಾರಿಯುತ ಘಟನೆಗಳಿಗೆ ಕಾರಣವಾದದ್ದೇನು ಎನ್ನುವುದು. ಕೆಲ ಕಿಡಿಗೇಡಿಗಳ ಕೃತ್ಯದಿಂದಾಗಿ ‘ಝೀರೋ ಟ್ರಾಫಿಕ್’ನಲ್ಲಿ ರೋಗಿಗಳನ್ನು ಸಾಗಿಸುವ ಮಹತ್ವದ ಕಾರ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಮತ್ತು ಇನ್ನು ಮುಂದೆ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಡಿವಾಣ ಹಾಕಬೇಕು. ‘ಝೀರೋ ಟ್ರಾಫಿಕ್’ ಎನ್ನುವುದು ಸಂಭ್ರಮಾಚರಣೆಯಲ್ಲ, ಅದೊಂದು ಜವಾಬ್ದಾರಿ.
 

share
-ಶಫಾಹತ್, ಮಂಗಳೂರು
-ಶಫಾಹತ್, ಮಂಗಳೂರು
Next Story
X