Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನ್ಯೂಝಿಲ್ಯಾಂಡ್ ಮಸೀದಿ ದಾಳಿಕೋರ ದಾಳಿಗೂ...

ನ್ಯೂಝಿಲ್ಯಾಂಡ್ ಮಸೀದಿ ದಾಳಿಕೋರ ದಾಳಿಗೂ ಮೊದಲು ಭಾರತದಲ್ಲಿ ಮೂರು ತಿಂಗಳು ಉಳಿದುಕೊಂಡಿದ್ದ: ವರದಿ

ವಾರ್ತಾಭಾರತಿವಾರ್ತಾಭಾರತಿ9 Dec 2020 12:50 PM IST
share
ನ್ಯೂಝಿಲ್ಯಾಂಡ್ ಮಸೀದಿ ದಾಳಿಕೋರ ದಾಳಿಗೂ ಮೊದಲು ಭಾರತದಲ್ಲಿ ಮೂರು ತಿಂಗಳು ಉಳಿದುಕೊಂಡಿದ್ದ: ವರದಿ

ಕ್ರೈಸ್ಟ್ ಚರ್ಚ್  : ಕಳೆದ ವರ್ಷ ನ್ಯೂಝಿಲ್ಯಾಂಡ್‍ನ  ಕ್ರೈಸ್ಟ್ ಚರ್ಚ್ನ ಎರಡು ಮಸೀದಿಗಳಲ್ಲಿ ನಡೆದ ಗುಂಡಿನ ದಾಳಿಗಳಲ್ಲಿ 51 ಮಂದಿ ಮುಸ್ಲಿಮರ ಹತ್ಯೆಗೆ ಕಾರಣನಾಗಿದ್ದ ಆಸ್ಟ್ರೇಲಿಯಾ ಸಂಜಾತ ಬ್ರೆಂಟನ್ ಟರ್ರೆಂಟ್  ಈ ದಾಳಿ ನಡೆಸುವ ಮುನ್ನ ಜಗತ್ತಿನ ವಿವಿಧ ದೇಶಗಳಿಗೆ ಪಯಣಿಸಿದ್ದನಲ್ಲದೆ ಭಾರತದಲ್ಲೂ ಮೂರು ತಿಂಗಳು ಉಳಿದುಕೊಂಡಿದ್ದ ಎಂದು  ಮಂಗಳವಾರ ಈ ಘಟನೆಯ  ವಿಸ್ತ್ರತ ವರದಿಯಲ್ಲಿ ತಿಳಿಸಲಾಗಿದೆ. ಮಾರ್ಚ್ 2019ರಲ್ಲಿ ನಡೆದ ಈ ಉಗ್ರ ದಾಳಿಯಲ್ಲಿ ಹತರಾದವರಲ್ಲಿ ಐವರು ಭಾರತೀಯರೂ ಸೇರಿದ್ದರು.

ರಾಯಲ್ ಕಮಿಷನ್ ಆಫ್ ಇಂಕ್ವೈರಿಯ 792 ಪುಟಗಳ ವರದಿಯಲ್ಲಿ ತಿಳಿಸಲಾದಂತೆ 30 ವರ್ಷದ ದಾಳಿಕೋರ ಶಾಲೆಯನ್ನು ತೊರೆದ ನಂತರ ಸ್ಥಳೀಯ ಜಿಮ್ ಒಂದರಲ್ಲಿ ಪರ್ಸನಲ್ ಟ್ರೈನರ್ ಆಗಿ 2012ರ ತನಕ  ಕೆಲಸ ಮಾಡಿದ್ದ. ನಂತರ  ಯಾವುದೇ ಕೆಲಸ  ಮಾಡದ ಈತ ತಂದೆಯಿಂದ ದೊರೆತ ಹಣ ಹಾಗೂ ಹೂಡಿಕೆಗಳಿಂದ ದೊರೆತ ಆದಾಯ ಬಳಸಿ  ವಿವಿಧ ದೇಶಗಳಿಗೆ  ಭೇಟಿ ನೀಡಿದ್ದ. ಮೊದಲು 2013ರಲ್ಲಿ ನ್ಯೂಝಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ಸುತ್ತಾಡಿದ್ದ ಈತ ಎಪ್ರಿಲ್ 2014 ಹಾಗೂ ಆಗಸ್ಟ್ 17, 2017ರ ನಡುವೆ  ಜಗತ್ತಿನ ವಿವಿಧ ದೇಶಗಳಿಗೆ ಸುತ್ತಾಡಿದ್ದ. ಉತ್ತರ ಕೊರಿಯಾಗೆ ಗ್ರೂಪ್ ಟೂರ್ ಹೋಗಿದ್ದ ಹೊರತಾಗಿ ಇತರ  ದೇಶಗಳಿಗೆ ಏಕಾಂಗಿಯಾಗಿಯೇ ಭೇಟಿ ನೀಡಿದ್ದ’’ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆತ ವಿದೇಶಗಳಲ್ಲಿ ಗರಿಷ್ಠ ಸಮಯ ಕಳೆದಿದ್ದು ಭಾರತದಲ್ಲಿ ಹಾಗೂ ಇಲ್ಲಿ ನವೆಂಬರ್ 21, 2015ರಿಂದ ಫೆಬ್ರವರಿ 18, 2016ರ ತನಕ ಉಳಿದುಕೊಂಡಿದ್ದ ಎಂದು ವರದಿಯಲ್ಲಿ ಹೇಳಲಾಗಿದ್ದರೂ ಭಾರತದಲ್ಲಿ ಮೂರು ತಿಂಗಳು ಇದ್ದ ವೇಳೆ ಆತ ಏನು ಮಾಡಿದ್ದ ಎಂಬ ಕುರಿತು ವರದಿಯಲ್ಲಿ ಉಲ್ಲೇಖವಿಲ್ಲ.

ಆತ ಭಾರತ ಹೊರತಾಗಿ ಚೀನಾ, ರಷ್ಯಾ, ದಕ್ಷಿಣ ಕೊರಿಯಾ, ಜಪಾನ್ ದೇಶಗಳಿಗೆ  ಭೇಟಿ ನೀಡಿದ್ದ ಎಂದು 18 ತಿಂಗಳ ಅವಧಿಯಲ್ಲಿ ಸಿದ್ಧಪಡಿಸಲಾದ ವರದಿಯಲ್ಲಿ ತಿಳಿಸಲಾಗಿದೆ.

ಆದರೆ ವಿದೇಶ ಭೇಟಿ ವೇಳೆ ಆತ ಯಾವುದೇ ಉಗ್ರ ಸಂಘಟನೆ ಜತೆ ಸಂಪರ್ಕ ಸಾಧಿಸಿರುವ ಕುರಿತು ಯಾವುದೇ ಮಾಹಿತಿಯಿಲ್ಲ ಎಂದು ನ್ಯೂಝಿಲ್ಯಾಂಡ್‍ನ ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X