Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದಲ್ಲಿ ಸರಕಾರಿ...

ಜಮ್ಮು ಕಾಶ್ಮೀರದಲ್ಲಿ ಸರಕಾರಿ ಬಂಗಲೆಗಳಲ್ಲಿ ‘ಅಕ್ರಮವಾಗಿ’ ವಾಸಿಸುತ್ತಿರುವವರಲ್ಲಿ ಉನ್ನತ ಬಿಜೆಪಿ ನಾಯಕರು: ವರದಿ

ವಾರ್ತಾಭಾರತಿವಾರ್ತಾಭಾರತಿ9 Dec 2020 5:18 PM IST
share
ಜಮ್ಮು ಕಾಶ್ಮೀರದಲ್ಲಿ  ಸರಕಾರಿ ಬಂಗಲೆಗಳಲ್ಲಿ ‘ಅಕ್ರಮವಾಗಿ’ ವಾಸಿಸುತ್ತಿರುವವರಲ್ಲಿ ಉನ್ನತ ಬಿಜೆಪಿ ನಾಯಕರು: ವರದಿ

ಶ್ರೀನಗರ್:  ಜಮ್ಮು ಕಾಶ್ಮೀರದಲ್ಲಿ ಸರಕಾರಿ ಬಂಗಲೆಗಳು ಹಾಗೂ ನಿವಾಸಗಳಲ್ಲಿ ‘ಅನಧಿಕೃತವಾಗಿ’ ವಾಸಿಸುತ್ತಿರುವ  ರಾಜಕಾರಣಿಗಳ ಪೈಕಿ ಬಿಜೆಪಿಯ ಹತ್ತಕ್ಕೂ ಹೆಚ್ಚು ಮಾಜಿ ಸಚಿವರುಗಳು ಹಾಗೂ ಮಾಜಿ ಶಾಸಕರಿದ್ದಾರೆಂಬ ಮಾಹಿತಿ  ಜಮ್ಮು ಮತ್ತು ಕಾಶ್ಮೀರದ ಎಸ್ಟೇಟ್ಸ್ ಇಲಾಖೆ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅಫಿಡವಿಟ್ ಮುಖಾಂತರ ತಿಳಿದು ಬಂದಿದೆ ಎಂದು thewire.in ವರದಿ ಮಾಡಿದೆ.

ರೋಶಿನಿ ಭೂ ಕಾನೂನಿನನ್ವಯ ಲಾಭ ಪಡೆದ ಕಾಶ್ಮೀರದ ಪ್ರಾದೇಶಿಕ ಪಕ್ಷಗಳ ನಾಯಕರುಗಳನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ಮಹತ್ವ ಪಡೆದಿದೆ ಎಂದು ‘thewire.in’ ಹೇಳಿದೆ.

ಅಕ್ಟೋಬರ್ 2ರಂದು ಎಸ್ಟೇಟ್ಸ್ ಇಲಾಖೆಯ ಪರವಾಗಿ ಉಪ ನಿರ್ದೇಶಕ ಮುಹಮ್ಮದ್ ಅಲ್ಯಾಸ್ ಖಾನ್  ಸಲ್ಲಿಸಿದ ಅಫಿಡವಿಟ್ ಪ್ರಕಾರ ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ, ಮಾಜಿ ಡೆಪ್ಯುಟಿ ಸಿಎಂ ಹಾಗೂ  ಮಾಜಿ ಸ್ಪೀಕರ್ ಕವೀಂದರ್ ಗುಪ್ತಾ, ಹಿಂದಿನ ಜಮ್ಮು ಮತ್ತು ಕಾಶ್ಮೀರ ಸರಕಾರದಲ್ಲಿ ಸಚಿವರಾಗಿದ್ದ ಬಿಜೆಪಿ ನಾಯಕರಾದ ಸುನೀಲ್ ಶರ್ಮ,  ಶಕ್ತಿ ರಾಜ್ ಪರಿಹಾರ್, ಸತ್ ಶರ್ಮ, ಸುಖನಂದನ್ ಚೌಧರಿ ಹಾಗೂ  ಬಲಿ ಬಘತ್ ಅವರು ಕೂಡ ಅನಧಿಕೃತವಾಗಿ ಸರಕಾರಿ ಬಂಗಲೆಗಳಲ್ಲಿ ನೆಲೆಸಿದ್ದಾರೆಂದು ಅಫಿಡವಿಟ್ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಮೇಲಿನ  ನಾಯಕರ ಹೊರತಾಗಿ ಬಿಜೆಪಿಯ ಮಾಜಿ ಶಾಸಕರುಗಳಾದ ನೀಲಮ್ ಲಂಗೇಹ್, ದಲೀಪ್ ಸಿಂಗ್ ಪರಿಹಾರ್, ಆರ್ ಎಸ್ ಪಥಾನಿಯಾ, ರಾಜೇಶ್ ಗುಪ್ತಾ, ಮಾಜಿ ವಿಧಾನ ಪರಿಷತ್ ಸದಸ್ಯರಾದ  ವಿಬೋಧ್ ಗುಪ್ತಾ, ಪ್ರದೀಪ್ ಶರ್ಮ, ಅಶೋಕ್ ಖಜೂರಿಯಾ ಹಾಗೂ ವಿಕ್ರಮ್ ರಂಧ್ವಾ ಕೂಡ ಸರಕಾರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ‘ದಿ ವೈರ್’ ವರದಿ ಅಫಿಡವಿಟ್ ಉಲ್ಲೇಖಿಸಿ ಹೇಳಿದೆ.

ಆದರೆ  ಎಸ್ಟೇಟ್ಸ್ ಉಪ ನಿರ್ದೇಶಕ ಅಲ್ಯಾಸ್ ಮುಹಮ್ಮದ್ ಖಾನ್, ಅಶೋಕ್ ಖಜೂರಿಯಾ ಮತ್ತು ಶಕ್ತಿ ಪರಿಹಾರ್ ತಮ್ಮ ಸರಕಾರಿ ನಿವಾಸಿಗಳನ್ನು ತೆರವುಗೊಳಿಸಿದ್ದಾರೆ.

“ಯಾರೂ ಸರಕಾರಿ ನಿವಾಸಗಳಲ್ಲಿ ಅಕ್ರಮವಾಗಿ ವಾಸಿಸುತ್ತಿಲ್ಲ, ಎಲ್ಲರೂ ಬಾಡಿಗೆ  ನೀಡುತ್ತಿದ್ದಾರೆ. ನಾವು ಭದ್ರತಾ ಕಾರಣಗಳಿಗಾಗಿ ಸರಕಾರಿ ನಿವಾಸದಲ್ಲಿದ್ದೇವೆ. ಮುಂದಿನ ವಿಧಾನಸಭೆ ರಚನೆಯಾಗುವ ತನಕ ಸರಕಾರಿ ನಿವಾಸಗಳಲ್ಲಿರುವುದಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ನನಗೆ ಅನಿಸುತ್ತದೆ, ಸರಕಾರದಿಂದ ನಿವಾಸ ತೆರವುಗೊಳಿಸುವಂತೆ ನೋಟಿಸ್ ಕೂಡ ಬಂದಿಲ್ಲ,'' ಎಂದು ಬಿಜೆಪಿಯ ಕವೀಂದರ್ ಗುಪ್ತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X