Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಲೆಟ್ಸ್ ಟೇಕ್ ಚಾರ್ಜ್' ಅಭಿಯಾನದ...

'ಲೆಟ್ಸ್ ಟೇಕ್ ಚಾರ್ಜ್' ಅಭಿಯಾನದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ9 Dec 2020 7:28 PM IST
share
ಲೆಟ್ಸ್ ಟೇಕ್ ಚಾರ್ಜ್ ಅಭಿಯಾನದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್, ಸಂಸದರಾದ ಕಾರ್ತಿ ಚಿದಂಬರಂ ಮತ್ತು ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು 'ಲೆಟ್ಸ್ ಟೇಕ್ ಚಾರ್ಜ್' ಅಭಿಯಾನದ ಸ್ಪರ್ಧಾ ವಿಜೇತರಿಗೆ ಬುಧವಾರ ಬಹುಮಾನ ವಿತರಣೆ ಮಾಡಿದರು. 

ಕರ್ನಾಟಕದಲ್ಲಿ ತಲೆದೋರುವ ಪ್ರವಾಹ ಪರಿಸ್ಥಿತಿಗೆ ಪರಿಹಾರೋಪಾಯವನ್ನು ನೀಡುವಂತೆ ಕರೆ ನೀಡಿ ನ.1ರಂದು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಲೆಟ್ಸ್ ಟೇಕ್ ಚಾರ್ಜ್ ಅಭಿಯಾನವನ್ನು ಆರಂಭಿಸಿದ್ದರು. 18ರಿಂದ 35 ವರ್ಷದೊಳಗಿನ ಯುವಸಮೂಹಕ್ಕಾಗಿ ನಡೆಸಲಾದ ಅಭಿಯಾನಕ್ಕೆ, ಕೇವಲ 9 ದಿನಗಳಲ್ಲಿ ಕರ್ನಾಟಕದಾದ್ಯಂತದಿಂದ 30 ಸಾವಿರಕ್ಕೂ ಹೆಚ್ಚು ಪರಿಹಾರೋಪಾಯಗಳು ಬಂದಿದ್ದವು. ಯುವಜನರು ತಮ್ಮ ಪರಿಹಾರೋಪಾಯಗಳನ್ನು ಗೂಗಲ್ ಫಾರ್ಮ್, ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್‌ಗಳ‌ ಮೂಲಕ ಹಂಚಿಕೊಂಡಿದ್ದರು.

ಬೆಂಗಳೂರು ಜಿಲ್ಲೆಯ ಚಂಬೇನಹಳ್ಳಿ ಗ್ರಾಮದ 23 ವರ್ಷದ ಸಂಧ್ಯಾ ಅವರು ಪ್ರಥಮ‌ ಸ್ಥಾನ ಪಡೆಯುವ ಮೂಲಕ ಐಫೋನ್ 12 ತಮ್ಮದಾಗಿಸಿಕೊಂಡರೆ, ಉತ್ತರ ಕನ್ನಡ ಜಿಲ್ಲೆಯ 24 ವರ್ಷದ ಕಾರ್ತಿಕ್ ಆರ್ ನಾಯ್ಕ್ ಅವರು ರನ್ನರ್ ಅಪ್ ಆಗಿ ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಎ 51 ಪಡೆದಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನ 22 ವರ್ಷದ ದುರ್ಗಾರಾಮ್ ಹಾಗೂ ಹಾವೇರಿಯ 19 ವರ್ಷದ ದಾನೇಶ್ವರಿ ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಎ21 ಮತ್ತು ಸ್ಯಾಮ್‌ಸಂಗ್ ಟ್ಯಾಬ್ ಎ ತಮ್ಮದಾಗಿಸಿಕೊಂಡಿದ್ದಾರೆ.

"ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳಿಗೆ ಯುವಜನತೆಯಿಂದ ಪರಿಹಾರೋಪಾಯಗಳನ್ನು ಪಡೆಯುವ ಮೂಲಕ ಯುವಕರಿಗೆ ಉತ್ತೇಜನ ನೀಡುವ ಪ್ರಾಥಮಿಕ‌ ಉದ್ದೇಶವನ್ನು 'ಲೆಟ್ಸ್ ಟೇಕ್ ಚಾರ್ಜ್' ಅಭಿಯಾನ ಯಶಸ್ವಿಯಾಗಿ ಪೂರೈಸಿದೆ. ಸ್ಪರ್ಧೆಗೆ ಯಾವುದೇ ನೋಂದಣಿ‌ ಶುಲ್ಕ ಇಲ್ಲದಿರುವುದು ಹಾಗೂ ಅತ್ಯಂತ ಸರಳವಾದ ನೋಂದಣಿ ವಿಧಾನಗಳು ಯುವಜನತೆಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಸಹಾಯಕವಾಯಿತು" ಎಂದು ನಲಪಾಡ್ ಅವರು ತಿಳಿಸಿದರು.

ಗೌರವ ಅತಿಥಿಯಾಗಿ ಭಾಗವಹಿಸಿದ ಶಾಸಕ ಶ್ರೀ ಕೃಷ್ಣ ಬೈರೆಗೌಡರವರು, ಅಭಿಯಾನದಲ್ಲಿ ಬಾಲಕಿಯರ/ ಹೆಣ್ಣುಮಕ್ಕಳ ಹೆಚ್ಚಿನ ಭಾಗವಹಿಸುವಿಕೆಯ ಬಗ್ಗೆ ಹೇಳಿ ಹೊಗಳಿದರು.

ತಮಿಳುನಾಡಿನ ಶಿವಗಂಗ ಸಂಸದ ಕಾರ್ತಿ ಪಿ ಚಿದಂಬರಂ, ಯುವಕರು ಸಮಸ್ಯೆಗಳನ್ನು ಪರಿಹರಿಸುವ ಪ್ರಕ್ರಿಯೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಮತ್ತು ನೀತಿ ನಿರೂಪಣೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

"ಕರ್ನಾಟಕವನ್ನು ಉತ್ತಮವಾಗಿಸಲು ತಮ್ಮ ಕ್ರಿಯಾಶೀಲ ಪರಿಹಾರೋಪಾಯಗಳನ್ನು ಹಂಚಿಕೊಳ್ಳುವ ಮೂಲಕ ಭಾಗವಹಿಸಿದ ಕರ್ನಾಟಕದ ಯುವಜನತೆಯ ಬಗ್ಗೆ ಹೆಮ್ಮೆಯೆನಿಸುತ್ತದೆ" ಎಂದು ನಲಪಾಡ್ ಹೇಳಿದರು. ರಾಜ್ಯದ ಭವಿಷ್ಯವನ್ನು ರೂಪಿಸಲು ಯುವಕರ ಪಾತ್ರ ಮಹತ್ವದ್ದು ಎಂದ ಅವರು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿಯಾನಗಳನ್ನು ನಡೆಸುವ ಮೂಲಕ ರಾಜ್ಯದ ಸಮಸ್ಯೆಗಳ ಕುರಿತು ಗಮನ ಸೆಳೆದು, ಪರಿಹಾರಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ರಾಜ್ಯದೆಲ್ಲೆಡೆಯಿಂದ ಯುವಕರು ಭಾಗವಹಿಸಿದ್ದು ಈ ಅಭಿಯಾನದ ಹೆಗ್ಗಳಿಕೆ. ನಗರ ಪ್ರದೇಶವಷ್ಟೇ ಅಲ್ಲದೆ ಗ್ರಾಮೀಣ ಭಾಗದಿಂದಲೂ ಯುವಜನರು ಅತ್ಯಂತ ಉತ್ಸಾಹದಿಂದ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಲೆಟ್ಸ್ ಟೇಕ್ ಚಾರ್ಜ್ ಅಭಿಯಾನಕ್ಕೆ ಬೆಂಗಳೂರು ಜಿಲ್ಲೆಯಿಂದ 14,000, ಮೈಸೂರಿನಿಂದ 2,200, ಮಂಡ್ಯದಿಂದ 1,098, ಹಾಸನದಿಂದ 1,022, ಚಿಕ್ಕಮಗಳೂರಿನಿಂದ 1,002, ತುಮಕೂರಿನಿಂದ 888, ದಕ್ಷಿಣ ಕನ್ನಡದಿಂದ 1,400, ಉತ್ತರ ಕನ್ನಡದಿಂದ 1250 ಹಾಗೂ ಹಾವೇರಿಯಿಂದ 1222 ಪರಿಹಾರೋಪಾಯಗಳು ದಾಖಲಾಗಿವೆ.

ಉತ್ತರ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್, ರಾಯಚೂರು, ಬಳ್ಳಾರಿಯಿಂದ ತಲಾ 1000ಕ್ಕೂ ಹೆಚ್ಚು ಸಲಹೆಗಳು ದಾಖಲಾಗಿವೆ. ಸ್ಪರ್ಧೆಯ ಇನ್ನೊಂದು ವಿಶೇಷತೆಯೆಂದರೆ ಭಾಗವಹಿಸಿದ ಸ್ಪರ್ಧಾಳುಗಳಲ್ಲಿ ಯುವತಿಯರ ಸಂಖ್ಯೆ ಹೆಚ್ಚಿದ್ದು 2:1 ಅನುಪಾತದಲ್ಲಿ ಯುವಕರನ್ನು ಹಿಂದಿಕ್ಕಿದ್ದಾರೆ.  'ಲೆಟ್ಸ್ ಟೇಕ್ ಚಾರ್ಜ್' ಅಭಿಯಾನ ಸರಿಸುಮಾರು 30.1 ಲಕ್ಷ ಜನರನ್ನು ಸಾಮಾಜಿಕ‌ ಜಾಲತಾಣಗಳ ಮೂಲಕ ತಲುಪಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X