Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಚಗುಳಿತನದಲ್ಲಿ ಭಾರತ ಏಶ್ಯಾದಲ್ಲೇ...

ಲಂಚಗುಳಿತನದಲ್ಲಿ ಭಾರತ ಏಶ್ಯಾದಲ್ಲೇ ನಂ.1: ಟ್ರಾನ್ಸ್‌ಫರೆನ್ಸಿ ಇಂಟರ್‌ನ್ಯಾಷನಲ್

ವಾರ್ತಾಭಾರತಿವಾರ್ತಾಭಾರತಿ9 Dec 2020 10:38 PM IST
share
ಲಂಚಗುಳಿತನದಲ್ಲಿ ಭಾರತ ಏಶ್ಯಾದಲ್ಲೇ ನಂ.1: ಟ್ರಾನ್ಸ್‌ಫರೆನ್ಸಿ ಇಂಟರ್‌ನ್ಯಾಷನಲ್

ಹೊಸದಿಲ್ಲಿ, ಡಿ. 9: ಲಂಚಗುಳಿತನದಲ್ಲಿ ಭಾರತ ಏಶ್ಯಾದಲ್ಲಿ ಅತ್ಯಧಿಕ ದರ ಹೊಂದಿದೆ ಎಂದು ಟ್ರಾನ್ಸ್‌ಫರೆನ್ಸಿ ಇಂಟರ್‌ನ್ಯಾಷನಲ್ ಪ್ರಕಟಿಸಿದ ವರದಿ ‘ಜಾಗತಿಕ ಭ್ರಷ್ಟಾಚಾರದ ಮಾನದಂಡ’ ಹೇಳಿದೆ. ಭ್ರಷ್ಟಾಚಾರ ವಿರೋಧಿ ದಿನವಾದ ಡಿಸೆಂಬರ್ 9ರಂದು ಟ್ರಾನ್ಸ್‌ಫರೆನ್ಸಿ ಇಂಡಿಯಾ ಈ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ಲಂಚ ನೀಡುತ್ತಿರುವವರಲ್ಲಿ ಸುಮಾರು ಶೇ. 50 ಮಂದಿಯಲ್ಲಿ ನೀವು ಯಾಕೆ ಲಂಚ ನೀಡುತ್ತೀರಿ ಎಂದು ಪ್ರಶ್ನಿಸಲಾಗಿತ್ತು. ಅದಕ್ಕೆ ಶೇ. 32 ಮಂದಿ ನಾವು ವೈಯಕ್ತಿಕ ಸಂಪರ್ಕದ ಮೂಲಕ ಲಂಚ ನೀಡಿದ್ದೇವೆ. ಲಂಚ ನೀಡದೆ ಆರೋಗ್ಯ ಸೇವೆ ಹಾಗೂ ಶಿಕ್ಷಣದಂತಹ ಸೇವೆಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಈ ವರದಿ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆ ನೀಡುವ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಅತಿ ದೊಡ್ಡ ಹೊಡೆತವಾಗಿದೆ. ಹೆಚ್ಚಿನ ದೇಶಗಳಲ್ಲಿ ಭ್ರಷ್ಟಾಚಾರ ಉನ್ನತ ಮಟ್ಟದಲ್ಲಿ ಮಾತ್ರ ಇರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ, ಅದಕ್ಕಿಂತ ಭಿನ್ನವಾಗಿ ಭಾರತದಲ್ಲಿ ಈ ಪಿಡುಗು ಕೆಳ ಮಟ್ಟದ ಆಡಳಿತದಲ್ಲೂ ಕಂಡು ಬರುತ್ತಿದೆ. ದೊಡ್ಡ ಮಟ್ಟದ ಭ್ರಷ್ಟಾಚಾರ ಎಲ್ಲರ ಗಮನ ಸೆಳೆದರೂ ಪ್ರತಿದಿನದ ಸಣ್ಣಪುಟ್ಟ ಭ್ರಷ್ಟಾಚಾರ ಸಾಮಾನ್ಯ ಜನರನ್ನು ಪೀಡಿಸುತ್ತಿರುತ್ತದೆ. ವಿಕೇಂದ್ರೀಕೃತ ಭ್ರಷ್ಟಾಚಾರವನ್ನು ಯಾವುದೇ ಕೇಂದ್ರೀಕೃತ ವ್ಯವಸ್ಥೆಯಿಂದ ನಿಗ್ರಹಿಸಲು ಸಾಧ್ಯವಿಲ್ಲ. ಸ್ಥಳೀಯವಾಗಿ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಹಾಗೂ ವರದಿ ಮಾಡಲು ಸಾಮಾನ್ಯ ಜನರನ್ನು ಸಬಲೀಕರಿಸುವುದು ಹಾಗೂ ಭ್ರಷ್ಟಾಚಾರಿ ಅಧಿಕಾರಿಗಳು ಉತ್ತರದಾಯಿಯಾಗಲು ದೂರಿನ ಮೇಲೆ ತತ್‌ಕ್ಷಣವೇ ಕಾರ್ಯನಿರ್ವಹಿಸುವ ವ್ಯವಸ್ಥೆ ಈಗ ನಮಗೆ ಅಗತ್ಯ ಇದೆ. ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಸಾಮಾನ್ಯ ಜನರಿಗೆ ಕಳೆದ 15 ವರ್ಷಗಳಿಂದ ಲಭ್ಯವಿರುವ ಏಕೈಕ ಹಾಗೂ ಹೆಚ್ಚು ಪರಿಣಾಮಕಾರಿ ಸಾಧನ ಮಾಹಿತಿ ಹಕ್ಕು ಕಾಯ್ದೆ. ತಮ್ಮ ಮೂಲಭೂತ ಹಕ್ಕುಗಳು ಹಾಗೂ ಪಡಿತರ, ಪಿಂಚಣಿ, ಆರೋಗ್ಯ ಸೇವೆಯಂತಹ ಸೌಲಭ್ಯಗಳನ್ನು ಪಡೆಯಲು ಈ ಕಾಯ್ದೆಯನ್ನು ಕಡು ಬಡವರು ಹಾಗೂ ಅಂಚಿಗೆ ತಳ್ಳಲ್ಪಟ್ಟವರು ಸೇರಿದಂತೆ ದೇಶದ 3 ಕೋಟಿಗೂ ಅಧಿಕ ಜನರು ಬಳಸಿದ್ದಾರೆ. ಅಲ್ಲದೆ ಈ ಕಾಯ್ದೆಯ ಅದ್ಭುತ ಸಾಮರ್ಥ್ಯವನ್ನು ಅರಿತುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X