Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದ ಶಾಲು, ಸ್ವಾಭಿಮಾನದ ಬಗ್ಗೆ ಕೆಟ್ಟ...

ಪಕ್ಷದ ಶಾಲು, ಸ್ವಾಭಿಮಾನದ ಬಗ್ಗೆ ಕೆಟ್ಟ ಮಾತಾಡಿದರೆ ಸುಮ್ಮನೆ ಕೂರಲಾರೆ: ಎಚ್‌ಡಿಕೆಗೆ ಡಿಕೆಶಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Dec 2020 11:27 PM IST
share
ಪಕ್ಷದ ಶಾಲು, ಸ್ವಾಭಿಮಾನದ ಬಗ್ಗೆ ಕೆಟ್ಟ ಮಾತಾಡಿದರೆ ಸುಮ್ಮನೆ ಕೂರಲಾರೆ: ಎಚ್‌ಡಿಕೆಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು, ಡಿ.9: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹಾಗೂ ಕಾರ್ಯಕರ್ತನಾಗಿ ನಮ್ಮ ಪಕ್ಷದ ಶಾಲಿನ ಬಗ್ಗೆ ಯಾರಾದರೂ ಹೀನಾಯವಾಗಿ ಮಾತನಾಡಿದರೆ, ಅದನ್ನು ನೋಡಿಕೊಂಡು ಸುಮ್ಮನೆ ಇರಲಾಗುವುದಿಲ್ಲ. ಪಕ್ಷ ಹಾಗೂ ವೈಯಕ್ತಿಕ ಸ್ವಾಭಿಮಾನ ಮಾರಿಕೊಳ್ಳುವುದಕ್ಕೆ ಸಿದ್ಧನಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಶಾಲಿನ ಬಗ್ಗೆ ಮಾಡಿರುವ ಟೀಕೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, 'ರೈತರು ಕರೆಕೊಟ್ಟ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ನಾನು ಹಸಿರು ಶಾಲನ್ನು ಹಾಕಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. ಇಡೀ ಕಾಂಗ್ರೆಸ್ ಪಕ್ಷ ರೈತರ ಪರವಾಗಿ ಧ್ವನಿ ಎತ್ತಿತ್ತು. ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಲಿಗೆ ವ್ಯಾಲ್ಯೂ ಇಲ್ಲ, ಹೀಗಾಗಿ ಹಸಿರು ಶಾಲು ಹಾಕಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಸ್ನೇಹಿತರು ಪಕ್ಷದ ಕಚೇರಿಯಲ್ಲಿ ಈ ಬಗ್ಗೆ ಕೇಳಿದಾಗ, 'ಇದೇ ಕಾಂಗ್ರೆಸ್ ಪಕ್ಷದ ಶಾಲೇ ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿಯನ್ನಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂದು ಬಹಳ ಗೌರವದಿಂದ ಪ್ರತಿಕ್ರಿಯಿಸಿದ್ದೆ. ಪಕ್ಷದ ಅಧ್ಯಕ್ಷನಾಗಿ, ಕಾರ್ಯಕರ್ತನಾಗಿ ನಮ್ಮ ಪಕ್ಷದ ತ್ರಿವರ್ಣ ಶಾಲಿನ ಬಗ್ಗೆ ಯಾರೇ ಹೀನಾಯವಾಗಿ ಮಾತನಾಡಿದಾಗ ಅದನ್ನು ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದರ ಗೌರವಕ್ಕೆ ಧಕ್ಕೆ ಆಗಲು ಬಿಡುವುದಿಲ್ಲ. ಆ ದೃಷ್ಟಿಯಿಂದ ನಾನು ನನ್ನ ಉತ್ತರ ಕೊಟ್ಟಿದ್ದೆ ಎಂದು ತಿಳಿಸಿದರು.

ಅವರು ಕೂಡ ಸಿಎಂ ಆಗಿದ್ದವರೆ, ಒಂದು ದಿನವಾದರೂ ನಾನು ಯಡಿಯೂರಪ್ಪನವರನ್ನಾಗಲಿ, ಈ ಸರ್ಕಾರದ ಯಾವುದಾದರೂ ಸಚಿವರನ್ನಾಗಲಿ ಮಧ್ಯರಾತ್ರಿ ಭೇಟಿ ಮಾಡಿ ಕೆಲಸ ಮಾಡಿಸಿಕೊಂಡಿದ್ದರೆ, ಅದನ್ನು ಸಾಬೀತುಪಡಿಸಲಿ. ಅವರು ಸಾಬೀತುಪಡಿಸಿದರೆ ನಾನು ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ. 10 ವರ್ಷದ ಹಿಂದೆ ಯಾವುದೋ ಮದುವೆಗೆ ಹೋದಾಗ ನಾವು ಖಾಸಗಿ ವಿಮಾನದಲ್ಲಿ ಇಬ್ಬರೂ ಜತೆಯಾಗಿ ವಾಪಸ್ ಬಂದೆವು. ಮರುದಿನ ವಿಧಾನಸೌಧದಲ್ಲಿ ದೊಡ್ಡ ಗಲಾಟೆ ನಡೆಯಿತು. ಆಗ ಯಡಿಯೂರಪ್ಪನವರು, ಶಿವಕುಮಾರ್ ಅವರೇ ಈ ಬಗ್ಗೆ ನನಗೆ ಹೇಳಲೇ ಇಲ್ಲ ಎಂದಿದ್ದರು. 

ಅನೇಕ ಸಂದರ್ಭದಲ್ಲಿ ನಾವು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತಿತರ ಕಡೆಗಳಲ್ಲಿ ಭೇಟಿ ಮಾಡಿರುತ್ತೇವೆ. ಆದರೆ ಎಂದಿಗೂ ನೀಚ ರಾಜಕಾರಣ ಮಾಡಿಲ್ಲ. ಆ ರಕ್ತ ಈ ಡಿ.ಕೆ. ಶಿವಕುಮಾರ್ ದೇಹದಲ್ಲಿ ಇಲ್ಲ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರೇ, ಕಳೆದ 30 ವರ್ಷಗಳಿಂದ ನಾನು ಯಾವ ರೀತಿ ಹೋರಾಟ ಮಾಡಿಕೊಂಡು ಬಂದಿದ್ದೀನಿ ಎಂದು ನೋಡಿದ್ದೀರಿ. ಯಾಕೋ ನಿಮಗೆ ಟೆನ್ಷನ್ ಇರಬಹುದು, ನಿಮಗೆ ನಿಮ್ಮದೇ ಆದ ರಾಜಕೀಯ ಸಮಸ್ಯೆಗಳು ಇರಬಹುದು. ನನಗೆ ಆ ಸಮಸ್ಯೆ ಇಲ್ಲ. ನಿಮ್ಮ ಕೆಳಗೆ ನಾನು ಕೆಲಸ ಮಾಡಿದ್ದೆ. ನಿಮಗೆ ನಾನು ಗೌರವ ನೀಡಿದ್ದೆ. ಇವತ್ತೂ ನೀಡುತ್ತೇನೆ, ನಾಳೆಯೂ ನೀಡುತ್ತೇನೆ. ನೀವು ನಿಮ್ಮ ಪಕ್ಷದ ಸಂಘಟನೆ ಮಾಡಿ, ಆದರೆ ನಮ್ಮ ಪಕ್ಷದ ಹಾಗೂ ವೈಯಕ್ತಿಕ ಸ್ವಾಭಿಮಾನ ಮಾರಿಕೊಳ್ಳುವುದಕ್ಕೆ ಸಿದ್ಧನಿಲ್ಲ ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X