Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಆರ್ ಪಿಎಫ್ ಟೀಮ್ ಕೋಚ್, ಮುಖ್ಯ...

ಸಿಆರ್ ಪಿಎಫ್ ಟೀಮ್ ಕೋಚ್, ಮುಖ್ಯ ಕ್ರೀಡಾಧಿಕಾರಿಯಿಂದ ಅತ್ಯಾಚಾರ: ಮಹಿಳಾ ಕಾನ್‍ಸ್ಟೇಬಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ10 Dec 2020 11:47 AM IST
share
ಸಿಆರ್ ಪಿಎಫ್ ಟೀಮ್ ಕೋಚ್, ಮುಖ್ಯ ಕ್ರೀಡಾಧಿಕಾರಿಯಿಂದ ಅತ್ಯಾಚಾರ: ಮಹಿಳಾ ಕಾನ್‍ಸ್ಟೇಬಲ್ ಆರೋಪ

ಹೊಸದಿಲ್ಲಿ : ಕುಸ್ತಿ ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ಗೆದ್ದಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್ ) 30 ವರ್ಷದ  ಮಹಿಳಾ ಕಾನ್‍ಸ್ಟೇಬಲ್ ಒಬ್ಬರು  ತಮ್ಮ ಟೀಮ್ ಕೋಚ್ ಹಾಗೂ ಇನ್‍ಸ್ಪೆಕ್ಟರ್ ಸುರ್ಜಿತ್ ಸಿಂಗ್ ಹಾಗೂ ಡಿಐಜಿ ಮತ್ತು ಮುಖ್ಯ ಕ್ರೀಡಾಧಿಕಾರಿ ಖಜಾನ್ ಸಿಂಗ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ಬೆದರಿಕೆಯ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

''ಸುರ್ಜಿತ್ ಸಿಂಗ್ ಹಾಗೂ ಖಜಾನ್ ಸಿಂಗ್  ತಮ್ಮ ಹಲವು ಸಹವರ್ತಿಗಳ ಜತೆ ಸೇರಿಕೊಂಡು ಮಹಿಳಾ ಕಾನ್‍ಸ್ಟೇಬಲ್‍ಗಳಿಗೆ ಕಿರುಕುಳ ನೀಡಿ ನಂತರ ಅವರನ್ನು ಬಳಸಿಕೊಳ್ಳುತ್ತಾರೆ'' ಎಂದು  ಬಾಬಾ ಹರಿದಾಸ್ ನಗರ್ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 3ರಂದು ದಾಖಲಾದ ದೂರಿನಲ್ಲಿ ಹೇಳಲಾಗಿದೆ. ಸಿಆರ್‍ ಪಿಎಫ್ ನಲ್ಲಿ ಡಿಐಜಿ ಆಗಿರುವ ಆರೋಪಿ ಖಜಾನ್ ಸಿಂಗ್  ಈಜು ಚಾಂಪಿಯನ್ ಆಗಿದ್ದು 1986ರ ಸಿಯೋಲ್ ಏಷ್ಯನ್ ಗೇಮ್ಸ್‍ನಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ ಹಾಗೂ ಅರ್ಜುನ ಪ್ರಶಸ್ತಿ ಪಡೆದವರೂ ಆಗಿದ್ದಾರೆ.

ಸಂತ್ರಸ್ತೆ ತನ್ನ ದೂರಿನಲ್ಲಿ ತಾನು ಸೆಂಟ್ರಲ್ ಕುಸ್ತಿ ತಂಡವನ್ನು 2012ರಲ್ಲಿ ಸೇರಿದ್ದಾಗಿ, ಆಗ ತಂಡದ ಕೋಚ್ ಆಗಿದ್ದ ಸುರ್ಜಿತ್ ಸಿಂಗ್ ತನಗೆ ಹಾಗೂ ತಂಡದ ಇತರ ಯುವತಿಯರಿಗೆ ತರಬೇತಿ ನೆಪದಲ್ಲಿ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದರು, ಯುವತಿಯರಿಗೆ ಅಶ್ಲೀಲ  ಸಂದೇಶ ಕಳುಹಿಸುತ್ತಿದ್ದರು. ಲೈಂಗಿಕ ಕಿರುಕುಳ ನೀಡಲೆಂದೇ ನಿಗದಿತ ಸಮಯಕ್ಕಿಂತ ಮೊದಲೇ ತರಬೇತಿಗೆ ಹಾಜರಾಗುವಂತೆ ಸೂಚಿಸುತ್ತಿದ್ದರು,'' ಎಂದು ಆರೋಪಿಸಿದ್ದಾರೆ.

``ಖಜಾನ್ ಸಿಂಗ್ ಸೂಚನೆಯಂತೆ ಸುರ್ಜಿತ್ ಸಿಂಗ್  ನಡೆದುಕೊಳ್ಳುತ್ತಿದ್ದರು, ಅಕ್ಟೋಬರ್-ನವೆಂಬರ್ 2014ರಲ್ಲಿ ವಸಂತ್ ಕುಂಜ್‍ನ ಫ್ಲ್ಯಾಟ್ ಒಂದಕ್ಕೆ ಕರೆದೊಯ್ದು ಇಬ್ಬರೂ ಸತತ ಮೂರು ದಿನ ಅತ್ಯಾಚಾರಗೈದಿದ್ದರು'' ಎಂದೂ ಆಕೆ ಆರೋಪಿಸಿದ್ದಾರೆ.

ಸಂತ್ರಸ್ತೆ ಭಟಿಂಡಾ ನಿವಾಸಿಯಾಗಿದ್ದು ಹೆರಿಗೆ ರಜೆ ನಂತರ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ದೂರನ್ನು ಆಕೆ ನೀಡಿದ್ದಾರೆನ್ನಲಾಗಿದೆ.

''ಸಿಆರ್‍ ಪಿಎಫ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ, ಪೊಲೀಸ್ ತನಿಖೆಗೂ ಸಹಕರಿಸಲಿದೆ'' ಎಂದು ಸಿಆರ್‍ ಪಿಎಫ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X