Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐತಿಹಾಸಿಕ ರೈತ ಹೋರಾಟದ ಮುಂಚೂಣಿ ನಾಯಕ...

ಐತಿಹಾಸಿಕ ರೈತ ಹೋರಾಟದ ಮುಂಚೂಣಿ ನಾಯಕ ಹನ್ನಾನ್ ಮುಲ್ಲಾ

ವಾರ್ತಾಭಾರತಿವಾರ್ತಾಭಾರತಿ10 Dec 2020 1:54 PM IST
share
ಐತಿಹಾಸಿಕ ರೈತ ಹೋರಾಟದ ಮುಂಚೂಣಿ ನಾಯಕ ಹನ್ನಾನ್ ಮುಲ್ಲಾ

ಕೋಲ್ಕತ್ತಾ :  ಮಂಗಳವಾರ ಸಂಜೆ ಕೆಲ ರೈತ ಮುಖಂಡರು ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಡುವೆ  ಮಾತುಕತೆಗಳು ವಿಫಲವಾದ ನಂತರ ಆ ಕುರಿತು ಪತ್ರಕರ್ತರಿಗೆ ಕಡ್ಡಿ ಮುರಿದಂತೆ ಪ್ರತಿಕ್ರಿಯಿಸಿದ್ದ  ಸಿಪಿಎಂ ಪಾಲಿಟ್ ಬ್ಯುರೋ ಸದಸ್ಯ ಹಾಗೂ ಆಲ್ ಇಂಡಿಯಾ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ, 76 ವರ್ಷದ  ಹನ್ನಾನ್ ಮುಲ್ಲಾ ಎಲ್ಲರ ಗಮನ ಸೆಳೆದಿದ್ದರು.  ''ಏನಿಲ್ಲ, ಕೋಳಿ ಕುಳಿತಿದ್ದರೂ ಮೊಟ್ಟೆ ಇಡಲೇ ಇಲ್ಲ'' ಎಂದು ಅವರು  ಹೇಳಿದ್ದರು.

ಅಷ್ಟಕ್ಕೂ ಮುಲ್ಲಾ ಅವರು ರೈತ ಆಂದೋಲನಕ್ಕೆ ಹೊಸಬರೇನಲ್ಲ. ಆದರೆ 2009ರಿಂದ ತೀರಾ ಇತ್ತೀಚಿಗಿನ ತನಕ ಅಷ್ಟೊಂದು ಸಕ್ರಿಯರಾಗಿಲ್ಲದೇ ಇದ್ದ ಮುಲ್ಲಾ ಅವರು ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿ ಆಯ್ಕೆಯಾದವರು  ಹಾಗೂ ದೇಶದ ವಿವಿಧೆಡೆಗಳಲ್ಲಿ ರೈತರ ಚಳುವಳಿಗೆ ಪುನಶ್ಚೇತನ ನೀಡಿದವರೆಂದೇ ಹೆಸರಾದವರು. 2018ರಲ್ಲಿ ಅವರು  ಪಶ್ಚಿಮ ಬಂಗಾಳದಲ್ಲಿ ಕಿಸಾನ್ ಲಾಂಗ್ ಮಾರ್ಚ್ ಸಂಘಟಿಸಿದ್ದರು. ಇದೀಗ ಅವರು ದಿಲ್ಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಹನ್ನಾನ್ ಮುಲ್ಲಾ ಅವರ ರಾಜಕೀಯ ಹಿನ್ನೆಲೆಯ ಹೊರತಾಗಿಯೂ ಪ್ರತಿಭಟನಾನಿರತ ರೈತರು ಅವರನ್ನು ಸ್ವೀಕರಿಸಿದ್ದಾರೆ. ``ಭೂಸ್ವಾಧೀನ ಮಸೂದೆಯ ವಿರುದ್ಧದ ಹೋರಾಟ, ಮಂಡ್ಸೌರ್ ಹೋರಾಟ ಹಾಗೂ ಈಗಿನ ರೈತರ ಪ್ರತಿಭಟನೆಗಳು,  ಈ  ಆಂದೋಲನಗಳನ್ನು ವ್ಯಾಪಕಗೊಳಿಸುವಲ್ಲಿ ಹನ್ನಾನ್ ಮುಲ್ಲಾ ಸಹಾಯ ಮಾಡಿದ್ದಾರೆ'' ಎಂದು ಕಿಸಾನ್ ಸಭಾ ರೋಹ್ಟಕ್ ಕಾರ್ಯದರ್ಶಿ ಸುರೀಂದರ್ ಸಿಂಗ್ ಹೇಳುತ್ತಾರೆ.

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸೆಣಬು ಮಿಲ್ ಕಾರ್ಮಿಕರೊಬ್ಬರ ಪುತ್ರರಾಗಿರುವ ಹನ್ನಾನ್ ಅವರು 60ರ ದಶಕದಲ್ಲಿ ಸಿಪಿಎಂ ಸೇರಿದ್ದರು. ಹೌರಾದ ಚೆಂಗೈಲ್ ಎಂಬಲ್ಲಿನ ಮದರಸಾದಲ್ಲಿ ತಮ್ಮ ಆರಂಭಿಕ ಶಿಕ್ಷಣ ಪಡೆದ ಅವರು  ಈಗ ವಿಶ್ವವಿದ್ಯಾಲಯವಾಗಿರುವ ಕೋಲ್ಕತ್ತಾದ ಪ್ರತಿಷ್ಠಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. 1980ರಲ್ಲಿ ಸಿಪಿಎಂ ರಾಜ್ಯ ಸಮಿತಿಗೆ ಸೇರ್ಪಡೆಗೊಂಡ ಅವರು ಮೂರು ದಶಕಗಳ ನಂತರ 2015ರಲ್ಲಿ ಪಾಲಿಟ್ ಬ್ಯುರೋ ಭಾಗವಾದರು. 1980ರಿಂದ 2009ರ ತನಕ ಅವರು ಉಲುಬೇರಿಯಾ ಸಂಸತ್ ಕ್ಷೇತ್ರವನ್ನು ಎಂಟು ಬಾರಿ ಪ್ರತಿನಿಧಿಸಿದ್ದಾರೆ. ಆದರೆ 2009ರ ಚುನಾವಣೆ ಸೋತ ನಂತರ ಅವರು ರಾಜಕೀಯ ಚಟುವಟಿಕೆಗಳಿಂದ ದೂರ ಸರಿದಿದ್ದರು.  ಸಿಂಗೂರ್‍ನಲ್ಲಿ 2008ರಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಪಕ್ಷದ ನಿಲುವಿನಿಂದ ಅವರು ಬೇಸತ್ತಿದ್ದರು.

ಈಗ ಅವರು ಹೆಚ್ಚಾಗಿ ಆಲ್ ಇಂಡಿಯಾ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿಯಾಗಿಯೇ ಪರಿಚಿತರು. ಅವರು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ನಿಕಟವರ್ತಿಯೂ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X