Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರ್ಡ್‍ಗಳ ಸಂಖ್ಯೆ ಹೆಚ್ಚಳಕ್ಕೆ...

ವಾರ್ಡ್‍ಗಳ ಸಂಖ್ಯೆ ಹೆಚ್ಚಳಕ್ಕೆ ಬಿಬಿಎಂಪಿ ವಿಧೇಯಕ

ಕಾಂಗ್ರೆಸ್-ಜೆಡಿಎಸ್ ಸದಸ್ಯರ ಅನುಪಸ್ಥಿತಿಯಲ್ಲಿ ವಿಧಾನಸಭೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ10 Dec 2020 5:31 PM IST
share
ವಾರ್ಡ್‍ಗಳ ಸಂಖ್ಯೆ ಹೆಚ್ಚಳಕ್ಕೆ ಬಿಬಿಎಂಪಿ ವಿಧೇಯಕ

ಬೆಂಗಳೂರು, ಡಿ. 10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 198 ವಾರ್ಡ್‍ಗಳ ಸಂಖ್ಯೆಯನ್ನು 243ಕ್ಕೆ ಏರಿಕೆ, ಮೇಯರ್, ಉಪಮೇಯರ್ ಅಧಿಕಾರಾವಧಿ 12 ತಿಂಗಳಿಂದ 30 ತಿಂಗಳಿಗೆ ಹೆಚ್ಚಳ, ವಲಯಗಳ ಸಂಖ್ಯೆ 15ಕ್ಕೆ ಏರಿಕೆ, ವಲಯವಾರು ಶಾಸಕರ ಅಧ್ಯಕ್ಷತೆಯಲ್ಲಿ ಸಲಹಾ ಸಮಿತಿ ರಚನೆಗೆ ಅವಕಾಶ ಕಲ್ಪಿಸುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕ-2020’ ಅನ್ನು ಕಾಂಗ್ರೆಸ್-ಜೆಡಿಎಸ್ ಸದಸ್ಯರ ಅನುಪಸ್ಥಿತಿಯಲ್ಲಿ ವಿಧಾನಸಭೆ ಒಪ್ಪಿಗೆ ನೀಡಿದೆ.

ಗುರುವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕವನ್ನು ಮಂಡಿಸಿದರು. ಬಿಬಿಎಂಪಿ ವಾರ್ಡ್‍ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಏರಿಕೆ ಮಾಡುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿ ಶಿಫಾರಸು ಮಾಡಿ ವರದಿ ಮಂಡನೆ ಮಾಡಿತ್ತು. ಈ ಸಮಿತಿಯ ವರದಿಯನ್ನೇ ಆಧರಿಸಿ ವಿಧೇಯಕ ಅಂಗೀಕಾರ ಮಾಡಲಾಗಿದೆ.

ಬಿಬಿಎಂಪಿಂ ಹೊರ ವಲಯದ 1.ಕಿ.ಮೀ ವ್ಯಾಪ್ತಿಯ ಗ್ರಾ.ಪಂ., ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ ಸೇರ್ಪಡೆ, 60-40 ವಿಸ್ತೀರ್ಣ ಮತ್ತು ಅದಕ್ಕೂ ಮೇಲ್ಪಟ್ಟ ಎಲ್ಲ ಮನೆಗಳಲ್ಲಿಯೂ ಮಳೆ ನೀರು ಕೊಯ್ಲು ಕಡ್ಡಾಯ ಮಾಡಲಾಗಿದೆ. ಕಲ್ಲು ಕ್ವಾರಿಗಳ ನಿಯಂತ್ರಣ ಅಧಿಕಾರವನ್ನು ಬಿಬಿಎಂಪಿಗೆ ನೀಡಲಾಗಿದೆ.

ನಗರದ ಜನಸಂಖ್ಯೆ ಹಾಗೂ ವಿಸ್ತೀರ್ಣವು ಹೆಚ್ಚಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು, ರಸ್ತೆ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಮತ್ತು ಸುಗಮ ಆಡಳಿತದ ದೃಷ್ಟಿಯಿಂದ ಈ ಬಿಬಿಎಂಪಿ ವಿಧೇಯಕವನ್ನು ತರಲಾಗಿದೆ. ಇದರಿಂದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ವಿಧೇಯಕ ಬೆಂಬಲಿಸಿ ಮಾತನಾಡಿದ ಅರವಿಂದ ಲಿಂಬಾವಳಿ, ಪಕ್ಷೇತರ ಸದಸ್ಯ ಶರತ್ ಬಚ್ಚೇಗೌಡ, ಮುನಿರತ್ನ, ನಗರದ ಹೊರ ವಲಯ ಗಳನ್ನು ಪಾಲಿಕೆಗೆ ಸೇರ್ಪಡೆ ಮಾಡಿ ವ್ಯಾಪ್ತಿ ಹೆಚ್ಚಳ ಮಾಡುವುದು ಸ್ವಾಗತಾರ್ಹ. ವಾರ್ಡ್‍ಗಳ ಪುನರ್ ವಿಂಗಡಣೆ ಮಾಡಬೇಕಿದ್ದು, ಜನರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ನೂತನ ಮಸೂದೆ ಅನುಕೂಲಕರ ಎಂದರು.

ಆ ಬಳಿಕ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್-ಜೆಡಿಎಸ್ ಸದಸ್ಯರ ಅನುಪಸ್ಥಿತಿಯಲ್ಲಿ ಮಹತ್ವದ ಬಿಬಿಎಂಪಿ ವಿಧೇಯಕಕ್ಕೆ ಮತಕ್ಕೆ ಹಾಕಿದ ಸಂದರ್ಭದಲ್ಲಿ ಬಿಬಿಎಂಪಿ ಮಸೂದೆಗೆ ಧ್ವನಿಮತದ ಅಂಗೀಕಾರ ದೊರೆಯಿತು. ಆದರೆ, ಬಿಬಿಎಂಪಿ ವಿಧೇಯಕಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿ ಸದಸ್ಯರು ಆಗಿರುವ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ‘ವಿಧೇಯಕವನ್ನು ಪರಾಮರ್ಶೆಗೆ ಒಳಪಡಿಸಬೇಕು. ತಜ್ಞರ ಅಭಿಪ್ರಾಯ ಪಡೆಯಬೇಕೆಂದು ಒತ್ತಾಯಿಸಿದ್ದಾರೆ. ವಿಕೇಂದ್ರೀಕರಣಕ್ಕೆ ಪೂರಕವಾದ ವಿಧೇಯಕ ಸಿದ್ಧಪಡಿಸಬೇಕು. ಆದರೆ, ತರಾತುರಿಯಲ್ಲಿ ವಿಧೇಯಕವನ್ನು ತಂದಿರುವುದು ಸರಿಯಲ್ಲ’ ಎಂದು ಆಕ್ಷೇಪಿಸಿದ್ದಾರೆ.

‘ಜಾಹೀರಾತಿನ ಮೇಲೆ ಯಾವುದೇ ತೆರಿಗೆ ವಿಧಿಸುವುದು ಅಲ್ಲದೆ, ಷರತ್ತುಗಳನ್ನು ಆಧರಿಸಿ ಒಂದು ವರ್ಷಕ್ಕೆ ಮೀರದ ಅವಧಿಗೆ ಗುತ್ತಿಗೆ ನೀಡಬಹುದು. ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಅಧಿಕಾರವನ್ನು ಪಾಲಿಕೆಗೆ ನೀಡಲಾಗಿದೆ. ಮನರಂಜನಾ ತೆರಿಗೆಯನ್ನು ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ’

-ಜೆ.ಸಿ.ಮಾಧುಸ್ವಾಮಿ ಕಾನೂನು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X