Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ...

ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‍ನದ್ದೇ ಆದ್ಯತೆ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Dec 2020 6:39 PM IST
share
ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‍ನದ್ದೇ ಆದ್ಯತೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.10: ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‍ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ವಿಚಾರವಾಗಿ ಇರುವ ಅನುಮಾನ, ಆತಂಕಗಳನ್ನು ಜೆಡಿಎಸ್ ನಿಷ್ಪಕ್ಷಪಾತವಾಗಿ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ, ರೈತ ಪ್ರತಿನಿಧಿಯಾಗಿ ಕೆಲಸ ಮಾಡಲಿಚ್ಛಿಸುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸರಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‍ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಫೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರಕಾರ ಇದಕ್ಕೆ ಪರಿಹಾರ ಹುಡುಕಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರಕಾರ ಮರೆತಂತಿದೆ ಎಂದು ಅವರು ಹೇಳಿದ್ದಾರೆ.

ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸದ್ಯ ಸರಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ.  ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ? ಎಂದು ಅವರು ಹೇಳಿದ್ದಾರೆ.

ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ? ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಈ ನಿಯಮಗಳು ರೈತ ಸರಕಾರಿ ಕಚೇರಿಗಳಿಗೆ ಅಲೆಯುವಂತೆ ಮಾಡುವುದರಲ್ಲಿ ಅನುಮಾನವಿಲ್ಲ. ಕೊನೆಗೆ ಇದು ಹೈನುಗಾರಿಕೆಗೆ ಪೆಟ್ಟು ಕೊಡುತ್ತದೆ ಎಂದು ಅವರು ಹೇಳಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಯು ಗೋವಿನ ಹತ್ಯೆಯನ್ನು ತಡೆಯುವ ಸ್ವರೂಪದ್ದಾಗಿದೆಯಾದರೂ, ರೈತರನ್ನು ಸರಕಾರಿ ಕಚೇರಿಗಳಿಗೆ ಅಲೆದಾಡಿಸುವ ಸಾಕಷ್ಟು ಸನ್ನಿವೇಶಗಳನ್ನೂ ಬಲವಂತವಾಗಿ ಸೃಷ್ಟಿ ಮಾಡುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಲೇಬೇಕು. ಇದಕ್ಕೆ ಸರಕಾರ ಸೂಕ್ತ ಪರಿಹಾರ, ಮಾರ್ಗೋಪಾಯಗಳನ್ನು ಸೂಚಿಸಬೇಕು. ಇಲ್ಲವಾದರೆ, ಇದು ರೈತ ವಿರೋಧಿಯಾಗಲಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಗೋವುಗಳು ಹೇಗೆ ನಮಗೆ ಪೂಜನೀಯವೋ, ರೈತನೂ ಪೂಜನೀಯವೇ. ಗೋ ಹತ್ಯೆಯನ್ನು ತಡೆಯುವ ನಮ್ಮ ಪ್ರಯತ್ನದಲ್ಲಿ ರೈತನನ್ನು ಶೋಷಿಸುವ ವ್ಯವಸ್ಥೆಗೆ ದೂಡುವುದು ಯಾವ ನ್ಯಾಯ? ಕಾಯ್ದೆಯು ರೈತನ್ನು ಸಂಕಷ್ಟಕ್ಕೆ ದೂಡಬಾರದು ಎಂಬುದಷ್ಟೇ ನನ್ನ ಆಶಯ.

ಜೆಡಿಎಸ್‍ಗೆ ಈ ವಿಚಾರದಲ್ಲಿ ಯಾವ ಮತಬ್ಯಾಂಕ್‍ನ ಓಲೈಕೆಯೂ ಬೇಕಿಲ್ಲ. ರೈತನ ಹಿತ ರಕ್ಷಣೆಯಾದರೆ ಸಾಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರೈತ ತಾನು ಪೋಷಿಸಿದ ಗೋವನ್ನು ಅಥವಾ ಯಾವುದೇ ಪ್ರಾಣಿಯನ್ನು ವಧೆಗಾಗಿ ಕೊಡಲು ಮನಃಪೂರ್ವಕವಾಗಿ ಒಪ್ಪಲಾರ. ಆದರೆ, ಅದು ಅವನಿಗೆ ಅನಿವಾರ್ಯ. ಗೋಹತ್ಯೆಯನ್ನು ನಿಷೇಧಿಸಬೇಕಿದ್ದರೆ, ಆತನ ಅನಿವಾರ್ಯತೆಯನ್ನು ನಾವು ಹೋಗಲಾಡಿಸಬೇಕು. ರೈತನಿಗೆ ಹೊರೆ ಸೃಷ್ಟಿಸುವ ಜಾನುವಾರುಗಳ ರಕ್ಷಣೆಯನ್ನು ಸರಕಾರವೇ ಮಾಡಲಿ. ಗೋವಿನ ಜೊತೆಗೆ ರೈತನನ್ನೂ ರಕ್ಷಿಸಲಿ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್‌ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್‌ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ ಕೆಲಸ ಮಾಡಲಿದೆ. 2/14

— H D Kumaraswamy (@hd_kumaraswamy) December 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X