ಜನರ ಸಂಕಷ್ಟಕ್ಕೆ ಧ್ವನಿಯಾಗದ ಸರಕಾರ : ಉಡುಪಿ ಜಿಲ್ಲಾ ಕಾಂಗ್ರೆಸ್
ತೈಲ, ಎಲ್ಪಿಜಿ ಬೆಲೆ ಏರಿಕೆ
ಉಡುಪಿ, ಡಿ.10: ಕೇಂದ್ರದಲ್ಲಿ ಮೋದಿ ನೇತೃತ್ವದಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ನಿರಂತರ ವಾಗಿ ಏರುಗತಿಯತ್ತ ಸಾಗುತ್ತಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲಗಳ ಬೆಲೆ ಕಡಿಮೆ ಯಿದ್ದರೂ ದೇಶದಲ್ಲಿ ಅನಿಯಂತ್ರಿತವಾಗಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ಟೀಕಿಸಿದೆ.
ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಜನರಿಗೆ ಹೊರೆಯಾಗದ ರೀತಿಯಲ್ಲಿ ಸ್ವಲ್ಪಏರಿಕೆ ಕಂಡರೂ ಅದನ್ನೇ ನೆಪವಾಗಿರಿಸಿಕೊಂಡು ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತು.. ಆದರೆ ಈಗ ದಿನಂಪ್ರತಿ ಬೆಲೆ ಏರಿಕೆಕಂಡರೂ ಬಿಜೆಪಿ ಪಕ್ಷದ ನಾಯ ಕರು ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರವಿಲ್ಲದಾಗ ಜನಪರ ಕಾಳಜಿಯ ನಾಟಕವಾಡುವ ಬಿಜೆಪಿ ಅಧಿಕಾರ ಪಡೆದಾಗ ಜನವಿರೋಧಿ ನಿಲುವು ತೆಗೆದುಕೊಳ್ಳುವುದು ಖಂಡನೀಯ ಎಂದು ಕಾಂಗ್ರೆಸ್ ಹೇಳಿದೆ.
ಪೆಟ್ರೋಲ್ ದರ ಏರಿಕೆಯಿಂದ ಸಾರಿಗೆ ಹಾಗೂ ಸರಕು ಸಾಗಣೆ ದರ ಹೆಚ್ಚಳ, ಅದರಿಂದಉತ್ಪಾದಕ ವಸ್ತುಗಳ ಬೆಲೆ ಏರಿಕೆ, ಇದರಿಂದ ನಮ್ಮ ಅರ್ಥ ವ್ಯವಸ್ಥೆಗೆ ಹೊಡೆತ ಬೀಳಲಿದೆ. ಆದರೆ ಸರಕಾರ ಲಾಕ್ಡೌನ್ ಬಳಿಕ ಮಾರುಕಟ್ಟೆ ಚೇತರಿಸಲು ಪೂರಕ ಸನ್ನಿವೇಶ ಒದಗಿಸುವ ಬದಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕೊಡುಗೆ ನೀಡಿ ಹಣದುಬ್ಬರದಿಂದ ಜನತೆ ಇನ್ನಷ್ಟು ಸಂಕಷ್ಟ ಪಡುವಂತಾಗಿದೆ. ಬಡವರನ್ನು ಅತಿಯಾಗಿ ಬಾಧಿಸುವ ತೈಲ, ಅಡುಗೆ ಅನಿಲ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರಕಟಣೆ ದೂರಿದೆ.
ಕೊರೋನ ಸೋಂಕಿನ ಭೀತಿಯಿಂದ ಆರ್ಥಿಕವಾಗಿ ಕಂಗೆಟ್ಟಿರುವ ಜನತೆ ಚೇತರಿಸಿಕೊಳ್ಳುವ ಮೊದಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಬ್ಸಿಡಿಯುಕ್ತ ಅನಿಲ (ಎಲ್ಪಿಜಿ) ಸಿಲಿಂಡರ್ ದರದಲ್ಲೂ 50ರೂ. ಸದ್ದಿಲ್ಲದೆ ಏರಿಕೆಯಾಗಿದೆ. ಈ ಹಿಂದೆ ಸಬ್ಸಿಡಿ ಮೊತ್ತವನ್ನು ಗ್ರಾಹಕರು ಸಿಲಿಂಡರ್ ಖರೀದಿಸಿದ ನಂತರ ಅವರ ಬ್ಯಾಂಕ್ಖಾತೆಗೆ ಹಾಕಲಾಗುತ್ತಿತ್ತು. ಆದರೆ ಕಳೆದ 6 ತಿಂಗಳಿಂದ ಎಲ್ಪಿಜಿ ಸಬ್ಸಿಡಿ ಬಿಡುಗಡೆಯಾಗು ತ್ತಿಲ್ಲ. ವಿವಿಧ ತೆರಿಗೆಗಳಿಂದ ಜನರನ್ನು ಲೂಟಿ ಮಾಡಿ ತಮ್ಮ ಅಧಿಕಾರವನ್ನು ಭದ್ರಪಡಿಸಿಕೊಳ್ಳುವುದೇ ಸರಕಾರದ ಉದ್ದೇಶವಾದರೆ ಜನರ ಸಂಕಷ್ಟಕ್ಕೆ ಸ್ಪಂದಿಸುವವರು ಯಾರು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ರಾವ್ ಕಿದಿಯೂರು ಸರಕಾರವನ್ನು ಪ್ರಶ್ನಿಸಿದ್ದಾರೆ.







